ಕಟಪಾಡಿ :ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮಧ್ಯೆ ಡಿವೈಡರ್ ಏರಿದ ಕಾರು
Team Udayavani, Aug 14, 2021, 5:21 PM IST
ಕಾಪು : ರಾ.ಹೆ. 66 ರಲ್ಲಿ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮಧ್ಯದ ಸ್ಟ್ರೀಟ್ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದು, ಡಿವೈಡರ್ ಮೇಲೇರಿ ನಿಂತ ಘಟನೆ ಶನಿವಾರ ಮಧ್ಯಾಹ್ನ ಕಟಪಾಡಿಯಲ್ಲಿ ನಡೆದಿದೆ.
ಮಂಗಳೂರು ನೋಂದಾವಣೆಯ ಕಾರಿನಲ್ಲಿದ್ದವರು ಉಡುಪಿಗೆ ಆಗಮಿಸಿ, ಉಡುಪಿಯಿಂದ ಮಂಗಳೂರಿಗೆ ಮರಳುತ್ತಿದ್ದ ವೇಳೆ ಮಳೆಯ ಕಾರಣ ಅಪಘಾತ ಸಂಭವಿಸಿತ್ತು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿ ನಾಲ್ಕು ಮಂದಿ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಟಪಾಡಿ ಹೊರಠಾಣಾ ಎಎಸ್ಐ ದಯಾನಂದ್ ಮತ್ತು ಪೊಲೀಸರು ಸ್ಥಳಕ್ಕೆ ತೆರಳಿದ್ದು ಸ್ಥಳೀಯರ ಸಹಕಾರದೊಂದಿಗೆ ಅಪಘಾತಕ್ಕೊಳಗಾದ ಕಾರನ್ನು ತೆರವುಗೊಳಿಸಲಾಯಿತು.
ಇದನ್ನೂ ಓದಿ :ಮೊಬೈಲ್ ಶೋರೂಂನಲ್ಲಿ ಕಳವು ಪ್ರಕರಣ : 40 ಲ.ರೂ. ಮೌಲ್ಯದ ಮೊಬೈಲ್ಗಳ ಸಹಿತ ಓರ್ವನ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