“ವಿಶ್ವಾಸ” ಕಳೆದುಕೊಂಡ ಕುಮಾರಸ್ವಾಮಿ, ಮೈತ್ರಿ ಸರ್ಕಾರ ಪತನ


Team Udayavani, Jul 23, 2019, 7:39 PM IST

Resign-HDK

ಬೆಂಗಳೂರು:ರಾಜ್ಯ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಸಾಬೀತುಪಡಿಸುವ ಕಸರತ್ತಿಗೆ ಮಂಗಳವಾರ ತೆರೆಬಿದ್ದಿದ್ದು, ಕೊನೆಗೂ ಕುಮಾರಸ್ವಾಮಿ ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗುವ ಮೂಲಕ 14 ತಿಂಗಳ ಕಾಲ ಅಧಿಕಾರ ನಡೆಸಿದ್ದ ಕಾಂಗ್ರೆಸ್, ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡಂತಾಗಿದೆ.

7-10ನಿಮಿಷದವರೆಗೆ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಪ್ರಸ್ತಾಪದ ಮೇಲೆ ಚರ್ಚೆ ನಡೆಸಿದ ಬಳಿಕ ಸ್ಪೀಕರ್ ರಮೇಶ್ ಕುಮಾರ್ ಅವರ ಸೂಚನೆ ಮೇರೆಗೆ ಸದಸ್ಯರ ತಲೆ ಎಣಿಕೆ ನಡೆಸುವ ಮೂಲಕ ಸದನದಲ್ಲಿ ವಿಶ್ವಾಸಮತ ಯಾಚನೆ ನಡೆಯಿತು.

ನಿರ್ಣಯದ ಪರ ಎದ್ದು ನಿಂತ ಆಡಳಿತ ಪಕ್ಷದ ಶಾಸಕರು, ನಿರ್ಣಯದ ಪರ ಎದ್ದು ನಿಂತ ಡೆಪ್ಯುಟಿ ಸ್ಪೀಕರ್ ಕೃಷ್ಣಾ ರೆಡ್ಡಿ, ಎದ್ದು ನಿಂತವರನ್ನು ವಿಧಾನಸಭಾ ಸಚಿವಾಲಯದ ಸಿಬ್ಬಂದಿಗಳು ತಲೆ ಎಣಿಕೆ ಮೂಲಕ ಎಣಿಕೆ ಕಾರ್ಯ ನಡೆಸಿದ್ದರು.ಈ ಮೂಲಕ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೇರುವ ಹಾದಿ ಸುಗಮಗೊಂಡಂತಾಗಿದೆ.

ನಿರ್ಣಯದ ವಿರುದ್ಧ ವಿಪಕ್ಷ ಶಾಸಕರು ಎದ್ದು ನಿಂತಿದ್ದರು. ಮೊದಲ ಸಾಲಿನಿಂದ ಕೊನೆಯ ಸಾಲಿನವರೆಗೆ ಎಣಿಕೆ ಕಾರ್ಯ ಪೂರ್ಣಗೊಂಡ ನಂತರ ಬಹುಮತದ ಸಂಖ್ಯೆಯನ್ನು ಘೋಷಿಸಲಾಯಿತು.

ಸದನದ ಒಟ್ಟು ಬಲ 208: ಮ್ಯಾಜಿಕ್ ನಂಬರ್ 103, ಬಿಜೆಪಿ-105, ಕಾಂಗ್ರೆಸ್, ಜೆಡಿಎಸ್-99

ವಿಧಾನಸಭೆಯ ಒಟ್ಟು ಸದಸ್ಯ ಬಲ 225: 37ರಲ್ಲಿ 3 ಜೆಡಿಎಸ್ ಶಾಸಕರ ರಾಜೀನಾಮೆ, ಬಿಜೆಪಿ ಶಾಸಕರ ಸಂಖ್ಯೆ 105, ಬಿಜೆಪಿ ಪಕ್ಷೇತರ ಶಾಸಕರಿಬ್ಬರ ಬೆಂಬಲ, ಕಾಂಗ್ರೆಸ್ ಪಕ್ಷದ ಸದಸ್ಯರ ಸಂಖ್ಯಾ ಬಲ(ಒಟ್ಟು ಬಲ 79) 67, ಶಾಸಕರ ರಾಜೀನಾಮೆ ಬಳಿಕ ದೋಸ್ತಿ ಸಂಖ್ಯೆ 99, ಬಿಎಸ್ಪಿ ಶಾಸಕ ಮಹೇಶ್ ತಟಸ್ಥ, ರಾಜೀನಾಮೆ ನೀಡಿದ ಶಾಸಕರ ಸಂಖ್ಯೆ 12, ರಾಜೀನಾಮೆ ನೀಡದೆ ಗೈರು ಹಾಜರಾದ ಶಾಸಕರ ಸಂಖ್ಯೆ-02,

ವಿಶ್ವಾಸಮತ ಯಾಚನೆ ಪ್ರಹಸನ ಕಳೆದ ಕೆಲವು ದಿನಗಳಿಂದ ವಿಧಾನಸಭೆ ಕಲಾಪದಲ್ಲಿ ನಡೆಯುತ್ತಿತ್ತು. ಸೋಮವಾರವೂ ಕೂಡಾ ತಡರಾತ್ರಿ 12ಗಂಟೆವರೆಗೆ ಕಲಾಪ ನಡೆದಿತ್ತು. ಆಡಳಿತ, ವಿಪಕ್ಷ ಸದಸ್ಯರ ನಡುವೆ ವಾಗ್ವಾದ, ಗದ್ದಲ, ಕೋಲಾಹಲ ನಡೆದಿತ್ತು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಮನವಿಯಂತೆ ಮಂಗಳವಾರ ಆರು ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸಲು ಅಂತಿಮ ಗಡುವು ನೀಡಿದ್ದ ಸ್ಪೀಕರ್ ಕಲಾಪವನ್ನು ಮಂಗಳವಾರ ಬೆಳಗ್ಗೆ 10ಗಂಟೆಗೆ ಮುಂದೂಡಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.