ಆರ್ಥಿಕ ಚೇತರಿಕೆ ಜತೆ ಅಭಿವೃದ್ಧಿ ಮೂಲಮಂತ್ರ: ಸಾಲದ ಮೂಲಕ ಆರ್ಥಿಕ ಸಂಕಷ್ಟ ನಿರ್ವಹಣೆ ಪ್ರಯತ್ನ


Team Udayavani, Mar 9, 2021, 6:35 AM IST

ಆರ್ಥಿಕ ಚೇತರಿಕೆ ಜತೆ ಅಭಿವೃದ್ಧಿ ಮೂಲಮಂತ್ರ: ಸಾಲದ ಮೂಲಕ ಆರ್ಥಿಕ ಸಂಕಷ್ಟ ನಿರ್ವಹಣೆ ಪ್ರಯತ್ನ

ಬೆಂಗಳೂರು: ಕೋವಿಡ್‌ನ‌ ದೀರ್ಘಾವಧಿ ಅಡ್ಡ ಪರಿಣಾಮದಿಂದ ಕಂಗೆಟ್ಟಿರುವ ಜನರಿಗೆ ತೆರಿಗೆ ಹೊರೆ ಹೊರಿಸಲು ಬಯಸದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೊಡ್ಡ ಮೊತ್ತದ ಸಾಲ ಪಡೆಯುವ ಮೂಲಕ ಆರ್ಥಿಕ ಸಂಕಷ್ಟದ ಸ್ಥಿತಿಯನ್ನು ನಿಭಾಯಿಸಲು ಪ್ರಯತ್ನ ನಡೆಸಿದ್ದಾರೆ.

ಕೋವಿಡ್‌ ಹಿನ್ನೆಲೆಯಲ್ಲಿ ಸ್ವಂತ ತೆರಿಗೆ ಮೂಲದಿಂದ ಹೆಚ್ಚುವರಿ ಆದಾಯ ಸಂಗ್ರಹ ನಿರೀಕ್ಷೆ ಖಾತರಿಯಿಲ್ಲದ ಕಾರಣ ಬರೋಬ್ಬರಿ 71,332 ಕೋಟಿ ರೂ. ಸಾಲ ಪಡೆಯುವ ಗುರಿಯನ್ನು ಬಜೆಟ್‌ನಲ್ಲಿ ಹೊಂದಲಾಗಿದೆ. ಅಬಕಾರಿ ತೆರಿಗೆ ಹೊರತುಪಡಿಸಿದರೆ ಉಳಿದ ಮೂಲದಿಂದ ನಿರೀಕ್ಷಿತ ಆದಾಯ ಸಂಗ್ರಹ ಅಸಾಧ್ಯವೆಂಬುದು ಸರ್ಕಾರಕ್ಕೆ ಮನವರಿಕೆಯಾದಂತಿದೆ. ಆ ಹಿನ್ನೆಲೆಯಲ್ಲಿ ಮುಂದಿನ ಹಣಕಾಸು ವರ್ಷದಲ್ಲಿ ಕೆಲ ಸ್ವಂತ ತೆರಿಗೆ ಮೂಲದ ಆದಾಯ ಗುರಿಯನ್ನೇ ಇಳಿಕೆ ಮಾಡಿದರೆ ಕೆಲ ಆದಾಯದ ಗುರಿಯನ್ನು ಯಥಾಸ್ಥಿತಿಯಲ್ಲೇ ಉಳಿಸಿಕೊಂಡಿರುವುದು ಕಾಣುತ್ತದೆ.

ವಾಣಿಜ್ಯ ತೆರಿಗೆ ಗುರಿ ಇಳಿಕೆ: ಸರ್ಕಾರದ ಪ್ರಮುಖ ಆದಾಯ ಮೂಲವಾದ ವಾಣಿಜ್ಯ ತೆರಿಗೆಯಿಂದ 76,473 ಕೋಟಿ ರೂ. ಆದಾಯ ನಿರೀಕ್ಷಿಸಲಾಗಿದೆ. ಆದರೆ ಪ್ರಸಕ್ತ ಸಾಲಿನಲ್ಲಿ 82,443 ಕೋಟಿ ರೂ. ಸಂಗ್ರಹ ಗುರಿ ಹೊಂದಲಾಗಿತ್ತು. ಅಂದರೆ, 2020-21ನೇ ಸಾಲಿಗೆ ಹೋಲಿಸಿದರೆ 2021-22ನೇ ಸಾಲಿನಲ್ಲಿ ವಾಣಿಜ್ಯ ತೆರಿಗೆ ಆದಾಯ ಗುರಿಯಲ್ಲಿ 5,970 ಕೋಟಿ ರೂ. ಇಳಿಕೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಫೆಬ್ರವರಿ ಅಂತ್ಯದ ಹೊತ್ತಿಗೆ 71,833 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ.

