- Thursday 12 Dec 2019
ಐಎಂಎ ಮೇಲೆ ಇಡಿ ನಿಗಾ
ಐಎಂಎಯ ಏಳು ಮಂದಿ ನಿರ್ದೇಶಕರ ಬಂಧನ
Team Udayavani, Jun 13, 2019, 5:00 AM IST
ಬೆಂಗಳೂರು: ರಾಜಧಾನಿಯಲ್ಲಿ ತಲ್ಲಣ ಮೂಡಿಸಿರುವ ಐಎಂಎ ಜುವೆಲರ್ ಸಂಸ್ಥೆಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮುಖ್ಯಸ್ಥ ಮನ್ಸೂರ್ ಖಾನ್ ಪತ್ತೆ ಕಾರ್ಯಾಚರಣೆ ನಡುವೆಯೇ ಏಳು ನಿರ್ದೇಶಕರನ್ನು ಬುಧವಾರ ಬಂಧಿಸಲಾಗಿದೆ. ಈ ನಡುವೆ ಜಾರಿ ನಿರ್ದೇಶನಾಲಯ ‘ರಂಗಪ್ರವೇಶ’ ಮಾಡಿದ್ದು ಪ್ರಕರಣದ ಮಾಹಿತಿ ಸಂಗ್ರಹಿಸುತ್ತಿದೆ. ಇನ್ನೊಂದೆಡೆ ಡಿಐಜಿ ರವಿಕಾಂತೇಗೌಡ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿದೆ.
ಐಎಂಎ ನಿರ್ದೇಶಕರಾದ ನಿಜಾಮುದ್ದೀನ್, ನಾಸಿರ್ ಹುಸೇನ್, ನವೀದ್ ಅಹ್ಮದ್, ಹರ್ಷದ್ ಖಾನ್, ವಾಸಿಂ, ಅಫ್ಸರ್ ಪಾಷಾ ಮತ್ತು ದಾದಾಪೀರ್ ಬಂಧಿತರು. ನಾಪತ್ತೆಯಾಗಿರುವ ಮನ್ಸೂರ್ ಖಾನ್ ಬಗ್ಗೆಯೂ ಮಾಹಿತಿ ಪಡೆಯಲಾಗುತ್ತಿದೆ.
ಜೂ.6, 7ರಂದು ಮನ್ಸೂರ್ ಮತ್ತು ಆರೋಪಿಗಳು ಭೇಟಿಯಾಗಿದ್ದರು. ಈ ವೇಳೆ ವ್ಯವಹಾರದಲ್ಲಿ ನಷ್ಟವಾಗುತ್ತಿದ್ದು, ಅಂಗಡಿಯಲ್ಲಿರುವ ಚಿನ್ನಾಭರಣ ಹಾಗೂ ಕೆಲವು ಆಸ್ತಿಯನ್ನು ಮಾರಾಟ ಮಾಡಿ ಹಣ ನೀಡುವ ಬಗ್ಗೆ ಮನ್ಸೂರ್ ತೀರ್ಮಾನಿಸಿದ್ದ. ಆದರೆ ಜೂ. 8ರಂದು ಮನ್ಸೂರ್ ತಲೆಮರೆಸಿಕೊಂಡಿದ್ದಾನೆ ಎಂದು ನಿರ್ದೇಶಕರು ತನಿಖೆ ವೇಳೆ ತಿಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.
20 ಸಾವಿರ ದೂರು ದಾಖಲು
ಘಟನೆಗೆ ಸಂಬಂಧಿಸಿ ಈಗಾಗಲೇ 20 ಸಾವಿರ ದೂರುಗಳು ದಾಖಲಾಗಿವೆ. ಬುಧವಾರ ಒಂದೇ ದಿನ 9 ಸಾವಿರ ದೂರುಗಳು ದಾಖಲಾಗಿವೆ. ರಾತ್ರಿ 8 ಗಂಟೆಯವರೆಗೂ ದೂರುಗಳನ್ನು ಸ್ವೀಕರಿಸಲಾಗಿದೆ.
