ಕೃಷಿ ಮಸೂದೆ ಅಂಗೀಕಾರ ! ನಾಳೆ ರೈತ ಸಂಘಟನೆಗಳಿಂದ ರಾಜ್ಯ ಬಂದ್‌


Team Udayavani, Sep 27, 2020, 6:50 AM IST

ಕೃಷಿ ಮಸೂದೆ ಅಂಗೀಕಾರ ! ನಾಳೆ ರೈತ ಸಂಘಟನೆಗಳಿಂದ ರಾಜ್ಯ ಬಂದ್‌

ಬೆಂಗಳೂರು: ರೈತ ಸಂಘಟನೆಗಳು ಮತ್ತು ವಿಪಕ್ಷಗಳ ವಿರೋಧದ ನಡುವೆಯೇ ರಾಜ್ಯ ಸರಕಾರವು ಭೂಸುಧಾರಣೆ ತಿದ್ದುಪಡಿ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ಅಂಗೀಕರಿಸಿದೆ.

ಈ ಎರಡೂ ಕಾಯ್ದೆಗಳನ್ನು ವಿರೋಧಿಸುತ್ತಿರುವ ರೈತ ಸಂಘಟನೆಗಳು ಈಗಾಗಲೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಸೋಮವಾರ ರಾಜ್ಯ ಬಂದ್‌ಗೆ ಕರೆ ನೀಡಿವೆ. ಇದು ರೈತರ ಮರಣ ಶಾಸನ ಎಂದು ಆರೋಪಿಸಿದ ಕಾಂಗ್ರೆಸ್‌ ಸದಸ್ಯರು ಮಸೂದೆಯ ಪ್ರತಿಯನ್ನು ಹರಿದು ಹಾಕಿದರಲ್ಲದೆ, ಸಭಾತ್ಯಾಗ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಇದರ ಹಿಂದೆಯೇ ಜೆಡಿಎಸ್‌
ಸದಸ್ಯರೂ ಸಭಾತ್ಯಾಗ ಮಾಡಿದರು.

ಪರ-ವಿರೋಧ ಚರ್ಚೆ
ಮಸೂದೆ ಮಂಡಿಸಿದ ಕಂದಾಯ ಸಚಿವ ಆರ್‌. ಅಶೋಕ್‌, ರೈತರಿಗೆ ಇದರಿಂದ ಯಾವುದೇ ಕಾರಣಕ್ಕೂ ತೊಂದರೆಯಾಗದು ಎಂದರು. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ರೈತರ ಸಹಿತ ಬಹುತೇಕರ ವಿರೋಧವಿದೆ. ಯಾವ ಉದ್ದೇಶಕ್ಕಾಗಿ ಭೂ ಸುಧಾರಣೆಗಳ ಕಾಯ್ದೆಯನ್ನು ದೇವರಾಜ ಅರಸು ಅವರು ತಂದಿದ್ದರೋ ಆ ಮೂಲ ಆಶಯಕ್ಕೆ ಇದು ವಿರುದ್ಧವಾಗಿದೆ. ಇದರ ಹಿಂದೆ ಬೇರೆಯದೇ ಉದ್ದೇಶವಿದೆ ಎಂದು ಆರೋಪಿಸಿದರು.