ಅಬಕಾರಿ ತೆರಿಗೆ ಗುರಿ ಹೆಚ್ಚಳ: ಪ್ರಸಕ್ತ ಸಾಲಿನಲ್ಲಿ 22,700 ಕೋಟಿ ರೂ. ಅಬಕಾರಿ ತೆರಿಗೆ ಆದಾಯ ನಿರೀಕ್ಷಿಸಲಾಗಿದ್ದು, ಫೆಬ್ರವರಿ ಅಂತ್ಯಕ್ಕೆ 20,900 ಕೋಟಿ ರೂ. ಸಂಗ್ರಹವಾಗಿದೆ. ಮಾರ್ಚ್‌ ಅಂತ್ಯದೊಳಗೆ ಗುರಿ ಮೀರಿ ಸಾಧನೆಯಾಗುವ ವಿಶ್ವಾಸ ಮೂಡಿಸಿದೆ. ಆ ಹಿನ್ನೆಲೆಯಲ್ಲಿ 2021-22ನೇ ಸಾಲಿನಲ್ಲಿ ಅಬಕಾರಿ ತೆರಿಗೆ ಆದಾಯದಿಂದ 24,580 ಕೋಟಿ ರೂ. ನಿರೀಕ್ಷೆ ಹೊಂದಲಾಗಿದೆ.

8123 ಕೋಟಿ ರೂ. ಇಳಿಕೆ!: ಸ್ವಂತ ತೆರಿಗೆ ರಾಜಸ್ವದಲ್ಲಿ 3905 ಕೋಟಿ ರೂ., ಕೇಂದ್ರದ ತೆರಿಗೆ ಆದಾಯದಲ್ಲಿ 4318 ಕೋಟಿ ರೂ. ಇಳಿಕೆಯಾಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿಗೆ ಹೋಲಿಸಿದರೆ ಮುಂದಿನ ಹಣಕಾಸು ವರ್ಷದಲ್ಲಿ ಸ್ವಂತ ರಾಜಸ್ವ ಮೂಲದಿಂದ 8123 ಕೋಟಿ ರೂ. ಇಳಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಒಟ್ಟು ಜಮೆ 2.43 ಲಕ್ಷ ಕೋಟಿ ರೂ.
ಮುಂದಿನ ಹಣಕಾಸು ವರ್ಷದಲ್ಲಿ 1,72,271 ಕೋಟಿ ರೂ. ರಾಜಸ್ವ, 71,332 ಕೋಟಿ ರೂ. ಸಾಲದ ಮೂಲಕ ಒಟ್ಟು 2,43,734 ಕೋಟಿ ರೂ. ಜಮೆಯಾಗುವ ಅಂದಾಜಿದೆ. ಇದರಲ್ಲಿ 1,87,405 ಕೋಟಿ ರೂ. ರಾಜಸ್ವ ವೆಚ್ಚ, 44,237 ಕೋಟಿ ರೂ. ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿಗೆ 14,565 ಕೋಟಿ ರೂ. ಸೇರಿದಂತೆ ಒಟ್ಟು ವೆಚ್ಚ 2,46,207 ಕೋಟಿ ರೂ. ಎಂಬುದಾಗಿ ಅಂದಾಜಿಸಲಾಗಿದೆ.

ಸಾರಿಗೆ ತೆರಿಗೆ ಗುರಿ ತುಸು ಏರಿಕೆ: ಸಾರಿಗೆ ತೆರಿಗೆ ಮೂಲದಿಂದ 7115 ಕೋಟಿ ರೂ. ಸಂಗ್ರಹ ಗುರಿಯಿದ್ದರೂ ಜನವರಿ ಅಂತ್ಯಕ್ಕೆ ಸಂಗ್ರಹವಾಗಿರುವುದು 4294 ಕೋಟಿ ರೂ. ಮಾತ್ರ. ಹಾಗಿದ್ದರೂ ಮುಂದಿನ ಹಣಕಾಸು ವರ್ಷದಲ್ಲಿ 7515 ಕೋಟಿ ರೂ. ಸಾರಿಗೆ ತೆರಿಗೆ ಆದಾಯ ನಿರೀಕ್ಷಿಸಿರುವುದು ಅಚ್ಚರಿ ಮೂಡಿಸಿದೆ.

ಸಂಪನ್ಮೂಲ ಕ್ರೋಡೀಕರಣ: 2021-22ನೇ ಸಾಲಿನಲ್ಲಿ ಜಿಎಸ್‌ಟಿ ಪರಿಹಾರ ಸೇರಿದಂತೆ ರಾಜ್ಯದ ಒಟ್ಟು ಸ್ವಂತ ತೆರಿಗೆ ರಾಜಸ್ವ 1,24,202 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ. ತೆರಿಗೆಯೇತರ ರಾಜಸ್ವಗಳಿಂದ 8,258 ಕೋಟಿ ರೂ., ಕೇಂದ್ರ ತೆರಿಗೆ ಪಾಲಿನಿಂದ 24,273 ಕೋಟಿ ರೂ. ಹಾಗೂ ಕೇಂದ್ರ ಸರ್ಕಾರದ ಸಹಾಯಾನುದಾನದಿಂದ 15,538 ಕೋಟಿ ರೂ. ಸಂಗ್ರಹ ನಿರೀಕ್ಷೆ ಹೊಂದಲಾಗಿದೆ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.