ಮನೆ ಗೋಡೆ ಕುಸಿತ, ಮಹಿಳೆ ಸಾವು ; ಸ್ಥಳಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಭೇಟಿ
48 ಗಂಟೆಯೊಳಗೆ ಪರಿಹಾರ ವಿತರಿಸಲು ಅಧಿಕಾರಿಗಳಿಗೆ ಸೂಚನೆ
Team Udayavani, Jul 13, 2021, 8:11 PM IST
ಕಾರವಾರ : ಗುಡ್ನಾಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡಿಗೆಹಳ್ಳ ಗ್ರಾಮದಲ್ಲಿ ಆಕಸ್ಮಿಕವಾಗಿ ಮನೆ ಗೋಡೆ ಕುಸಿದ್ದು ಶ್ರೀಮತಿ ಯಶೋದಾ ಬಂಗಾರಿ ಗೌಡ ಮೃತಪಟ್ಟಿದ್ದು, ಅವರ ಮನೆಗೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.
ಅನ್ಯ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿದ ಸಚಿವ ಶಿವರಾಮ ಹೆಬ್ಬಾರ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಅಂತ್ಯ ಸಂಸ್ಕಾರಕ್ಕೆ ವೈಯಕ್ತಿಕ ಧನಸಹಾಯವನ್ನು ನೀಡಿದರು ಹಾಗೂ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿ ಮುಂದಿನ 48 ಗಂಟೆಗಳ ಒಳಗಾಗಿ ಪರಿಹಾರಧನವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ತಹಶೀಲ್ದಾರ್ ಕುಲಕರ್ಣಿ, ಡಿ.ವೈ,ಎಸ್.ಪಿ ರವಿ ನಾಯ್ಕ, ಸಿ.ಪಿ.ಆಯ್. ರಾಮಚಂದ್ರ ನಾಯಕ ಬನವಾಸಿ ಪಿ.ಎಸ್.ಆಯ್ ಹಾಗೂ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು ಉಪಾಧ್ಯಕ್ಷರು ಸ್ಥಳೀಯ ಮುಖಂಡರು ಹಾಗೂ ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ಪಂಜಾಬ್ ರಾಜಕೀಯ ವಿವಾದಕ್ಕೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಎಂಟ್ರಿ..?!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