ಕೊಡವ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನ: ಅಧ್ಯಯನದ ಮಾನದಂಡ ಪರಿಶೀಲಿಸಲು ಹೈಕೋರ್ಟ್‌ ಸೂಚನೆ


Team Udayavani, Jul 20, 2021, 9:21 PM IST

ಕೊಡವ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನ: ಅಧ್ಯಯನದ ಮಾನದಂಡ ಪರಿಶೀಲಿಸಲು ಹೈಕೋರ್ಟ್‌ ಸೂಚನೆ

ಬೆಂಗಳೂರು: ಕೊಡವ ಸಮುದಾಯಕ್ಕೆ ಪರಿಶಿಷ್ಟ ಪಂಡಗದ ಸ್ಥಾನಮಾನ ಕಲ್ಪಿಸುವ ವಿಚಾರವಾಗಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಸಲ್ಲಿಸಿರುವ ಅಧ್ಯಯನ ವರದಿಯನ್ನು ಪರಿಗಣಿಸುವ ಮೊದಲು ಸೂಕ್ತ ಮಾನದಂಡಗಳನ್ನು ಅನುಸರಿಸಿ ಅಧ್ಯಯನ ನಡೆಸಲಾಗಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಅಧ್ಯಯನದ ಸಂದರ್ಭದಲ್ಲಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನೀಡಿರುವ ಪ್ರಶ್ನಾವಳಿ ಮತ್ತು ಅರ್ಜಿ ನಮೂನೆಯನ್ನು ರದ್ದಪಡಿಸುವಂತೆ ಕೋರಿ ಕೊಡವ ನ್ಯಾಷನಲ್‌ ಕೌನ್ಸಿಲ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ಈ ನಿರ್ದೇಶನ ನೀಡಿದೆ.

ಕೊಡವ ಸಮುದಾಯಕ್ಕೆ ಬುಡಕಟ್ಟು ಜನಾಂಗದ ಸ್ಥಾನಮಾನ ಕಲ್ಪಿಸುವ ವಿಚಾರವಾಗಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಅಧ್ಯಯನ ನಡೆಸಿ ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ವರದಿಯನ್ನು ಸರ್ಕಾರದ ಪರಿಶೀಲನೆಗಾಗಿ ಇಡಲಾಗಿದೆ.

ಆದರೆ, ಸೂಕ್ತ ಮಾನದಂಡ ಅನುಸರಿಸಿ ಅಧ್ಯಯನ ನಡೆಸಿಲ್ಲ ಎಂದು ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಈ ವಿಚಾರದಲ್ಲಿ ಕೇವಲ ಈ ವರದಿ ಆಧರಿಸಿ ಸರ್ಕಾರ ತೀರ್ಮಾನ ಕೈಗೊಳ್ಳಬಾರದು. ವರದಿಯನ್ನು ಒಪ್ಪುವ ಮುನ್ನ ಅಧ್ಯಯನ ನಡೆಸಲು ಕೊಡವ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ಕುರಿತಾಗಿ ಅಧ್ಯಯನ ನಡೆಸಲು 2016ರ ಡಿ.1ರಂದು ಹೊರಡಿಸಿದ ಆದೇಶದಲ್ಲಿ ವಿಧಿಸಿದ್ದ ಷರತ್ತು ಮತ್ತು ಮಾನದಂಡಗಳಿಗೆ ಅನುಗುಣವಾಗಿ ಅಧ್ಯಯನ ನಡೆಸಲಾಗಿದೆಯೇ ಎಂದು ಸರ್ಕಾರ ಪರಿಶೀಲಿಸಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.

ಇದನ್ನೂ ಓದಿ :ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಿಎಂ ಆದೇಶ

ಅಲ್ಲದೆ, ವರದಿಯನ್ನು ಪರಿಶೀಲಿಸುವ ವೇàಳೆ ಸೂಕ್ತವಾದ ಮಾನದಂಡ ಅನುಸರಿಸಿ ಅಧ್ಯಯನ ನಡೆಸಲಾಗಿದೆಯೇ? ಎಂದು ಗಮನಿಸಬೇಕು ಹಾಗೂ ಅಧ್ಯಯನ ಕುರಿತು ಅರ್ಜಿದಾರರು ಎತ್ತಿರುವ ಆಕ್ಷೇಪಣೆಗಳನ್ನು ಪರಿಗಣಿಸಬೇಕು. ಒಂದೊಮ್ಮೆ ಸೂಕ್ತ ಮಾನದಂಡ ಅನುಸರಿಸಿ ಅಧ್ಯಯನ ನಡೆಸಿಲ್ಲ ಎಂಬುದು ಪರಿಶೀಲನೆ ವೇಳೆ ತಿಳಿದು ಬಂದರೆ, ಹೊಸದಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸುವುದಕ್ಕೆ ಆದೇಶಿಸಲು ಸರ್ಕಾರ ಮುಕ್ತವಾಗಿದೆ ಎಂದು ತಿಳಿಸಿದ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎ.ಎಸ್‌. ಪೊನ್ನಣ್ಣ ವಾದ ಮಂಡಿಸಿ, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯು ಅಧ್ಯಯನದ ವೇಳೆ ಸೂಕ್ತ ಮಾನದಂಡ ಅನುಸರಿಸಿಲ್ಲ. ಐದು ಅಂಶಗಳ ಆಧಾರದ ಮೇಲೆ ಅಧ್ಯಯನ ನಡೆಸಲು ಸರ್ಕಾರ ಆದೇಶಿತ್ತು. ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಅಧ್ಯಯನ ನಡೆಸಲಾಗಿದೆ. ಅಧ್ಯಯನ ವೇಳೆ ಸಿದ್ಧಪಡಿಸಿದ ಪ್ರಶ್ನಾವಳಿ ಕೂಡ ಸಮಂಜಸವಾಗಿರಲಿಲ್ಲ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಮಾನದಂಡದ ಮೇಲೆ ಅಧ್ಯಯನ ನಡೆಸಲಾಗಿದೆ. ಆದರೆ, ಜನಾಂಗೀಯ ಅಧ್ಯಯನ ನಡೆಸಬೇಕಿತ್ತು. ಹೀಗಾಗಿ, ಸಲ್ಲಿಕೆಯಾಗಿರುವ ವರದಿ ಪರಿಗಣಿಸದಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ನ್ಯಾಯಪೀಠವನ್ನು ಕೋರಿದರು.

ಅದಕ್ಕೆ ನ್ಯಾಯಪೀಠ, ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಈ ಹಂತದಲ್ಲಿ ಅರ್ಜಿದಾರರ ಮನವಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು. ಜತೆಗೆ, ವರದಿ ಪರಿಶೀಲನೆ ವೇಳೆ ಅರ್ಜಿದಾರರ ಆಕ್ಷೇಪಣೆಗಳನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಸೂಚಿಸಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.