ಕೆಎಎಸ್‌ ಮುಖ್ಯ ಪರೀಕ್ಷೆ: ಐಚ್ಛಿಕಗಳ ಪದ್ಧತಿ ರದ್ದು

ಕನ್ನಡ ಭಾಷೆ, ಕನ್ನಡದಲ್ಲಿ ಪರೀಕ್ಷೆ ಬರೆಯುವವರಿಗೆ ಸಮಸ್ಯೆ ಇಲ್ಲ

Team Udayavani, Mar 16, 2020, 6:50 AM IST

ಕೆಎಎಸ್‌ ಮುಖ್ಯ ಪರೀಕ್ಷೆ: ಐಚ್ಛಿಕಗಳ ಪದ್ಧತಿ ರದ್ದು

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಗೆಜೆಟೆಡ್‌ ಪ್ರೊಬೆಷನರ್‌ ಎ ಮತ್ತು ಬಿ ಶ್ರೇಣಿ (ಕೆಎಎಸ್‌) ಹುದ್ದೆಗಳ ಅಂತಿಮ ಪರೀಕ್ಷೆಯಲ್ಲಿ ಕನ್ನಡ ಸಾಹಿತ್ಯ ಸೇರಿದಂತೆ ಎಲ್ಲ 26 ಐಚ್ಛಿಕ ವಿಷಯಗಳನ್ನು ತೆಗೆದು ಹಾಕಲು ಸರಕಾರ ಮುಂದಾಗಿದೆ.

ಈ ಸಂಬಂಧ ಪ್ರಸ್ತಾವನೆಯನ್ನು ಕಳಿಸಿಕೊಡಲಾಗಿದ್ದು, ಸರಕಾರ ತೀರ್ಮಾನ ಮಾಡಬೇಕಿದೆ ಎಂದು ಕೆಪಿಎಸ್‌ಸಿ ಹೇಳಿದೆ. ಈ ಬಗ್ಗೆ ಸರಕಾರವು ಮಾರ್ಚ್‌ ಮೊದಲ ವಾರದಲ್ಲಿ ಕರಡು ನಿಯಮಗಳನ್ನು ಹೊರಡಿಸಿದ್ದು, ಸಾರ್ವಜನಿಕರ ಆಕ್ಷೇಪಣೆಗೆ 15 ದಿನಗಳ ಸಮಯ ನೀಡಲಾಗಿದೆ ಎಂದು ತಿಳಿದುಬಂದಿದೆ.
ಈ ನಿರ್ಧಾರದಿಂದ ಕನ್ನಡ ಭಾಷೆಗೆ ಅನ್ಯಾಯವಾಗಲಿದೆ ಎಂಬ ಕೂಗಿದೆ. ಆದರೆ ಐಚ್ಛಿಕ ವಿಷಯ ತೆಗೆದುಹಾಕುವುದರಿಂದ ಪರೀಕ್ಷೆಯ ಪದ್ಧತಿಯಲ್ಲಿ ಬದಲಾವಣೆ ಆಗಲಿದೆಯೇ ವಿನಾ ಕನ್ನಡ ಭಾಷೆ ಅಥವಾ ಕನ್ನಡದಲ್ಲಿ ಪರೀಕ್ಷೆ ಬರೆಯುವವರಿಗೆ ಸಮಸ್ಯೆ ಆಗುವುದಿಲ್ಲ ಎಂಬುದು ಸರಕಾರದ ವಾದ.

ಅನ್ಯ ರಾಜ್ಯಗಳಲ್ಲೂ ಐಚ್ಛಿಕ ವಿಷಯಗಳಿಲ್ಲ
ಆಂಧ್ರಪ್ರದೇಶ, ತೆಲಂಗಾಣ, ತ.ನಾಡು, ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ಥಾನ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಗೆಜೆಟೆಡ್‌ ಪ್ರೊಬೆಷನರ್‌ ಹುದ್ದೆಗಳ ಮುಖ್ಯ ಪರೀಕ್ಷೆಗೆ ಐಚ್ಛಿಕ ವಿಷಯಗಳು ಇಲ್ಲ ಎನ್ನಲಾಗಿದೆ.

ಕನ್ನಡದಲ್ಲಿ ಬರೆಯಬಹುದು
ಗೆಜೆಟೆಡ್‌ ಪ್ರೊಬೆಷನರ್‌ ಹುದ್ದೆಗಳಿಗೆ ಪರೀಕ್ಷೆ ಬರೆಯಲು ಅರ್ಜಿ ಹಾಕುವಾಗಲೇ ಕನ್ನಡ ಅಥವಾ ಇಂಗ್ಲಿಷ್‌ ಭಾಷೆ ಆಯ್ದುಕೊಳ್ಳುವ ಅವಕಾಶವಿದೆ. ಹಾಗಾಗಿ ಐಚ್ಛಿಕ ವಿಷಯಗಳನ್ನು ತೆಗೆದು ಹಾಕುವುದರಿಂದ ಕನ್ನಡ ಭಾಷೆಗೆ ಅಥವಾ ಕನ್ನಡದಲ್ಲಿ ಪರೀಕ್ಷೆ ಬರೆಯುವುದಕ್ಕೆ ಸಮಸ್ಯೆ ಇಲ್ಲ. ಅದೇ ರೀತಿ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಅರ್ಹತಾ ಪರೀಕ್ಷೆ ಬರೆಯುವ ಅವಕಾಶವೂ ಹಾಗೆಯೇ ಇರಲಿದೆ. ಅರ್ಹತಾ ಪರೀಕ್ಷೆಯಲ್ಲಿ ಪಾಸ್‌ ಆದರೆ ಮಾತ್ರ ಮುಖ್ಯ ಪರೀಕ್ಷೆಯ ಇತರ ಪೇಪರ್‌ಗಳನ್ನು ಮೌಲ್ಯಮಾಪನಕ್ಕೆ ಪರಿಗಣಿಸಲಾಗುವ ಪದ್ಧತಿಯೂ ಹಿಂದಿನಂತೆಯೇ ಇರಲಿದೆ.

