ಅಶ್ವಿನಿಗೌಡ ಸೇರಿ 13 ಕರವೇ ಸದಸ್ಯರು ಪೊಲೀಸರಿಗೆ ಶರಣಾಗತಿ, ಪ್ರಕರಣ ದಾಖಲು
Team Udayavani, Nov 8, 2019, 12:25 PM IST
Representative Image
ಬೆಂಗಳೂರು:ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಅಶ್ವಿನಿ ಗೌಡ ಸೇರಿದಂತೆ 13 ಮಂದಿ ಕರವೇ ಕಾರ್ಯಕರ್ತರು ವಿವಿ ಪುರಂ ಪೊಲೀಸರ ಮುಂದೆ ಶರಣಾಗಿದ್ದಾರೆ.
ಕರವೇ ಕಾರ್ಯಕರ್ತರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದು, ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ ಶುಕ್ರವಾರ ಬೆಳಗ್ಗೆ 6ಗಂಟೆಯಿಂದ ಶನಿವಾರ ಬೆಳಗ್ಗೆ 6ಗಂಟೆವರೆಗೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಹೊರ ರೋಗಿ ಸೇವೆ ಬಂದ್ ಮಾಡುವಂತೆ ಕರೆ ನೀಡಿತ್ತು.
ರಾಜ್ಯಾದ್ಯಂತ ವೈದ್ಯರು ಒಪಿಡಿ ಬಂದ್ ನಡೆಸಿ ಮುಷ್ಕರ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪೊಲೀಸರ ಮುಂದೆ ಶರಣಾಗಲು ನಿರ್ಧರಿಸಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ.
ಅದರಂತೆ ಅಶ್ವಿನಿ ಗೌಡ ಸೇರಿದಂತೆ 13 ಮಂದಿ ಕರವೇ ಕಾರ್ಯಕರ್ತರನ್ನು ಸೌಂತ್ ಎಂಡ್ ಡಿಸಿಪಿ ಕಚೇರಿ ಮುಂಭಾಗ ಪೊಲೀಸರು ವಶಕ್ಕೆ ಪಡೆದುಕೊಂಡರು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಷನ್ 506, 341, 504, 323ರ ಅಡಿ ಪ್ರಕರಣ ದಾಖಲಿಸಿದ್ದಾರೆ.
ವಶಕ್ಕೆ ಪಡೆದ ಕರವೇ ಕಾರ್ಯಕರ್ತರನ್ನು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ನಂತರ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