ಕೇರಳ ಚುನಾವಣಾ ಅಖಾಡ: ಈ ಬಾರಿ ಮಂಜೇಶ್ವರ ಯುಡಿಎಫ್ ಕೋಟೆಗೆ ಬಿಜೆಪಿ ಲಗ್ಗೆ ಇಡಲಿದೆಯೇ?

ಯುಡಿಎಫ್‌ ಅಭ್ಯರ್ಥಿ ಎ.ಕೆ.ಎಂ.ಅಶ್ರಫ್‌ ಅವರ ಆತ್ಮವಿಶ್ವಾಸ ವರ್ಧಿಸಿದೆ.

Team Udayavani, Mar 22, 2021, 6:40 PM IST

ಕೇರಳ ಚುನಾವಣಾ ಅಖಾಡ: ಈ ಬಾರಿ ಮಂಜೇಶ್ವರ ಯುಡಿಎಫ್ ಕೋಟೆಗೆ ಬಿಜೆಪಿ ಲಗ್ಗೆ ಇಡಲಿದೆಯೇ

ಕಾಸರಗೋಡು, ಮಾ.22: ಕುದುರೆ ಏರಿ ಬಂದು ಕೋಟೆಗಳನ್ನು ಕಾಯ್ದ ಜಿಲ್ಲೆ ಕಾಸರಗೋಡು. ಕಾಸರಗೋಡು ಜಿಲ್ಲೆ ಎಲ್‌ಡಿಎಫ್‌, ಯುಡಿಎಫ್‌ನ ಭದ್ರ ಕೋಟೆಯಾಗಿದೆ. ಕೇರಳದ  ಉತ್ತರದಲ್ಲಿರುವ ಮಂಜೇಶ್ವರ, ಜಿಲ್ಲೆಯ ಮಧ್ಯ ಭಾಗದಲ್ಲಿರುವ ಉದುಮ ವಿಧಾನಸಭಾ ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ದಿನದಿಂದ ದಿನಕ್ಕೆ ಪ್ರಚಾರದ ಕಾವು ಏರುತ್ತಿದೆ. ಈ ಬಾರಿ ಈ ಕೋಟೆಗೆ ಯಾರು ಲಗ್ಗೆ ಇಡಲಿದ್ದಾರೆ ಎಂಬುದನ್ನು ತಿಳಿಯಲು ಚುನಾವಣೆಯ ಫಲಿತಾಂಶದವರೆಗೆ ಕಾಯಬೇಕು.

ಇದನ್ನೂ ಓದಿ:‘ಮಣಿಕರ್ಣಿಕಾ’ ಚಿತ್ರದ ನಟನೆಗೆ ಕಂಗನಾಗೆ ಒಲಿದ ರಾಷ್ಟ್ರೀಯ ಅತ್ಯುತ್ತಮ ನಟಿ ಪ್ರಶಸ್ತಿ

ಕುಂಬಳೆ ಆರಿಕ್ಕಾಡಿ ಕೋಟೆಯಿರುವ ಮಂಜೇಶ್ವರ ವಿಧಾನಸಭಾ ಕ್ಷೇತ್ರವನ್ನು ಕೈವಶಮಾಡಿಕೊಳ್ಳಲು ಎನ್‌ಡಿಎ ಅಭ್ಯರ್ಥಿ ಬಿಜೆಪಿ ಕೇರಳ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್‌ ಚುನಾವಣಾ ಪ್ರಚಾರಕ್ಕೆ ತೆರಳಿದ್ದು ಹೆಲಿಕಾಪ್ಟರ್‌ನಲ್ಲಿ. 2016 ರ ವಿಧಾನಸಭಾ ಚುನಾವಣೆಯಲ್ಲಿ 89 ಮತಗಳ ಅಂತರದಿಂದ ಯುಡಿಎಫ್‌ ಅಭ್ಯರ್ಥಿ ಪಿ.ಬಿ.ಅಬ್ದುಲ್‌ ರಝಾಕ್‌ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್‌ ಅವರನ್ನು ಪರಾಭವಗೊಳಿಸಿದ್ದರು. ಸುರೇಂದ್ರ ಹೆಸರಿನ ಇನ್ನೋರ್ವ ಅಭ್ಯರ್ಥಿ ಪಡೆದ ಮತಗಳು ಕೆ.ಸುರೇಂದ್ರನ್‌ ಗೆಲುವಿನ ಓಟಕ್ಕೆ ತಡೆಯೊಡ್ಡಿತ್ತು.

ಈ ಬಾರಿ ವಿಜಯ ಖಚಿತ ಎಂಬುದಾಗಿ ಕೆ.ಸುರೇಂದ್ರನ್‌ ಹೇಳುತ್ತಿದ್ದರೂ, ಪಿ.ಬಿ.ಅಬ್ದುಲ್‌ ರಝಾಕ್‌ ನಿಧನದ ಹಿನ್ನೆಲೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಎಂ.ಸಿ.ಖಮರುದ್ದೀನ್‌ 7,923 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಯುಡಿಎಫ್‌ ಅಭ್ಯರ್ಥಿ ಎ.ಕೆ.ಎಂ.ಅಶ್ರಫ್‌ ಅವರ ಆತ್ಮವಿಶ್ವಾಸ ವರ್ಧಿಸಿದೆ.

