ಕಾಸರಗೋಡು ಅಪರಾಧ ಸುದ್ದಿಗಳು


Team Udayavani, May 11, 2022, 5:49 PM IST

Crime-News-KAS

ಅಂಗಡಿಯಿಂದ ಕಳವು: ಆರೋಪಿ ಬಂಧನ
ಕಾಸರಗೋಡು: ಚೆಮ್ನಾಡ್‌ ಕೊಂಬನಡ್ಕದ ಅಬ್ದುಲ್‌ ಹಮೀದ್‌ ಅವರ ವಿದ್ಯಾನಗರದ ಎಂಜಿನ್‌ ಆಯಿಲ್‌ ಅಂಗಡಿಯಿಂದ 2.5 ಲಕ್ಷ ರೂ. ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದ ಅಶ್ರಫ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವನನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಕಾಸರಗೋಡು: ತೈಕಡಪ್ಪುರದ ಬೋಟ್‌ ಜಟ್ಟಿ ಪರಿಸರದ ಪಿ.ವಿ. ಪವನ್‌(52) ಅವರ ಮೃತದೇಹ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹವನ್ನಿರಿಸಲಾಗಿದೆ.

ಘರ್ಷಣೆ: ನಾಲ್ವರಿಗೆ ಗಾಯ
ಉಪ್ಪಳ: ಎರಡು ಗುಂಪುಗಳ ಮಧ್ಯೆ ನಡೆದ ಘರ್ಷಣೆಯಿಂದ ನಾಲ್ವರು ಗಾಯಗೊಂಡಿದ್ದಾರೆ. ಜಗದೀಶ್‌ ಹಾಗು ಸತೀಶ್‌, ಇನ್ನೊಂದು ತಂಡದ ಮೋಹನ, ಪವಿತ್ರ ಗಾಯಗೊಂಡಿದ್ದಾರೆ. ಪೈವಳಿಕೆ ಅರಸು ರಂಗತ್ತೈ ಬಲ್ಲಾಳರು ಹಾಗು ಅವರ ಮಕ್ಕಳಾದ ಮೋಹನ, ಪವಿತ್ರಾ, ರಾಜೇಶ್‌, ಬಾಲಚಂದ್ರ ಸಹಿತ ಆರು ಮಂದಿ ಹಲ್ಲೆ ಮಾಡಿದ್ದಾಗಿ ಜಗದೀಶ್‌ ಹಾಗು ಸತೀಶ್‌ ಆರೋಪಿಸಿದ್ದಾರೆ. ಜಗದೀಶ್‌ ಹಾಗೂ ಸತೀಶ್‌ ಹಲ್ಲೆ ಮಾಡಿದ್ದಾಗಿ ಮೋಹನ ಹಾಗೂ ಪವಿತ್ರಾ ಆರೋಪಿಸಿದ್ದಾರೆ.

ಮನೆಯೊಳಗೆ ಬಚ್ಚಿಟ್ಟ ಅಕ್ರಮ ಕೋವಿ, ಗುಂಡು ವಶಕ್ಕೆ
ಅಡೂರು: ಮನೆಯೊಳಗೆ ಬಚ್ಚಿಟ್ಟ ಅಕ್ರಮ ಕೋವಿ ಹಾಗೂ ಗುಂಡುಗಳನ್ನು ಪೊಲೀಸರು ವಶಪಡಿಸಿದ್ದಾರೆ.

ಚಾಮಕೊಚ್ಚಿಯ ಚಿದಾನಂದನ್‌ ಆಲಿಯಾಸ್‌ ಪವಿತ್ರನ್‌(32) ಮನೆಯಿಂದ ಲೈಸನ್ಸ್‌ ರಹಿತ 2 ಕೋವಿ ಹಾಗೂ 27 ಗುಂಡುಗಳನ್ನು ಆದೂರು ಪೊಲೀಸರು ವಶಪಡಿಸಿದ್ದಾರೆ. ಈ ಸಂದರ್ಭದಲ್ಲಿ ಚಿದಾನಂದನ್‌ ಮನೆಯಲ್ಲಿರಲಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಅಡುಗೆ ಕೊಠಡಿಯ ಅಟ್ಟದಲ್ಲಿ ಸೌದೆ ರಾಶಿಯ ಮಧ್ಯೆ ಕೋವಿಗಳನ್ನು ಬಚ್ಚಿಡಲಾಗಿತ್ತು.

ಇಗರ್ಜಿಯ ಕಾಣಿಕೆ ಹುಂಡಿಯಿಂದ ಹಣ ಕಳವು
ಹೊಸದುರ್ಗ: ಎಣ್ಣಪ್ಪಾರ ಮುಕ್ಕುಳಿ ಸೈಂಟ್‌ ಆ್ಯಂಟಣಿ ಇಗರ್ಜಿಯ ಕಾಣಿಕೆ ಹುಂಡಿಯಿಂದ ಹಣ ಕಳವು ಮಾಡಲಾಗಿದೆ. ಈ ಬಗ್ಗೆ ಅಂಬಲತ್ತರ ಪೊಲೀಸರಿಗೆ ದೂರು ನೀಡಲಾಗಿದೆ.