ಸ್ಕೇಲಿಂಗ್‌ ಬದಲು ಈ ಕ್ರಮ
ಕೆಪಿಎಸ್‌ಸಿಯಲ್ಲಿ ಆಮೂಲಾಗ್ರ ಸುಧಾರಣೆ ತರಲು ಅಗತ್ಯ ಶಿಫಾರಸುಗಳನ್ನು ನೀಡಲು ಕೇಂದ್ರ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಪಿ.ಸಿ. ಹೋಟಾ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. 2013ರಲ್ಲಿ ವರದಿ ನೀಡಿದ ಸಮಿತಿಯು ಒಟ್ಟು 65 ಪ್ರಮುಖ ಶಿಫಾರಸುಗಳನ್ನು ಮಾಡಿತ್ತು. ಅದರಲ್ಲಿ ಕೆಎಎಸ್‌ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳಿಗೆ ಸ್ಕೇಲಿಂಗ್‌ ಪದ್ಧತಿ ಅಳವಡಿಕೆ ಮುಖ್ಯವಾದುದು. ಈ ಬಗ್ಗೆ 2017ರಲ್ಲೇ ರಾಜ್ಯ ಸರಕಾರ ತಾತ್ವಿಕವಾಗಿ ಒಪ್ಪಿಕೊಂಡಿತ್ತು. ಈಗ ಸ್ಕೇಲಿಂಗ್‌ ಪದ್ಧತಿ ಬದಲು ಐಚ್ಛಿಕ ವಿಷಯಗಳನ್ನೇ ತೆಗೆದು ಹಾಕಲು ಮುಂದಾಗಿದೆ.

ಹೊಸ ಪದ್ಧತಿ ಹೇಗಿರಲಿದೆ?
ಗೆಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಕೆಪಿಎಸ್‌ಸಿ ನಡೆಸುವ ನೇಮಕಾತಿಗೆ ಪೂರ್ವಭಾವಿ ಮತ್ತು ಅಂತಿಮ ಎಂಬ ಎರಡು ಪರೀಕ್ಷೆಗಳಿವೆ. ಸರಕಾರದ ನಿರ್ಧಾರ ಅಂತಿಮವಾದರೆ ಪೂರ್ವಭಾವಿ ಪರೀಕ್ಷೆಗಳು ಮೊದಲಿನಂತೆ ಇರಲಿವೆ. ಮುಖ್ಯ ಪರೀಕ್ಷೆಯಲ್ಲಿ ಹಿಂದೆ 4 ಸಾಮಾನ್ಯ ಅಧ್ಯಯನ ಪರೀಕ್ಷೆ, ಎರಡು ಐಚ್ಛಿಕ ವಿಷಯ ಮತ್ತು ಒಂದು ಪ್ರಬಂಧ ಪೇಪರ್‌ ಸೇರಿ ಒಟ್ಟು ಏಳು ಪೇಪರ್‌ಗಳ ಪರೀಕ್ಷೆ ಬರೆಯಬೇಕಾಗಿತ್ತು. ಈಗ ತಲಾ 250 ಅಂಕಗಳ ನಾಲ್ಕು ಸಾಮಾನ್ಯ ಅಧ್ಯಯನ ಪೇಪರ್‌, ಒಂದು ಪ್ರಬಂಧ ಪೇಪರ್‌ ಬರೆಯಬೇಕಾಗುತ್ತದೆ. ಐಚ್ಛಿಕ ವಿಷಯ ಇರುವುದಿಲ್ಲ.

ಕೆಎಎಸ್‌ ಮುಖ್ಯ ಪರೀಕ್ಷೆಯ ಐಚ್ಛಿಕ ವಿಷಯಗಳಿಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳಿಸಿಕೊಡಲಾಗಿದೆ. ಅದು ಸದ್ಯ ಸರಕಾರದ ಬಳಿ ಇದೆ. ಸ್ಕೇಲಿಂಗ್‌ ಪದ್ಧತಿ ಅಳವಡಿಸುವ ವಿಚಾರವಾಗಿ ನಾನು ಪ್ರತಿಕ್ರಿಯಿಸುವುದಿಲ್ಲ
– ಎಸ್‌.ಪಿ. ಷಡಕ್ಷರಿ ಸ್ವಾಮಿ, ಕೆಪಿಎಸ್‌ಸಿ ಅಧ್ಯಕ್ಷ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.