ಜೆಡಿಎಸ್‌ ಸಹಮತ
ಅಚ್ಚರಿ ಬೆಳವಣಿಗೆಯಲ್ಲಿ ಈ ಮಸೂದೆಗೆ ಜೆಡಿಎಸ್‌ ಸಹಮತ ವ್ಯಕ್ತಪಡಿಸಿತು. ಆದರೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಮಾತನಾಡಿ, ಈ ಮಸೂದೆಯನ್ನು ಕೊರೊನಾ ಸಂದರ್ಭದಲ್ಲಿ ಅಧ್ಯಾದೇಶ ಮೂಲಕ ತಂದ ಅಗತ್ಯದ ಬಗ್ಗೆ ಪ್ರಶ್ನಿಸಿದರು. ಜಮೀನು ಖರೀದಿ ಮಿತಿ ಹೆಚ್ಚು ಮಾಡಿರುವುದರಿಂದ ಮತ್ತೆ ಜಮೀನ್ದಾರಿ ಪದ್ಧತಿಯತ್ತ ಹೋಗುವಂತಾಗುತ್ತದೆ ಎಂದು ಹೇಳಿದರಾದರೂ ಇದರಿಂದ ರೈತರಿಗೆ ಎಷ್ಟು ಅನುಕೂಲ ಎಂಬ ಬಗ್ಗೆ ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು .
“ನನ್ನ ಬೆಳೆ, ನನ್ನ ಹಕ್ಕು’ ತಿದ್ದುಪಡಿ ಮಸೂದೆಯಂತೆ ರೈತರು ತಾವು ಬೆಳೆದ ಬೆಳೆಗಳನ್ನು “ನನ್ನ ಬೆಳೆ ನನ್ನ ಹಕ್ಕು’ ಎಂಬಂತೆ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದು ಎಂದು ಸಹ ಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ವಿವರಣೆ ನೀಡಿದರು.

ನಾಳೆ ಬಂದ್‌
ಮಸೂದೆಗಳಿಗೆ ಒಪ್ಪಿಗೆ ಸಿಕ್ಕಿರುವಂತೆಯೇ ರೈತರ ಆಕ್ರೋಶವೂ ಹೆಚ್ಚಾಗಿದೆ. ಸೋಮವಾರ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಜನ ಸಂಪೂರ್ಣ ಸಹಕಾರ ನೀಡಬೇಕು ಎಂದು ಐಕ್ಯ ಹೋರಾಟ ವೇದಿಕೆ ಮುಖಂಡರು ಮನವಿ ಮಾಡಿದ್ದಾರೆ.
ಬಂದ್‌ಗೆ ಕಬಿನಿ ರೈತ ಹಿತರಕ್ಷಣ ಸಮಿತಿ, ರಾಜ್ಯ ಕೃಷಿ ಪಂಪ್‌ಸೆಟ್‌ ಬಳಕೆದಾರರ ಸಂಘ, ಮಹಾದಾಯಿ ನೀರು ಹೋರಾಟ ಸಮಿತಿ, ಕರ್ನಾಟಕ ರಕ್ಷಣ ವೇದಿಕೆ ಸಹಿತ ಹಲವು ರೈತ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ಬೆಂಬಲ ನೀಡಿವೆ.

ಕರಾವಳಿಯಲ್ಲೂ ಬೆಂಬಲ
ಸೋಮವಾರ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಪ್ರತಿಭಟನ ಸಭೆ, ಮೆರವಣಿಗೆ, ರಸ್ತೆ ತಡೆ ನಡೆಯಲಿದೆ. ಬಸ್‌ ಸಂಚಾರ ನಿಲ್ಲಿಸುವ ಬಗ್ಗೆ ಸೂಚನೆ ಬಂದಿಲ್ಲ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿ ಬಸ್‌ ಸಂಚಾರ ಇರಲಿದೆ ಎಂದು ದ.ಕ. ಬಸ್‌ ಮಾಲಕರ ಸಂಘ ತಿಳಿಸಿದೆ.

ಏನೆಲ್ಲ ಇರುತ್ತವೆ?
ಆಸ್ಪತ್ರೆ, ಔಷಧ ಮಳಿಗೆ, ಹಣ್ಣು , ತರಕಾರಿ, ಹಾಲು ದಿನಪತ್ರಿಕೆ, ಹೊಟೇಲ್‌, ಲಾರಿಗಳ ಸಂಚಾರ, ಟ್ಯಾಕ್ಸಿ ಗಳು, ಪ್ರವಾಸಿ ವಾಹನಗಳು, ಕೆಎಸ್ಸಾರ್ಟಿಸಿ ಬಸ್‌ ಸಂಚಾರ, ಮೆಟ್ರೋ.

ಯಾವುದು ಇಲ್ಲ?
ಎಪಿಎಂಸಿ ಮಾರುಕಟ್ಟೆ, ಸಿಟಿ ಮಾರುಕಟ್ಟೆ, ರಸ್ತೆ ಬದಿ ವ್ಯಾಪಾರ, ಓಲಾ, ಉಬರ್‌.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.