1991 ರಿಂದ ನಿರಂತರವಾಗಿ ಎಡರಂಗವನ್ನು ಗೆಲ್ಲಿಸಿರುವ ಬೇಕಲ, ಚಂದ್ರಗಿರಿ ಕೋಟೆಗಳಿರುವ ಉದುಮ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಐಕ್ಯರಂಗ ಕೆಪಿಸಿಸಿ ಕಾರ್ಯದರ್ಶಿ ಬಾಲಕೃಷ್ಣನ್‌ ಪೆರಿಯ ಅವರನ್ನು ಕಣಕ್ಕಿಳಿಸಿದೆ. 2016ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್‌ ನ ಕೆ.ಸುಧಾಕರನ್‌ ಅವರ ಮುನ್ನಡೆಯನ್ನು ಲೋಕಸಭಾ ಚುನಾವಣೆಯಲ್ಲಿ ಉದುಮ ಕ್ಷೇತ್ರದಲ್ಲಿ ರಾಜ್‌ಮೋಹನ್‌ ಉಣ್ಣಿತ್ತಾನ್‌ ಒಂಬತ್ತು ಸಾವಿರದಷ್ಟು ಮತಗಳನ್ನು ಹೆಚ್ಚು ಪಡದಿದ್ದರು. ಈ ಮತ ಹೆಚ್ಚಳ ಯುಡಿಎಫ್‌ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ಈ ಕ್ಷೇತ್ರದ ಪೆರಿಯ ಕಲೊಟ್‌ನಲ್ಲಿ ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಹತ್ಯೆ ಹಾಗೂ ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿರುವುದು ಯುಡಿಎಫ್‌ಗೆ ಅನುಕೂಲಕರವಾಗಿದೆ ಎಂದು ಯುಡಿಎಫ್‌ ಭರವಸೆ ಹೊಂದಿದೆ. ಆದರೆ 2006 ರಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್‌ ಅಭ್ಯರ್ಥಿ ಚೆರ್ಕಳಂ ಅಬ್ದುಲ್ಲ ಅವರನ್ನು ಪರಾಭವಗೊಳಿಸಿದ ನ್ಯಾಯವಾದಿ ಸಿ.ಎಚ್‌.ಕುಂಞಂಬು ಅವರನ್ನು ಉದುಮ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಕಣಕ್ಕಿಳಿಸಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP’s Sonia becomes chief of UP block where husband works as sweeper

ಉ. ಪ್ರದೇಶದ ಬಾಲಿಯಖೇರಿ ಬ್ಲಾಕ್‌ ನ ಸ್ವೀಪರ್ ಪತ್ನಿಯೇ ಬ್ಲಾಕ್‌ ನ ಮುಖ್ಯಸ್ಥೆಯಾಗಿ ಅಧಿಕಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರ : ಜಿದ್ದಾಜಿದ್ದಿನ ತ್ರಿಕೋನ ಸ್ಪರ್ಧೆ

ಮಂಜೇಶ್ವರ ವಿಧಾನಸಭಾ ಕ್ಷೇತ್ರ : ಜಿದ್ದಾಜಿದ್ದಿನ ತ್ರಿಕೋನ ಸ್ಪರ್ಧೆ

ಕಾಸರಗೋಡು ವಿಧಾನಸಭಾ ಕ್ಷೇತ್ರ ಮುಸ್ಲಿಂಲೀಗ್‌ನ ಭದ್ರಕೋಟೆ: ಈ ಬಾರಿ ತ್ರಿಕೋನ ಸ್ಪರ್ಧೆ

ಕಾಸರಗೋಡು ವಿಧಾನಸಭಾ ಕ್ಷೇತ್ರ ಮುಸ್ಲಿಂಲೀಗ್‌ನ ಭದ್ರಕೋಟೆ: ಈ ಬಾರಿ ತ್ರಿಕೋನ ಸ್ಪರ್ಧೆ

ಕೇರಳ ಅಖಾಡ: ಕೋನ್ನಿ ಕ್ಷೇತ್ರ-ಐಕ್ಯರಂಗ, ಎಡರಂಗ ಕೋಟೆಯೊಳಗೆ ಕಮಲ ಅರಳುತ್ತಾ

ಕೇರಳ ಅಖಾಡ: ಕೋನ್ನಿ ಕ್ಷೇತ್ರ-ಐಕ್ಯರಂಗ, ಎಡರಂಗ ಕೋಟೆಯೊಳಗೆ ಕಮಲ ಅರಳುತ್ತಾ?

ಕೇರಳ ಅಖಾಡ: ಸೋಲಿಲ್ಲದ ಸರದಾರ…12ನೇ ಬಾರಿಯೂ ಚಾಂಡಿ ದಾಖಲೆಯ ಜಯ ಸಾಧಿಸುತ್ತಾರಾ

ಕೇರಳ ಅಖಾಡ: ಸೋಲಿಲ್ಲದ ಸರದಾರ…12ನೇ ಬಾರಿಯೂ ಚಾಂಡಿ ದಾಖಲೆಯ ಜಯ ಸಾಧಿಸುತ್ತಾರಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.