ಕಾಯಿ ಕೀಳಲು ತೆಂಗಿನ ಮರ ಹತ್ತಿದ ವ್ಯಕ್ತಿಗೆ ಹೃದಯಾಘಾತ, ಮರದಲ್ಲೇ ಕೊನೆಯುಸಿರು !
50 ಅಡಿ ಎತ್ತರದ ಮರದಿಂದ ಮೃತದೇಹ ಇಳಿಸಲು ಕ್ರೇನ್ ಬಳಕೆ
Team Udayavani, Feb 6, 2023, 10:38 PM IST
ಕೆಂಗೇರಿ: ತೆಂಗಿನಕಾಯಿ ಕೀಳಲು ತೆಂಗಿನ ಮರ ಏರಿದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮರದ ಮೇಲೆಯೇ ಕೊನೆಯುಸಿರೆಳೆದ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಮೈಲಸಂದ್ರ ನಿವಾಸಿ ನಾರಾಯಣಪ್ಪ (60) ಮೃತಪಟ್ಟವರು. ಬೆಳಗ್ಗೆ 7.30ರ ಸುಮಾರಿಗೆ ಘಟನೆ ನಡೆದಿದೆ. ಮೈಲಸಂದ್ರದ ವಿಜಯಶ್ರೀ ಲೇಔಟ್ನಲ್ಲಿರುವ ವೆಂಕಟರಣ ದೇವಸ್ಥಾನ ಸಮೀಪದಲ್ಲಿ ಸುಮಾರು 50 ಅಡಿ ಎತ್ತರದ ತೆಂಗಿನ ಮರವಿದೆ. ಪ್ರತಿ ಬಾರಿಯೂ ನಾರಾಯಣಪ್ಪ ಅವರೇ ಈ ಮರದಲ್ಲಿ ಕಾಯಿ ಕೀಳುತ್ತಿದ್ದರು. ಸೋಮವಾರ ಬೆಳಗ್ಗೆ ಕೂಡ ಮರ ಹತ್ತಿದ್ದಾರೆ.
ಈ ವೇಳೆ ಅಲ್ಲಿಯೇ ಹೃದಯಾಘಾತವಾಗಿದೆ. ಬಹಳ ಹೊತ್ತಾದರೂ ಕೆಳಗೆ ಬಂದಿಲ್ಲ. ಫೋನ್ ಮಾಡಿದರೂ, ಕೂಗಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ. ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.
ಅನಂತರ ಅಗ್ನಿಶಾಮಕ ಸಿಬ್ಬಂದಿ ಕ್ರೇನ್ ಮೂಲಕ ತೆಂಗಿನ ಮರದ ಮೇಲೆ ಕುಳಿತಿದ್ದ ನಾರಾಯಣಪ್ಪರನ್ನು ಕೆಳಗಿಳಿಸಿ ನೋಡಿದಾಗ ಮೃತಪಟ್ಟಿರುವುದು ಗೊತ್ತಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದರು. ಘಟನೆ ಸಂಬಂಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬ್ರಾಹ್ಮಣರು ಮುಖ್ಯಮಂತ್ರಿಯಾಗಬಾರದೆ?: ಪೇಜಾವರ ಶ್ರೀ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