ಶಿಕ್ಷಣದಲ್ಲಿ ರಾಜಕೀಯ ಏಕೆ ತರುತ್ತೀರಿ : ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

ಪದವಿ ಶಿಕ್ಷಣದಲ್ಲಿ ಹೊರರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ

Team Udayavani, Nov 11, 2021, 10:30 PM IST

ಶಿಕ್ಷಣದಲ್ಲಿ ರಾಜಕೀಯ ಏಕೆ ತರುತ್ತೀರಿ : ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

ಬೆಂಗಳೂರು : “ಶಿಕ್ಷಣದಲ್ಲಿ ರಾಜಕೀಯ ಏಕೆ ಸೇರಿಸುತ್ತೀರಿ’ ಎಂದು ಸರ್ಕಾರಕ್ಕೆ ಖಾರವಾಗಿ ಪ್ರಶ್ನಿಸಿರುವ ಹೈಕೋರ್ಟ್‌, ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕಕ್ಕೆ ಬರುವ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಲು ರಾಷ್ಟ್ರೀಯ ನೀತಿಯಲ್ಲಿ ಅವಕಾಶವಿದೆಯೇ ಎಂಬ ಬಗ್ಗೆ ಉತ್ತರ ನೀಡಲು ಸೂಚಿಸಿದೆ.

ರಾಜ್ಯದಲ್ಲಿ ಪದವಿ ಶಿಕ್ಷಣ ಹಂತದಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಕೋರಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ, ಹಯಗ್ರೀವ ಟ್ರಸ್ಟ್‌ ಹಾಗೂ ವ್ಯೋಮ ಲಿಂಗ್ವಿಸ್ಟಿಕ್‌ ಲ್ಯಾಬ್‌ ಫೌಂಡೇಷನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಹಾಜರಾಗಿ, , ರಾಜ್ಯ ಸರ್ಕಾರವು ತನ್ನ ನೀತಿಯನ್ನು ಸಮರ್ಥಿಸಿಕೊಂಡು ಆಕ್ಷೇಪಣೆ ಸಲ್ಲಿಸಿದೆ. ಭಾಷಾ ಕಲಿಕೆಯನ್ನು ರಾಷ್ಟ್ರೀಯ ಶಿಕ್ಷಣ ನೀತಿ ಪ್ರೋತ್ಸಾಹಿಸುತ್ತದೆ. ಈ ಕುರಿತು ಅಡ್ವೋಕೇಟ್‌ ಜನರಲ್‌ ಅವರು ವಾದ ಮಂಡಿಸಬೇಕಿದ್ದು, ಸೋಮವಾರಕ್ಕೆ ವಿಚಾರಣೆ ಮುಂದೂಡಬೇಕು ಎಂದು ಕೋರಿದರು.

ಇದಕ್ಕೆ ಆಕ್ಷೇಪಿಸಿದ ನ್ಯಾಯಪೀಠ, ಸೋಮವಾರ ಏತಕ್ಕೆ, ಇಂದೇ ವಾದ ಮಂಡಿಸಬಹುದಲ್ಲವೇ? ಸರ್ಕಾರದ ನಿರ್ಧಾರ ಮರುಪರಿಶೀಲಿಸುವ ಬಗ್ಗೆ ಮಾಹಿತಿ ನೀಡುವಂತೆ ಹಿಂದಿನ ವಿಚಾರಣೆ ವೇಳೆಯೇ ಅಡ್ವೋಕೇಟ್‌ ಜನರಲ್‌ ಅವರಿಗೆ ಹೇಳಲಾಗಿತ್ತು. ಈ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವುದಾಗಿ ಅವರು ಹೇಳಿದ್ದರು. ಆ ವಿಚಾರ ಏನಾಯಿತು. ಆದೇಶ ಮರುಪರಿಶೀಲಿಸುವ ಬಗ್ಗೆ ಸರ್ಕಾರದ ನಿಲುವು ಏನು? ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕಕ್ಕೆ ಬರುವ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಲು ರಾಷ್ಟ್ರೀಯ ನೀತಿಯಲ್ಲಿ ಅವಕಾಶವಿದೆಯೇ? ಇದ್ದರೆ ದಾಖಲೆಗಳನ್ನು ಕೊಡಿ? ಭಾಷೆ ಕಲಿಕೆಯನ್ನು ಉತ್ತೇಜಿಸಬಹುದು ಎಂದು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಹೇಳಲಾಗಿದೆಯೇ ಹೊರತು, ಕಡ್ಡಾಯಗೊಳಿಸಬಹುದು ಎಂದು ಹೇಳಿಲ್ಲ. ಹೀಗಿದ್ದಾಗ “ಶಿಕ್ಷಣದಲ್ಲಿ ರಾಜಕೀಯ ಏಕೆ ಸೇರಿಸುತ್ತಿದ್ದೀರಿ ಎಂದು ಪ್ರಶ್ನಿಸಿತು.

