ಪೊಲೀಸ್‌ ವ್ಯವಸ್ಥೆಯ ನೈತಿಕ ಸ್ಥೈರ್ಯ ಕುಸಿಯದಂತೆ ನೋಡಿಕೊಳ್ಳಿ


Team Udayavani, Apr 20, 2022, 6:00 AM IST

ಪೊಲೀಸ್‌ ವ್ಯವಸ್ಥೆಯ ನೈತಿಕ ಸ್ಥೈರ್ಯ ಕುಸಿಯದಂತೆ ನೋಡಿಕೊಳ್ಳಿ

ಕಳೆದ ಕೆಲವು ದಿನಗಳಿಂದ ದೇಶದ ವಿವಿಧೆಡೆ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಅಹಿತಕರ ಘಟನೆಗಳು ನಡೆಯುತ್ತಿರುವುದು ಆಘಾತಕಾರಿ. ರಾಮನವಮಿ, ಹನುಮ ಜಯಂತಿಯಂದು ರಾಜಸ್ಥಾನ, ಹಾಗೂ ದಿಲ್ಲಿಗಳಲ್ಲಿ ನಡೆದ ಘಟನೆಗಳಾಗಲಿ, ಈಚೆಗೆ ಹುಬ್ಬಳ್ಳಿಯಲ್ಲಿ ನಡೆದ ದೊಂಬಿಯಾಗಲಿ ಯಾವ ಕಾರಣಕ್ಕೂ ಕ್ಷಮ್ಯವಲ್ಲ.

ಚುನಾವಣೆ ನಡೆಯುವ ಸಂದರ್ಭದಲ್ಲಿ ಸಮಾಜವನ್ನು ಕದಡುವ ಘಟನೆಗಳು ನಡೆಯುವುದು ಅಥವಾ ನಡೆಸುವುದು ಸಾಮಾನ್ಯ ಎನಿಸಿ ಬಿಟ್ಟಿದೆ. ಆದರೆ ಇಂಥ ಘಟನೆಗಳು ಇಡೀ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ. ಸಾಮಾಜಿಕ ಸಂರಚನೆ ಮೇಲೆ ಇವುಗಳಿಂದಾಗುವ ಪರಿಣಾಮ ಅನೂಹ್ಯ. ಈ ಮೇಲಿನ ಘಟನೆಗಳಲ್ಲಿ ಒಂದು ಬಗೆಯ ಸಾಮ್ಯತೆಯನ್ನು ಕಾಣುವುದು ಮತ್ತಷ್ಟು ಆತಂಕಕಾರಿಯಾಗಿದೆ. ಎರಡು ಸಮುದಾಯಗಳ ನಡುವಿನ ಸಂಘರ್ಷದ ಜತೆಗೆ ಪೊಲೀಸ್‌ ವ್ಯವಸ್ಥೆಗೆ ಸಡ್ಡು ಹೊಡೆಯುವ ಪ್ರವೃತ್ತಿ ಇಲ್ಲಿ ಕಾಣಿಸುತ್ತಿದೆ. ಸಮಾಜವನ್ನು ರಕ್ಷಿಸ ಬೇಕಾದ ಪೊಲೀಸ್‌ ವ್ಯವಸ್ಥೆಯ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡು ವುದು ಈ ದೊಂಬಿಗಳ ಉದ್ದೇಶದಂತೆ ಕಾಣಿಸುತ್ತಿದೆ. ನಮ್ಮನ್ನು ಕಾಯಬೇ ಕಾದ ಪೊಲೀಸರು ದಿಕ್ಕೆಟ್ಟರೆ ಇಡೀ ಸಮಾಜದ ಬುನಾದಿಯೇ ಕುಸಿಯು ತ್ತದೆ. ಕಾಶ್ಮೀರದಲ್ಲಿ ಹಿಂದೆ ಇದೇ ಮಾದರಿಯಲ್ಲಿ ಪೊಲೀಸ್‌ ಹಾಗೂ ಸೈನ್ಯದ ನೈತಿಕತೆ ಕುಸಿಯುವಂತೆ ಅವರ ಮೇಲೆ ದಾಳಿ ನಡೆಸಲಾ ಗುತ್ತಿತ್ತು. ಪೊಲೀಸ್‌ ಠಾಣೆ ಮೇಲೆ ಹಲವು ನಕ್ಸಲ್‌ ದಾಳಿಗಳೂ ನಡೆದಿರು ವುದು ಇಲ್ಲಿ ಉಲ್ಲೇಖಾರ್ಹ. ಇಂಥ ದಾಳಿಯು ವ್ಯವಸ್ಥೆಯನ್ನು ಅರಾಜಕ ತೆಗೆ ತಳ್ಳಬಹುದು ಎನ್ನುವುದು ಈ ಘಟನೆಗಳಲ್ಲಿ ಬಿಚ್ಚಿಕೊಳ್ಳುತ್ತಿರುವ ಸತ್ಯ.

ಕಾಶ್ಮೀರ ಮಾದರಿಯಲ್ಲಿ ಕರ್ನಾಟಕದಲ್ಲಿ ಪೊಲೀಸ್‌ ವ್ಯವಸ್ಥೆ ಮೇಲೆ ದಾಳಿಯಾಗುವುದನ್ನು ತಪ್ಪಿಸಬೇಕಾದರೆ ಅಂಥ ಪುಂಡರನ್ನು ಯಾವುದೇ ಮುಲಾಜಿಲ್ಲದೆ ಮತ್ತು ಒತ್ತಡಕ್ಕೆ ಮಣಿಯದೆ ಕಾನೂನಿನ ಮುಂದೆ ನಿಲ್ಲಿಸಬೇಕಾಗಿದೆ. ಎಷ್ಟೋ ಸಂದರ್ಭಗಳಲ್ಲಿ ಪೊಲೀಸ್‌ ವ್ಯವಸ್ಥೆ ಜತೆ ನಿಂತು ಅವರ ನೈತಿಕತೆಯನ್ನು ವೃದ್ಧಿಸಬೇಕಾದ ಜನಪ್ರತಿನಿಧಿಗಳು ಸಹ ಈ ವ್ಯವಸ್ಥೆ ಮೇಲೆ ಸಮಾಜಕ್ಕೆ ಅನುಮಾನ ಬರುವಂತೆ ಮಾತನಾಡುವುದು, ನಡೆದು ಕೊಳ್ಳುವುದು ದುರಂತ. ದೇಶದ ಪೊಲೀಸ್‌ ವ್ಯವಸ್ಥೆ ಸದೃಢವಾಗಿದೆ ಎನ್ನುವುದರಲ್ಲಿ ಯಾವ ಅನುಮಾನವೂ ಇಲ್ಲ. ಆದರೆ ಇಲ್ಲಿ ರಾಜಕೀಯ ಒತ್ತಡ ದಿಂದ ಯಾವುದೇ ಘಟನೆಯ ನಿಷ್ಪಕ್ಷ ತನಿಖೆ ಸಾಧ್ಯವಾಗುವುದಿಲ್ಲ.

ಹುಬ್ಬಳ್ಳಿ ಘಟನೆಯಲ್ಲೂ ಇದು ಕಾಣಿಸುತ್ತಿದೆ. ಪುಂಡರ ಗುಂಪೊಂದು ಠಾಣೆ ಮೇಲೆ ದಾಳಿ ನಡೆಸಿದ ಘಟನೆ ಬೆನ್ನಲ್ಲೇ ವಿವಿಧ ಪಕ್ಷಗಳ ನಾಯಕರು ತಮ್ಮ ಮೂಗಿನ ನೇರಕ್ಕೆ ಹೇಳಿಕೆಗಳನ್ನು ನೀಡುತ್ತಿರುವುದರಿಂದ ಸಹಜವಾಗಿಯೇ ಪೊಲೀಸರು ಇನ್ನೊಮ್ಮೆ ದಿಕ್ಕೆಡುತ್ತಾರೆ. ಅತ್ತ ಸಮಾಜವಿದ್ರೋಹಿ ಗುಂಪು ಭೌತಿಕವಾಗಿ ಪೊಲೀಸ್‌ ವ್ಯವಸ್ಥೆಯನ್ನು ಜರ್ಝರಿತಗೊಳಿಸಿದರೆ ಇತ್ತ ರಾಜಕಾರಣಿಗಳು ಇಲ್ಲ ಸಲ್ಲದ ಹೇಳಿಕೆಗಳಿಂದ, ಒತ್ತಡಗಳಿಂದ ಪೊಲೀಸ್‌ ವ್ಯವಸ್ಥೆಯನ್ನು ಮಾನಸಿಕವಾಗಿ ಕುಗ್ಗಿಸಿಬಿಡುತ್ತಾರೆ. ಇವೆರಡೂ ಮಾರಕವೇ.

ಇದರಿಂದ ಯಾವುದೇ ಪ್ರಕರಣದ ನಿಷ್ಪಕ್ಷಪಾತ ತನಿಖೆ ಅಸಾಧ್ಯ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗದೇ ಹೋಗಬಹುದು. ಬೆಂಗಳೂರಿನ ಚಂದ್ರು ಕೊಲೆ ಪ್ರಕರಣದಿಂದ ಹಿಡಿದು ಹುಬ್ಬಳ್ಳಿ ಘಟನೆಯ ತನಕವೂ ಪೊಲೀಸರ ನೈತಿಕತೆಯನ್ನು ಕುಗ್ಗಿಸುವ ಪ್ರಯತ್ನಕ್ಕೆ ಕೈ ಹಾಕುವುದು ನಿಲ್ಲಲಿ. ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಪ್ರಾಮಾಣಿಕ ತನಿಖೆಗೆ ಅವಕಾಶ ಕೊಡಬೇಕಾದರೆ, ರಾಜಕಾರಣಿಗಳು ಮೌನಕ್ಕೆ ಶರಣಾಗುವುದು ಲೇಸು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.