ಕಾಸರಗೋಡು, ಕಣ್ಣೂರಿನ 4 ಬೂತ್ನಲ್ಲಿ ಮರುಮತದಾನ
Team Udayavani, May 17, 2019, 6:10 AM IST
ಹೊಸದಿಲ್ಲಿ/ಕಾಸರಗೋಡು: ಲೋಕಸಭೆ ಚುನಾವಣೆ ವೇಳೆ ಕೇರಳದಲ್ಲಿ ಬೋಗಸ್ ಮತದಾನ ನಡೆದಿದೆ ಎಂಬುದು ಸಾಬೀತಾದ ಹಿನ್ನೆಲೆಯಲ್ಲಿ ಇಲ್ಲಿನ 4 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಕೇಂದ್ರ ಚುನಾವಣ ಆಯೋಗ ಆದೇಶಿಸಿದೆ.
ಗುರುವಾರ ಈ ಕುರಿತು ನಿರ್ದೇಶನ ನೀಡಿದ ಆಯೋಗವು ಕಾಸರಗೋಡಿನ 3 ಮತ್ತು ಕಣ್ಣೂರಿನ ಒಂದು ಮತಗಟ್ಟೆಯಲ್ಲಿ ಮೇ 19ರಂದು ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಮರು ಮತದಾನ ನಡೆಸಲಾಗುವುದು ಎಂದು ಹೇಳಿದೆ.
ಕಾಸರಗೋಡು ಲೋಕಸಭಾ ಕ್ಷೇತ್ರದ ಕಲ್ಯಾಶೆÏೕರಿಯ ಪಿಲಾತ್ತಾರ (ಬೂತ್ ನಂಬ್ರ 19), ಪುದಿಯಂಗಾಡಿ ಜುಮಾಅತ್ ಎಚ್ಎಸ್ ನಾರ್ತ್ ಬ್ಲಾಕ್ (ಬೂತ್ ನಂಬ್ರ 69), ಜುಮಾಅತ್ ಎಚ್ಎಸ್ ಸೌತ್ ಬ್ಲಾಕ್(ಬೂತ್ ನಂಬ್ರ 70), ಕಣ್ಣೂರು ತಳಿಪರಂಬ ಪಾಂಬುರುತ್ತಿ ಮಾಪ್ಪಿಳ್ಳ ಎಯುಪಿಎಸ್(ಬೂತ್ ನಂಬ್ರ 166)ನಲ್ಲಿ ಮರುಮತದಾನ ನಡೆಯಲಿದೆ.
ಶುಕ್ರವಾರ ಸಂಜೆಯವರೆಗೂ ಚುನಾವಣ ಪ್ರಚಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಎ. 23ರಂದು ಈ ಮತಗಟ್ಟೆಗಳಲ್ಲಿ ನಡೆದ ಮತದಾನವನ್ನು ರದ್ದು ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.
ಚುನಾವಣ ವೀಕ್ಷಕರು ಸಲ್ಲಿಸಿರುವ ವರದಿಗಳು, ಆಯಾ ಜಿಲ್ಲೆಯ ಮತಗಟ್ಟೆ ಅಧಿಕಾರಿಗಳು ನೀಡಿದ ವರದಿಗಳು ಹಾಗೂ ಎಲ್ಲ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಗಣಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