ಗ್ರಾಪಂಗಳಲ್ಲೂ ಕೆಡಿಪಿ ಸಭೆ
ಹಳ್ಳಿಗಳಿಗೂ ಕಾಲಿರಿಸಿದ ಪ್ರಗತಿ ಪರಿಶೀಲನೆ ಸಭೆ
Team Udayavani, Jun 15, 2019, 5:30 AM IST
ಬೆಂಗಳೂರು: ತಾಲೂಕು, ಜಿಲ್ಲಾ ಮಟ್ಟಗಳಲ್ಲಿ ನಡೆಯುತ್ತಿದ್ದ ಕೆಡಿಪಿ (ಪ್ರಗತಿ ಪರಿಶೀಲನೆ) ಸಭೆಗಳನ್ನು ಇನ್ನು ಮುಂದೆ ಗ್ರಾಮ ಪಂಚಾಯತ್ಗಳಲ್ಲೂ ನಡೆಸಲು ಅಧಿಕಾರ ನೀಡಲಾಗಿದೆ.
ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳೊಂದಿಗೆ ಶುಕ್ರವಾರ ಸಂವಾದ ನಡೆಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಅವರು ಈ ಕುರಿತು ಮಾಹಿತಿ ನೀಡಿ ಗ್ರಾಮ ಪಂಚಾಯತ್ಗಳಲ್ಲೂ ಕೆಡಿಪಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಈ ಕುರಿತು ಆದೇಶ ಸಹ ಹೊರಡಿಸಲಾಗಿದ್ದು ಇದನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಹೇಳಿದರು.
ಗ್ರಾಮ ಪಂಚಾಯತ್ಗಳಲ್ಲಿ ತೆರಿಗೆ ವಸೂಲಾತಿಗೆ ಹೆಚ್ಚಿನ ಒತ್ತು ನೀಡಬೇಕು. ಈ ತೆರಿಗೆಗಳಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕವಾಗಿ ಬಲಗೊಳ್ಳುತ್ತವೆ. ತಮಗೆ ಬೇಕಾದ ಕಾರ್ಯಕ್ರಮಗಳನ್ನು ತಾವೇ ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಕಳೆದ ವರ್ಷ ಒಟ್ಟು 462 ಕೋಟಿ ರೂ.ಗಳನ್ನು ಗ್ರಾಮ ಪಂಚಾಯತ್ಗಳು ತೆರಿಗೆ ವಸೂಲಿಯಿಂದ ಸಂಗ್ರಹಿಸಿದ್ದವು. ಈ ವರ್ಷ ಮತ್ತಷ್ಟು ಹೆಚ್ಚು ಸಂಗ್ರಹ ಮಾಡಬೇಕು ಎಂದು ತಿಳಿಸಿದರು.
ವಾಟ್ಸ್ ಆ್ಯಪ್ ಗ್ರೂಪ್ ರಚನೆಗೆ ಸೂಚನೆ
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ವಾಣಿ ಎಂಬ ವಾಟ್ಸ್ಆ್ಯಪ್ ಗ್ರೂಪ್ ರಚನೆ ಮಾಡಿಕೊಂಡು ದೈನಂದಿನ ಚಟುವಟಿಕೆಗಳ ಬಗ್ಗೆ ಇಲಾಖೆಗೆ ಮಾಹಿತಿ ನೀಡಿ ಎಂದು ತಿಳಿಸಿದರು. ದೈನಂದಿನ ಸುತ್ತೋಲೆ ಸಹ ಇದರಲ್ಲೇ ಕಳುಹಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು