ರಾಜ್ಯ ಸಾರಿಗೆ ಇಲಾಖೆಯಲ್ಲಿ 4000 ಕೋಟಿ ಹಣ ಸೋರಿಕೆ: ಸವದಿ ಕಳವಳ

ಎಲ್ಲಾ ನಿಗಮಗಳಿಂದ 4000 ಕೋಟಿ ನಷ್ಟ

Team Udayavani, Feb 29, 2020, 6:02 PM IST

Transport-department-min

ಕಾರವಾರ : ಸಾರಿಗೆ ಇಲಾಖೆಯಲ್ಲಿ ಹೆಚ್ಚಿನ ಹಣ ಸೋರಿಕೆಯಾಗುತ್ತಿದ್ದು, ರಾಜ್ಯದ ಸಾರಿಗೆ ನಿಗಮಗಳು 4000 ಕೋಟಿ ನಷ್ಟದಲ್ಲಿದೆ ಎಂದು ಉಪ ಮುಖ್ಯಮಂತ್ರಿ,ಸಾರಿಗೆ ಸಚಿವ ಲಕ್ಷ್ಮಣ ಸವದಿ ಕಳವಳ ವ್ಯಕ್ತಪಡಿಸಿದರು.

ಶನಿವಾರ ಜಿಲ್ಲೆಯ ಹೊನ್ನಾವರ ತಾಲೂಕಿನ ನೂತನ ಬಸ್ ನಿಲ್ದಾಣದ ಶಂಕು ಸ್ಥಾಪನೆ ನೆರವೇರಿಸಿ, ನಂತರ ಮಾತನಾಡಿದ ಅವರು ಹಣ ಸೋರಿಕೆಯಾಗುತ್ತಿರುವುದರ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿ ಸಾರಿಗೆ ಇಲಾಖೆಯನ್ನು ಸರಿದಾರಿಗೆ ತರುವುದರ ಮೂಲಕ ಲಾಭದಾಯಕ ವಾಗುವಂತೇ ಮಾಡುತ್ತೇನೆ ಎಂದರು.

ಉತ್ತರ ಕನ್ನಡವನ್ನು ಬಲಿಷ್ಠ ಜಿಲ್ಲೆಯಾಗಿ ನಿರ್ಮಾಣ ಮಾಡುವುದರ ಜೊತೆಗೆ ಜನತೆಗೆ ಎಲ್ಲಿಯೂ ಅನ್ಯಾಯವಾಗದಂತೇ ನೋಡಿಕೊಳ್ಳುತ್ತೇನೆ. ಟೋಲ್ ಗೆ ಸಂಬಂಧಿಸಿದ ಸಮಸ್ಯೆಯನ್ನು ಶೀಘ್ರ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದರು.

ಜಿಲ್ಲೆಯಲ್ಲಿ ರಸ್ತೆ ಅಭಿವೃದ್ಧಿ, ಬಸ್ ನಿಲ್ದಾಣಗಳು, ವಸತಿ ಸೇರಿದಂತೆ ,ಅನೇಕ ಸಮಸ್ಯೆಗಳಿದ್ದು ಜನತೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ದೊರಕಿಸಿ ಕೊಡುವುದಾಗಿ ತಿಳಿಸಿದರು. ಅಧಿಕಾರದಲ್ಲಿರುವಷ್ಟು ಅವಧಿ ಜನರ ಸೇವೆಗೆ ಸದಾ ಸಿದ್ಧನಾಗಿರುತ್ತೇನೆ. ಸ್ವಚ್ಛತೆ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೇ ಅನೇಕ ಸಮಸ್ಯೆಗಳನ್ನು ನೀಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಮಟಾ-ಹೊನ್ನಾವರ ಶಾಸಕ‌ ದಿನಕರ ಶೆಟ್ಟಿ ಮಾತನಾಡಿ ಜಿಲ್ಲೆಯಲ್ಲಿರುವ ಕುಂದು ಕೊರತೆಗಳನ್ನು ಉಪಮುಖ್ಯಮಂತ್ರಿಗಳಿಗೆ ವಿವರಿಸಿ, ಜಿಲ್ಲೆಯ ಅಭಿವೃದ್ಧಿಯು ಮಂದಗತಿಯಲ್ಲಿ ಸಾಗುತ್ತಿದ್ದು, ಜಿಲ್ಲೆಯು ಹಲವಾರು ವರ್ಷಗಳಿಂದ ನಿಲಕ್ಷ್ಯಕ್ಕೆ ಒಳಗಾಗಿದೆ. ಇ ಸ್ವತ್ತು ಬಹಳ ದೊಡ್ಡ ಸಮ್ಯಸೆಯಾಗಿ ಜನರನ್ನು ಕಾಡುತ್ತಿದ್ದು ಇದಕ್ಕೆ ಸೂಕ್ತ ಪರಿಹಾರದ ಅಗತ್ಯವಿದೆ. ಜಿಲ್ಲೆಯ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುವುದರ ಜೊತೆಗೆ ಅವುಗಳು ನಿರ್ದಿಷ್ಟ ಅವಧಿಯಲ್ಲಿ ಕಾರ್ಯಗತಗೊಳಿಸಲು ಉಪಮುಖ್ಯಮಂತ್ರಿಗಳ ಹತ್ತಿರ ಮನವಿ ಮಾಡಿಕೊಂಡರು.‌‌

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾದ ವಿ.ಎಸ್ ಪಾಟೀಲ್ ಮಾತನಾಡಿ ಸರ್ಕಾರಿ ಬಸ್ ವ್ಯವಸ್ಥೆಯಿಂದಾಗಿ ಜನರು ಚಟುವಟಿಕೆಯಿಂದಿರಲು ಸಾಧ್ಯವಾಗಿದೆ. ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೇವೆಯಿಂದ ಬಹಳಷ್ಟು ಪ್ರಯೋಜನವಾಗಿದೆ. ಸರ್ಕಾರಿ ಬಸ್ ಸೌಲಭ್ಯಗಳನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹೇಳಿದರು.

ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಮಾತನಾಡಿ ಜಿಲ್ಲೆಯ ಯುವಕ-ಯುವತಿಯರು ಉದ್ಯೋಗ ಅವಕಾಶದಿಂದ ವಂಚಿತರಾಗಿದ್ದು ಈ ಬಗ್ಗೆ ಗಂಭೀರವಾದ ಕ್ರಮಗಳನ್ನು ಕೈಗೂಳ್ಳಬೇಕಾಗಿದೆ. ಜಿಲ್ಲೆಯಲ್ಲಿ ಯಾವುದೇ ಯೋಜನೆಯನ್ನು ಜಾರಿಗೆ ತಂದರು ಅದರಿಂದ ಸ್ಥಳೀಯ ಯುವಕರು ಉದ್ಯೋಗ ಪಡೆಯುವಂತಾಗಬೇಕು ಎಂದರು. ಜೊತೆಗೆ ಟೂಲ್‌ ನಿಂದ ಸ್ಥಳೀಯರಿಗೆ ಅನ್ಯಾಯವಾಗುತ್ತಿದ್ದು ಸಾರ್ವಜನಿಕರಿಗೂ ಅತಿಯಾದ ಭಾರವಾಗಿದೆ. ಈ ಕುರಿತು ಕೂಲಕುಂಷವಾಗಿ ಪರಿಶೀಲನೆಯನ್ನು ನಡೆಸಿ ಸಾರ್ವಜನಿಕರಿಗೆ ನ್ಯಾಯವನ್ನು ಒದಗಿಸಬೇಕು ಎಂದು ಉಪಮುಖ್ಯಮಂತ್ರಿಗಳ ಬಳಿ ತಮ್ಮ ಜಿಲ್ಲೆಯ ಅಳಲನ್ನು ತೋಡಿಕೊಂಡರು.

ಈ ಸಂದರ್ಭದಲ್ಲಿ ಸಾರಿಗೆ ಸಂಸ್ಥೆಯ ಅಧಿಕಾರಿಗಳು, ಪಂಚಾಯತ್ ಸದಸ್ಯರು ಮತ್ತಿತರು ಉಪಸ್ಥಿತರಿದ್ದರು. ವಿ.ಐ ಹೆಗಡೆ ಸ್ವಾಗತಿಸಿದರು. ಪ್ರಶಾಂತ ಹೆಗಡೆ ನಿರೂಪಿಸಿದರು. ಪ್ರಕಾಶ್ ನಾಯ್ಕ್ ವಂದಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.