ಶ್ರಮದಾನ ಮೂಲಕ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ತಡೆಗೋಡೆ ನಿರ್ಮಾಣ
Team Udayavani, Mar 11, 2021, 5:00 AM IST
ಪುಂಜಾಲಕಟ್ಟೆ: ಕಳೆದ ಮಳೆಗಾಲದಲ್ಲಿ ಕುಸಿದು ಬಿದ್ದಿದ್ದ ಭೂ ಕೈಲಾಸ ಪ್ರತೀತಿಯ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ತಡೆಗೋಡೆಯನ್ನು ಗ್ರಾಮಸ್ಥರೇ ಸೇರಿ ಶ್ರಮದಾನದ ಮೂಲಕ ದುರಸ್ತಿ ಮಾಡಿದ್ದಾರೆ.
ಎತ್ತರದ ಶಿಲಾಬಂಡೆಯ ಮೇಲಿರುವ ದೇವಾಲಯದ ಒಂದು ಪಾರ್ಶ್ವದ ತಡೆಗೋಡೆಯನ್ನು ಪುನರ್ ನಿರ್ಮಿಸಲು ಕೆಳಭಾಗದಲ್ಲಿರುವ ಶ್ರೀ ಪಾರ್ವತಿ ಸನ್ನಿಧಿ ಬಳಿಯಿಂದ ಜನರು ಕಲ್ಲು, ಸಿಮೆಂಟು,ಮರಳುಗಳನ್ನು ತಲೆ ಹೊರೆಯ ಮೂಲಕ ಹೊತ್ತು ತಂದು ಕಾಮಗಾರಿ ನಡೆಸಿದ್ದಾರೆ. ಕಾಮಗಾರಿಗೆ ಬೇಕಾದ ಕಲ್ಲು, ಸಿಮೆಂಟು, ಮರಳು,ಕಬ್ಬಿಣ ಸರಳು, ಊಟೋಪಚಾರಗಳನ್ನು ದಾನಿಗಳು ನೀಡಿದ್ದು, ಒಂದು ವಾರದಲ್ಲಿ ಕೆಲಸವನ್ನು ಪೂರ್ಣಗೊಳಿಸಿ ಭಕ್ತರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕಳೆದ ಅಕ್ಟೋಬರ್ 14ರಂದು ಕಾರಿಂಜೇಶ್ವರ ದೇವಸ್ಥಾನದ ಒಂದು ಭಾಗದ ತಡೆಗೋಡೆ ಕುಸಿದು ಬಿದಿದ್ದು ಆಗ ಕೆಲವು ಆರೋಪ ಕೇಳಿ ಬಂದಿತ್ತು. ಘಟನೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ. ರಮಾನಾಥ ರೈ, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳ ತಂಡ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ತಡೆಗೋಡೆ ಪುನರ್ ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳುವ ಬಗ್ಗೆ ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಈ ನಡುವೆ ಭಕ್ತರು ಶ್ರಮದಾನದ ಮೂಲಕ ತಡೆಗೋಡೆ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Mollywood: ಸೂಪರ್ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಗೆ ಡೇಟ್ ಫಿಕ್ಸ್
UV Fusion: ಜೀವನವನ್ನು ಪ್ರೀತಿಸೋಣ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್