ಇದನ್ನೂ ಓದಿ : ಮುಂಬಯಿ : 6 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಸಹಿತ ನೈಜೀರಿಯನ್ ಪ್ರಜೆಯ ಬಂಧನ

ಸರ್ಕಾರದ ಸಮರ್ಥನೆ:
ಉನ್ನತ ಶಿಕ್ಷಣದಲ್ಲಿ ಕೇವಲ ಆರು ತಿಂಗಳ ಕಾಲ ಬೇಸಿಕ್‌ ಕನ್ನಡ ಕಲಿಸಲಾಗುವುದು. ಈಗಾಗಲೇ ಪಠ್ಯ ಪುಸ್ತಕ ಪೂರೈಲಾಗಿದೆ. ಸಣ್ಣ ಸಣ್ಣ ಕನ್ನಡದ ಪದಗಳು ಕಲಿಯಲು ಹೇಳಿಕೊಡಲಾಗುತ್ತದೆಯಷ್ಟೇ. ಅದೂ ಆರು ತಿಂಗಳ ಕಾಲ. ಮೊದಲನೇ ತರಗತಿ ವಿದ್ಯಾರ್ಥಿಗಳಿಗೆ ಹೇಳಿಕೊಡುವ ಪಠ್ಯ ಬೋಧಿಸಲಾಗುತ್ತದೆ. ಇದು ಕೇವಲ ಕನ್ನಡ ಕಲಿಕೆಯನ್ನು ಪ್ರೋತ್ಸಾಹಿಸುವ ವಿಧಾನವಾಗಿದೆ. ರಾಜ್ಯದಲ್ಲಿ ನೆಲೆಸುವವರಿಗೆ ಸ್ಥಳೀಯರೊಂದಿಗೆ ಚರ್ಚಿಸಲು ಅನುಕೂಲವಾಗಷ್ಟು ಕನ್ನಡ ಕಲಿಸಲಾಗುತ್ತದೆ. ಈ ಕ್ರಮವನ್ನು ಉಷಾ ಮೆಹ್ತಾ ಪ್ರಕರಣದಲ್ಲಿ ಸುಪ್ರೀಂ ಕೊರ್ಟ್‌ ಸಹ ಅನುಮೋದಿಸಿದೆ ಎಂದು ಸರ್ಕಾರದ ಪರ ವಕೀಲರು ಸಮರ್ಥಿಸಿಕೊಂಡರು.

ಅಲ್ಲದೆ, ಇದೇ ಮೊದಲ ಬಾರಿಗೆ ಈ ವಿಧಾನ ಪರಿಚಯಿಸುತ್ತಿಲ್ಲ. ಕಳೆದ 10 ವರ್ಷಗಳಿಂದ ಎಂಜಿನಿಯರ್‌ ವ್ಯಾಸಂಗದಲ್ಲಿ ಕನ್ನಡ ಕಲಿಯುವ ವಿಧಾನ ಪರಿಚಯಿಸಲಾಗಿದೆ. ಇದು 10ನೇ ತರಗತಿ ನಂತರ ಕನ್ನಡ ವಿಷಯವನ್ನು ವ್ಯಾಸಂಗ ಮಾಡದವರಿಗೆ ಕನ್ನಡ ಕಲಿಯಲು ಅನುಕೂಲವಾಗಿದೆ. ಈ ವಿಧಾನ ಯಶಸ್ವಿ ಸಹ ಆಗಿದೆ ಎಂದು ಸರ್ಕಾರಿ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಉನ್ನತ ಶಿಕ್ಷಣ ವ್ಯಾಸಂಗದಲ್ಲಿ ಕಡ್ಡಾಯವಾಗಿ ಕನ್ನಡ ಕಲಿಯಬೇಕೆಂಬ ಅಂಶ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಇಲ್ಲ. ತನಗೆ ಇಷ್ಟಬಂದ ಯಾವುದೇ ವಿಷಯ ಅಥವಾ ಕೋರ್ಸ್‌ ಅನ್ನು ಅಧ್ಯಯನ ಮಾಡುವ ಸಂಪೂರ್ಣ ಸ್ವಾತಂತ್ರ್ಯವನ್ನು ವಿದ್ಯಾರ್ಥಿಗೆ ನೀಡಲಾಗಿದೆ ಎಂದರು.

ಅಡ್ವೋಕೇಟ್‌ ಜನರಲ್‌ ಅವರು ವಾದ ಮಂಡಿಸಲಿದ್ದಾರೆ ಎಂಬ ಸರ್ಕಾರದ ಪರ ವಕೀಲರ ಮನವಿ ಪುರಸ್ಕರಿಸಿದ ನ್ಯಾಯಪೀಠ ವಿಚಾರಣೆಯನ್ನು ನ.15ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.