ಈ ವಿಭಾಗದಿಂದ ಇನ್ನಷ್ಟು
-
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಜಾರ್ಖಂಡ್ ಚುನಾವಣಾ ಪ್ರಚಾರದಲ್ಲಿದ್ದಾರೆ ಎಂದು ಮುಖ್ಯಮಂತ್ರಿ...
-
ಬೆಂಗಳೂರು: ಈ ವರ್ಷಾಂತ್ಯದೊಳಗೆ ಎಐಸಿಸಿ ಪುನಾರಚನೆಯಾಗಲಿದ್ದು, ಆ ವೇಳೆಯಲ್ಲಿಯೇ ರಾಜ್ಯದಲ್ಲಿಯೂ ಕೆಪಿಸಿಸಿ ಪುನಾರಚನೆ ಮಾಡಲು ಸಿದ್ಧತೆ ನಡೆದಿದೆ. ರಾಷ್ಟ್ರಮಟ್ಟದಲ್ಲಿ...
-
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ಕುರಿತು ಸರಕಾರಕ್ಕೆ ಇನ್ನೂ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ....
-
ಬೆಂಗಳೂರು: ಪಾರದರ್ಶಕತೆ ಹಾಗೂ ಯೋಜನೆಗಳಿಗೆ ವೇಗ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇ- ಆಡಳಿತ ಜಾರಿಗೊಳಿಸಲು ಮುಂದಾಗಿದ್ದು, ಬರುವ ತಿಂಗಳಿನಿಂದಲೇ...
-
ಬೆಂಗಳೂರು: "ಜೆಡಿಎಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಎಚ್.ಡಿ. ಕುಮಾರಸ್ವಾಮಿಯವರು ನಾಯಕತ್ವ ವಹಿಸಿಕೊಳ್ಳಬೇಕು, ಇಲ್ಲವೇ ಪೂರ್ಣ ಪ್ರಮಾಣದಲ್ಲಿ ಪಕ್ಷ ಸಂಘಟನೆಯಲ್ಲಿ...
ಹೊಸ ಸೇರ್ಪಡೆ
-
ಬೀದರ: ನಗರದ ವಿವಿಧೆಡೆ ಬುಧವಾರ ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ್ ದಿಢೀರ್ ಭೇಟಿ ನೀಡಿ, ಆಯಾ ಇಲಾಖೆಗಳ ಕಾರ್ಯವೈಖರಿ ಪರಿಶೀಲನೆ ನಡೆಸಿದರು. ಚಿದ್ರಿಯ...
-
ಕಲಬುರಗಿ: ಫೆಬ್ರವರಿ 5 ರಿಂದ ಕಲಬುರಗಿಯಲ್ಲಿ ನಡೆಯಲಿರುವ ಅಖಿಲ ಭಾರತ 85 ನೇಯ ಸಮ್ಮೇಳನಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮ್ಮೇಳನ ಯಶಸ್ವಿಯಾಗಿ ನೆರವೇರುವ ನಿಟ್ಟಿನಲ್ಲಿ...
-
ಶಿರೂರ: ಜಿಲ್ಲಾಡಳಿತ ಆಶ್ರಯದಲ್ಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಆಶ್ರಯಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ವಿಶೇಷ...
-
ಮುಧೋಳ: ನಗರದಲ್ಲಿ ಬಹುದಿನಗಳಿಂದ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಭಾಗ್ಯ ದೊರೆಯದ ಕಾರಣ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ...
-
ಮಂಗಳೂರು: ದಕ್ಷಿಣ ಕನ್ನಡ ವಿಧಾನಸಭಾ ವ್ಯಾಪ್ತಿಯ ವಿವಿಧ ಇಲಾಖೆಗಳ ಕಾಮಗಾರಿಯ ಕುರಿತು ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ...