ನ್ಯಾಯದಾನ ವ್ಯವಸ್ಥೆ ಕರ್ನಾಟಕಕ್ಕೆ ಅಗ್ರಸ್ಥಾನ: 18 ದೊಡ್ಡ ರಾಜ್ಯಗಳ ಪೈಕಿ ವಿಶೇಷ ಸಾಧನೆ


Team Udayavani, Apr 5, 2023, 7:27 AM IST

ನ್ಯಾಯದಾನ ವ್ಯವಸ್ಥೆ ಕರ್ನಾಟಕಕ್ಕೆ ಅಗ್ರಸ್ಥಾನ: 18 ದೊಡ್ಡ ರಾಜ್ಯಗಳ ಪೈಕಿ ವಿಶೇಷ ಸಾಧನೆ

ಹೊಸದಿಲ್ಲಿ: ಬಂಡವಾಳ ಹೂಡಿಕೆ, ಕೈಗಾರಿಕ ಕ್ಷೇತ್ರ ಸಹಿತ ಹಲವು ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಕರ್ನಾಟಕ ಮತ್ತೊಂದು ಹೆಗ್ಗಳಿಕೆಯ ಸಾಧನೆ ಮಾಡಿದೆ.

ಪೊಲೀಸ್‌, ಕಾನೂನು ನೆರವು, ನ್ಯಾಯಾಂಗ ವ್ಯವಸ್ಥೆ, ಕಾರಾಗೃಹ ವ್ಯವಸ್ಥೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದಕ್ಕಾಗಿ ದೇಶದ 18 ದೊಡ್ಡ ಮತ್ತು ಮಧ್ಯಮ ಗಾತ್ರ ರಾಜ್ಯಗಳ ವ್ಯಾಪ್ತಿಯಲ್ಲಿ ಅಗ್ರ ಸ್ಥಾನ ಪಡೆದಿದೆ.

ಮಂಗಳವಾರ ಪ್ರಕಟಗೊಂಡ 2022ನೇ ಸಾಲಿನ “ಇಂಡಿಯಾ ಜ್ಯುಡಿಶಿಯಲ್‌ ರಿಪೋರ್ಟ್‌’ನಲ್ಲಿ ಈ ಅಂಶ ಪ್ರಸ್ತಾವಿಸಲಾಗಿದೆ.

ಇದರ ಜತೆಗೆ ರಾಜ್ಯದ ಕಾರಾಗೃಹಗಳ ಒಟ್ಟು ಸಿಬಂದಿ ಪೈಕಿ ಶೇ.32 ಮಂದಿ ಮಹಿಳೆಯರೇ ಆಗಿದ್ದಾರೆ. ಬೇರೆ ಯಾವ ರಾಜ್ಯದಲ್ಲಿಯೂ ಕೂಡ ಇಂಥ ಸಾಧನೆ ಮಾಡಿಲ್ಲ ಎಂದು ಪ್ರಶಂಸಿಸಲಾಗಿದೆ.

ಐದು ವರ್ಷಗಳಿಗೆ ಹೋಲಿಕೆ ಮಾಡಿದರೆ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೋಲಿಕೆ ಮಾಡಿದರೆ ಒಟ್ಟು ಸಿಬಂದಿಯ ಪೈಕಿ ಮಹಿಳೆಯ ಸಂಖ್ಯೆ ಶೇ.10ನ್ನು ಮೀರುವುದಿಲ್ಲ ಎಂದು ವರದಿಯಲ್ಲಿ ಅಭಿಪ್ರಾಯ ಪಡಲಾಗಿದೆ. ತಮಿಳುನಾಡು, ತೆಲಂಗಾಣ ಈ ವ್ಯಾಪ್ತಿಯಲ್ಲಿ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದಿವೆ.

ಶೇ.77 ವಿಚಾರಣಾಧೀನ ಕೈದಿಗಳು: ದೇಶದ ಹೆಚ್ಚಿನ ಕಾರಾಗೃಹಗಳಲ್ಲಿ ಬಂದಿಗಳಾಗಿ ಇರುವವರ ಪೈಕಿ ಶೇ.77 ಮಂದಿ ವಿಚಾರಣಾಧೀನ ಕೈದಿಗಳು. ಶೇ.22 ಮಂದಿ ಮಾತ್ರ ಅಪರಾಧಗಳಿಗೆ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ ಎಂದು ವರದಿಯಲ್ಲಿ ಆತಂಕ ಪಡಲಾಗಿದೆ. 2010ರ ಬಳಿಕ ದೇಶದ ಜೈಲುಗಳಲ್ಲಿ 2.4 ಲಕ್ಷ ಮಂದಿ ಇದ್ದ ವಿಚಾರಣಾಧೀನ ಕೈದಿಗಳ ಸಂಖ್ಯೆ 2021ರ ವೇಳೆಗೆ 4.3 ಲಕ್ಷ ಮಂದಿಗೆ ಏರಿಕೆಯಾಗಿದೆ. ಅಂದರೆ ಶೇ.78 ಹೆಚ್ಚಳವಾಗಿದೆ.

ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ, ಅರುಣಾಚಲ ಪ್ರದೇಶ, ಮಿಜೋರಾಂ, ತ್ರಿಪುರಾ ಮತ್ತು ಮಧ್ಯ ಪ್ರದೇಶಗಳನ್ನು ಹೊರತುಪಡಿಸಿ ಇತರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಚಾರಣಾಧೀನ ಕೈದಿಗಳ ಪ್ರಮಾಣವೇ ಶೇ.60ನ್ನು ಮೀರಿಸಿದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

ಹರಿಯಾಣದಲ್ಲಿ ಹೆಚ್ಚು: 18 ದೊಡ್ಡ ಮತ್ತು ಮಧ್ಯಮ ಗಾತ್ರ ರಾಜ್ಯಗಳ ಪೈಕಿ ಹರಿಯಾಣದ ಜೈಲುಗಳಲ್ಲಿ ಅತ್ಯಂತ ಹೆಚ್ಚಿನ ಕೈದಿಗಳಿದ್ದಾರೆ. ತಮಿಳುನಾಡಿನ 139 ಜೈಲುಗಳಲ್ಲಿ 15ರಲ್ಲಿ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕೈದಿಗಳಿದ್ದಾರೆ. ಸಣ್ಣ ರಾಜ್ಯಗಳ ಪೈಕಿ ಮೇಘಾಲಯದಲ್ಲಿ 5ರ ಪೈಕಿ 4ರಲ್ಲಿ ಮಿತಿಗಿಂತ ಹೆಚ್ಚಿನ ಕೈದಿಗಳಿದ್ದಾರೆ. ಅನಂತರದ ಸ್ಥಾನದಲ್ಲಿ ಹಿಮಾಚಲ ಪ್ರದೇಶ ಇದೆ. ಆ ರಾಜ್ಯದ 23ರ ಪೈಕಿ 14ರಲ್ಲಿ ಮಿತಿಗಿಂತ ಹೆಚ್ಚಿನ ಬಂದಿಗಳು ಇದ್ದಾರೆ.

ವರದಿಯ ಅಂಶಗಳು
-ಬೇಕಾಗಿರುವ 1,391 ಜೈಲು ಸಿಬಂದಿಯ ಪೈಕಿ ಇರುವುದು 886 ಮಾತ್ರ
-ಪ್ರತೀ 625 ಕೈದಿಗಳಿಗೆ ಒಬ್ಬ ಸಿಬಂದಿ ಇದ್ದಾನೆ.
-2019ರಲ್ಲಿ ದೇಶದ ಜೈಲುಗಳಲ್ಲಿ ತೆರವಾಗಿದ್ದ ಹುದ್ದೆಗಳ ಪ್ರಮಾಣ ಶೇ.42
-23 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಜೈಲುಗಳಲ್ಲಿ ಬಂದಿಗಳ ಸಂಖ್ಯೆ ಮಿತಿಗಿಂತ ಹೆಚ್ಚು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.