ಕರ್ನಾಟಕ ಬಜೆಟ್ 2022: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್- ಜಾತಿವಾರು ಅನುದಾನ ಘೋಷಣೆ
ಶಿವಶರಣೆ ನಲೂರು ನಿಂಬೆಕ್ಕರವರ ಜನ್ಮಸ್ಥಳ ಅಭಿವೃದ್ಧಿ
Team Udayavani, Mar 4, 2022, 3:57 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ(ಮಾರ್ಚ್ 04) ಮಂಡಿಸಿರುವ ತಮ್ಮ ಚೊಚ್ಚಲ ಬಜೆಟ್ ನಲ್ಲಿ ಬಹುತೇಕ ಜಾತಿವಾರು ಅನುದಾನ ಘೋಷಿಸಿದ್ದು, ಕುಂಬಾರ, ಯಾದವ, ದೇವಾಡಿಗ, ಸಿಂಪಿ, ಕ್ಷತ್ರೀಯ, ಮೇದಾರ, ಕುಂಚಿ, ಕುರ್ಮ, ಪಿಂಜಾರ/ನದಾಫ್, ಕುರುಬ, ಬಲಿಜ, ಈಡಿಗ, ಹಡಪದ ಹಾಗೂ ಇತರೆ ಜನಾಂಗದ ಅಭಿವೃದ್ಧಿಗೆ 400 ಕೋಟಿ ರೂ. ಮೊತ್ತದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ಜಾತಿವಾರು ಅನುದಾನ ವಿವರ:
*ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನು ಈಗಾಗಲೇ ಘೋಷಿಸಿದ್ದು, ಪ್ರಸಕ್ತ ಸಾಲಿನಲ್ಲಿ ತಲಾ 100 ಕೋಟಿ ರೂ.ಗಳ ಮೊತ್ತದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು.
* ಮರಾಠ ಅಭಿವೃದ್ಧಿ ನಿಗಮದ ಮೂಲಕ 50 ಕೋಟಿ ರೂ.ಗಳ ಮೊತ್ತದಲ್ಲಿ ಅಭಿವೃದ್ಧಿ ಕಾರ್ಯಕ್ರಮ ರೂಪಿಸಲಾಗುವುದು.
* ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ 10 ಕೋಟಿ ರೂ.
*ಶಿವಶರಣೆ ನಲೂರು ನಿಂಬೆಕ್ಕರವರ ಜನ್ಮಸ್ಥಳ ಅಭಿವೃದ್ಧಿ
*ಶ್ರೀಮಡಿವಾಳ ಮಾಚಿದೇವ ಮೂಲಸ್ಥಾನ ದೇವರಹಿಪ್ಪರಗಿಯನ್ನು ಅಭಿವೃದ್ದಿಗೊಳಿಸಿ ಸಾರ್ವಜನಿಕ ಯಾತ್ರಾ ಸ್ಥಳವನ್ನಾಗಿ ಮಾಡಲಾಗುವುದು.
*ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಓದುತ್ತಿರುವ ಮಕ್ಕಳಿಗೆ ಸ್ಪೋಕನ್ ಇಂಗ್ಲಿಷ್ ಮತ್ತು ವ್ಯಕ್ತಿತ್ವ ವಿಕಸನದ ತರಬೇತಿಗಳನ್ನು ಐದು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು
*ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ 100 ವಿದ್ಯಾರ್ಥಿನಿಲಯಗಳಲ್ಲಿ ತಲಾ 25 ದಾಖಲಾತಿ ಸಂಖ್ಯೆ ಹೆಚ್ಚಿಸಲು 10 ಕೋಟಿ ರೂ. ಅನುದಾನ
*ನಾಡಿನ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ
* ಜೈನ್, ಸಿಖ್ ಮತ್ತು ಬೌದ್ಧ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಅನುದಾನ
*ಅಲ್ಪ ಸಂಖ್ಯಾತರ ಇಲಾಖೆಯಡಿಯಲ್ಲಿನ ಪರವಾನಗಿ ಪಡೆದಿರುವ ಬೀದಿ ಬದಿ ವ್ಯಾಪಾರಿಗಳು, ತಳ್ಳುಗಾಡಿ, ಹೂ ಮಾರಾಟಗಾರರು, ಸಣ್ಣಪುಟ್ಟ ತರಕಾರಿ ಮತ್ತು ಹಣ್ಣು ವ್ಯಾಪಾರಿಗಳಿಗೆ ಹಾಗೂ ಆಟೋ ಚಾಲಕರಿಗೆ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸಹಯೋಗದೊಂದಿಗೆ ಆರ್ಥಿಕ ಸಹಾಯ.