ಸ್ಕೂಟರ್‌-ಬೈಕ್‌ ಢಿಕ್ಕಿ : ಇಬ್ಬರಿಗೆ ಗಾಯ
ಕಾಸರಗೋಡು: ಕಾಂಞಂಗಾಡ್‌ ಬಳಿಯ ಮಾವುಂಗಾಲ್‌ನಲ್ಲಿ ಸ್ಕೂಟರ್‌-ಬೈಕ್‌ ಢಿಕ್ಕಿ ಹೊಡೆದು ಇಬ್ಬರು ಗಾಯಗೊಂಡಿದ್ದಾರೆ.

ಬೈಕ್‌ ಚಲಾಯಿಸುತ್ತಿದ್ದ ವೆಳ್ಳಿಕ್ಕೋತ್‌ ನಿವಾಸಿ ಮಿಥುನ್‌(24) ಹಾಗು ಸ್ಕೂಟರ್‌ ಸವಾರ ನೆಲ್ಲಿಕ್ಕಾಡ್‌ ಪೇರಡ್ಕದ ಕೈಯಿಲ್‌ ಕೇಳು(68) ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಾವುಂಗಾಲ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುತ್ತಿಗೆ ಬಿಗಿದು ಕೊಲೆ ಯತ್ನ : ಪುತ್ರನ ವಿರುದ್ಧ ಕೇಸು ದಾಖಲು
ಹೊಸದುರ್ಗ: ಮಾಲೋಂ ಕರಿಚ್ಚೇರಿ ಪುಲ್ಲೋಡಿ ನಾರಾಯಣನ್‌(77) ಅವರ ಕುತ್ತಿಗೆ ಬಿಗಿದು ಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರ ಜನಾರ್ದನನ್‌ ವಿರುದ್ಧ ವೆಳ್ಳರಿಕುಂಡು ಪೊಲೀಸರು ಕೇಸು ದಾಖಲಿಸಿದ್ದಾರೆ. ನಾರಾಯಣನ್‌ ವೆಳ್ಳರಿಕುಂಡು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಟೋ ರಿಕ್ಷಾ ಢಿಕ್ಕಿ : ಬೈಕ್‌ ಸವಾರನಿಗೆ ಗಾಯ
ಹೊಸದುರ್ಗ: ಮಾಲೋಂ ಶಾಲೆ ಪರಿಸರದಲ್ಲಿ ಆಟೋ ರಿಕ್ಷಾ ಢಿಕ್ಕಿ ಹೊಡೆದು ಬೈಕ್‌ ಸವಾರ ಮಾಲೋಂ ಪರಂಬ್‌ನ ಸಿಂಧು ಸದನದ ಬಿಂದು ಮೋನ್‌ ಅವರ ಪುತ್ರ ಅಭಿಜಿತ್‌(21) ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮದ್ಯ ಸಹಿತ ಬಂಧನ
ಹೊಸದುರ್ಗ: ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಮದ್ಯ ಕೈವಶವಿರಿಸಿಕೊಂಡ ಆರೋಪದಲ್ಲಿ ನರ್ಕಿಲಕ್ಕೋಡ್‌ ಪಳ್ಳಿಕುನ್ನೇಲ್‌ನ ಪಿ.ಸಿ.ವರ್ಗೀಸ್‌ ಯಾನೆ ಜೋನ್ಸನ್‌(38)ನನ್ನು ವೆಳ್ಳರಿಕುಂಡು ಪೊಲೀಸರು ವೆಳ್ಳರಿಕುಂಡು ಬಸ್‌ ನಿಲ್ದಾಣ ಪರಿಸರದಿಂದ ಬಂಧಿಸಿದರು.

ಎರಡು ಹೊಟೇಲ್‌ಗ‌ಳು ಮುಚ್ಚುಗಡೆ
ಕಾಸರಗೋಡು: ತಳಂಗರೆಯಲ್ಲಿ ಆಹಾರ ಸುರಕ್ಷಾ ವಿಭಾಗದ ಅನುಮತಿಯಿಲ್ಲದೆ ಕಾರ್ಯಾಚರಿಸುತ್ತಿದ್ದ ಎರಡು ಹೊಟೇಲ್‌ಗ‌ಳನ್ನು ಆಹಾರ ಸುರಕ್ಷಾ ವಿಭಾಗ ಮುಚ್ಚಿಸಿದೆ.

ತಳಂಗರೆಯ ಬದರ್‌ ಹೊಟೇಲ್‌ ಹಾಗು ಒಂದು ಕ್ಯಾಂಟೀನ್‌ ಮುಚ್ಚಲಾಗಿದೆ. ಕಾಂಞಂಗಾಡ್‌ ಐಂಗೋತ್‌ನಲ್ಲಿ ಶುಚಿತ್ವವಿಲ್ಲದೆ ಕಾರ್ಯಾಚರಿಸುತ್ತಿದ್ದ ಹೊಟೇಲೊಂದನ್ನು ಮುಚ್ಚುಗಡೆಗೊಳಿಸಲಾಗಿದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.