ಕೇರಳ ರಾಜಕೀಯ ಅಖಾಡ: ತಾವರೆ ಅರಳಿದ “ನೇಮಂ”ನಲ್ಲಿ ರಂಗೇರಿದ ಹಣಾಹಣಿ

ಈ ಕ್ಷೇತ್ರದಲ್ಲಿ ಬಿಜೆಪಿ-ಸಿಪಿಎಂ ಮಧ್ಯೆ ಜಿದ್ದಾಜಿದ್ದಿನ ಹೋರಾಟ ನಡೆದಿತ್ತು.

Team Udayavani, Mar 19, 2021, 5:30 PM IST

ಕೇರಳ ರಾಜಕೀಯ ಅಖಾಡ: ತಾವರೆ ಅರಳಿದ “ನೇಮಂ”ನಲ್ಲಿ ರಂಗೇರಿದ ಹಣಾಹಣಿ

ಕಾಸರಗೋಡು, ಮಾ.19: ಕೇರಳದಲ್ಲಿ ಪ್ರಪ್ರಥಮವಾಗಿ ತಾವರೆ ಅರಳಿದ ನೇಮಂ ವಿಧಾನಸಭಾ ಕ್ಷೇತ್ರ ದೇಶದ ಗಮನ ಸೆಳೆದಿದೆ. ಘಟಾನುಘಟಿಗಳು ಸ್ಪರ್ಧಿಸುತ್ತಿರುವುದರಿಂದ ಈ ಕ್ಷೇತ್ರ ರಂಗೇರಿಸಿಕೊಂಡಿದೆ.

ತಿರುವನಂತಪುರ ಜಿಲ್ಲೆಯ ನೇಮಂ ವಿಧಾನಸಭಾ ಕ್ಷೇತ್ರದಲ್ಲಿ 2016 ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಪ್ರಥಮ ಬಾರಿಗೆ ಗೆದ್ದುಕೊಂಡು ಇತಿಹಾಸ ರಚಿಸಿತ್ತು. ಹಿರಿಯ ಬಿಜೆಪಿ ನಾಯಕ ಒ.ರಾಜಗೋಪಾಲ್‌ ಗೆಲುವು ಸಾಧಿಸಿದ್ದರು. ಈ ಸೀಟನ್ನು ಉಳಿಸಿಕೊಳ್ಳಲು ಬಿಜೆಪಿ ಹೋರಾಡುತ್ತಿದ್ದರೆ, ಬಿಜೆಪಿಯಿಂದ ಕಸಿದುಕೊಳ್ಳಲು ಕಾಂಗ್ರೆಸ್‌, ಸಿಪಿಎಂ ತೀವ್ರ ಹಣಾಹಣಿ ನಡೆಸುತ್ತಿದೆ.

ಬಿಜೆಪಿಯಿಂದ ಹಿರಿಯ ನೇತಾರ, ಮಾಜಿ ಮಿಜೋರಾಂ ರಾಜ್ಯಪಾಲ ಕುಮ್ಮನಂ ರಾಜಶೇಖರನ್‌ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್‌ನಿಂದ ಲೀಡರ್‌ ಎಂದೇ ಖ್ಯಾತರಾಗಿದ್ದ ಮಾಜಿ ಮುಖ್ಯಮಂತ್ರಿ ದಿ|ಕೆ.ಕರುಣಾಕರನ್‌ ಅವರ ಪುತ್ರ, ಕಾಂಗ್ರೆಸ್‌ ಮಾಜಿ ರಾಜ್ಯ ಸಮಿತಿ ಅಧ್ಯಕ್ಷ, ವಡಗರ ಸಂಸದ ಕೆ.ಮುರಳೀಧರನ್‌ ಕಣಕ್ಕಿಳಿದಿದ್ದಾರೆ. ಎಡರಂಗದಿಂದ ಸಿಪಿಎಂ ಮುಖಂಡ ವಿ.ಶಿವನ್‌ ಕುಟ್ಟಿ ಸ್ಪರ್ಧಿಸುತ್ತಿದ್ದಾರೆ. ಈ ಮೂವರು ಅಭ್ಯರ್ಥಿಗಳ ಮಧ್ಯೆ ಜಿದ್ದಾಜಿದ್ದಿನ ಹೋರಾಟ ನಡೆಯಲಿದೆ. ತ್ರಿಕೋನ ಸ್ಪರ್ಧೆ ನಡೆಯಲಿರುವ ಈ ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

2016 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲೇ ಪ್ರಥಮವಾಗಿ ತಾವರೆ ಅರಳಿತ್ತು. ಬಿಜೆಪಿಯ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಒ.ರಾಜಗೋಪಾಲ್‌ ಅವರು ಗೆಲುವು ಸಾಧಿಸಿದ್ದರು. ಒ.ರಾಜಗೋಪಾಲ್‌ 67,813 ಮತಗಳನ್ನು, ಸಿಪಿಎಂನ ಎ.ಶಿವನ್‌ ಕುಟ್ಟಿ 59,142, ಐಕ್ಯರಂಗದ ಅಭ್ಯರ್ಥಿ ಸುರೇಂದ್ರನ್‌ ಪಿಳ್ಳೆ 13860 ಮತಗಳನ್ನು ಪಡೆದಿದ್ದರು. ಅನಂತರದ ಲೋಕಸಭೆ ಮತ್ತು ಪಂಚಾಯತ್‌ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿಯೇ ಮೊದಲ ಸ್ಥಾನ ಉಳಿಸಿಕೊಂಡಿದೆ.

ತಿರುವನಂತಪುರಂ ಸೆಕ್ರೆಟರಿಯೇಟ್‌ನಿಂದ 9 ಕಿ.ಮೀ. ದೂರವಿರುವ ನೇಮಂ ವಿಧಾನಸಭಾ ಕ್ಷೇತ್ರದಲ್ಲಿ 21 ಕಾರ್ಪರೇಶನ್‌ ವಾರ್ಡ್‌ಗಳಿವೆ. ಇದರಲ್ಲಿ 14 ವಾರ್ಡ್‌ಗಳು ಬಿಜೆಪಿಯ ಕೈಯಲ್ಲಿದ್ದರೆ, ಬಾಕಿ 7 ವಾರ್ಡ್‌ಗಳು ಸಿಪಿಎಂ ಕೈಯಲ್ಲಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ-ಸಿಪಿಎಂ ಮಧ್ಯೆ ಜಿದ್ದಾಜಿದ್ದಿನ ಹೋರಾಟ ನಡೆದಿತ್ತು. ಆದರೆ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತಾರ ಕೆ.ಮುರಳೀಧರನ್‌ ಸ್ಪರ್ಧಿಸುತ್ತಿರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ರಾಜ್ಯದಲ್ಲಿ ಪ್ರಪ್ರಥಮವಾಗಿ ತಾವರೆ ಅರಳಿದ ನೇಮಂ ಬಿಜೆಪಿ ಉಳಿಸಿಕೊಳ್ಳುವುದೇ, ಕಳೆದ ಚುನಾವಣೆಯಲ್ಲಿ ಎರಡನೇ ಸ್ಥಾನದಲ್ಲಿದ್ದ ಸಿಪಿಎಂ ಈ ಕ್ಷೇತ್ರವನ್ನು ಕಸಿದುಕೊಳ್ಳುವುದೇ, ಕಾಂಗ್ರೆಸ್‌ ಗೆಲುವು ಸಾಧಿಸುವುದೇ ಎಂಬುದು ಕಾದು ನೋಡಬೇಕು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP’s Sonia becomes chief of UP block where husband works as sweeper

ಉ. ಪ್ರದೇಶದ ಬಾಲಿಯಖೇರಿ ಬ್ಲಾಕ್‌ ನ ಸ್ವೀಪರ್ ಪತ್ನಿಯೇ ಬ್ಲಾಕ್‌ ನ ಮುಖ್ಯಸ್ಥೆಯಾಗಿ ಅಧಿಕಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರ : ಜಿದ್ದಾಜಿದ್ದಿನ ತ್ರಿಕೋನ ಸ್ಪರ್ಧೆ

ಮಂಜೇಶ್ವರ ವಿಧಾನಸಭಾ ಕ್ಷೇತ್ರ : ಜಿದ್ದಾಜಿದ್ದಿನ ತ್ರಿಕೋನ ಸ್ಪರ್ಧೆ

ಕಾಸರಗೋಡು ವಿಧಾನಸಭಾ ಕ್ಷೇತ್ರ ಮುಸ್ಲಿಂಲೀಗ್‌ನ ಭದ್ರಕೋಟೆ: ಈ ಬಾರಿ ತ್ರಿಕೋನ ಸ್ಪರ್ಧೆ

ಕಾಸರಗೋಡು ವಿಧಾನಸಭಾ ಕ್ಷೇತ್ರ ಮುಸ್ಲಿಂಲೀಗ್‌ನ ಭದ್ರಕೋಟೆ: ಈ ಬಾರಿ ತ್ರಿಕೋನ ಸ್ಪರ್ಧೆ

ಕೇರಳ ಅಖಾಡ: ಕೋನ್ನಿ ಕ್ಷೇತ್ರ-ಐಕ್ಯರಂಗ, ಎಡರಂಗ ಕೋಟೆಯೊಳಗೆ ಕಮಲ ಅರಳುತ್ತಾ

ಕೇರಳ ಅಖಾಡ: ಕೋನ್ನಿ ಕ್ಷೇತ್ರ-ಐಕ್ಯರಂಗ, ಎಡರಂಗ ಕೋಟೆಯೊಳಗೆ ಕಮಲ ಅರಳುತ್ತಾ?

ಕೇರಳ ಅಖಾಡ: ಸೋಲಿಲ್ಲದ ಸರದಾರ…12ನೇ ಬಾರಿಯೂ ಚಾಂಡಿ ದಾಖಲೆಯ ಜಯ ಸಾಧಿಸುತ್ತಾರಾ

ಕೇರಳ ಅಖಾಡ: ಸೋಲಿಲ್ಲದ ಸರದಾರ…12ನೇ ಬಾರಿಯೂ ಚಾಂಡಿ ದಾಖಲೆಯ ಜಯ ಸಾಧಿಸುತ್ತಾರಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.