ಗುಜರಾತ್‌ ಅಧ್ಯಯನಕ್ಕೆ ಹೊರಟ ಕೇರಳ :ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ಯುಡಿಎಫ್ ಕಿಡಿ


Team Udayavani, Apr 29, 2022, 8:50 AM IST

ಗುಜರಾತ್‌ ಅಧ್ಯಯನಕ್ಕೆ ಹೊರಟ ಕೇರಳ :ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ಯುಡಿಎಫ್ ಕಿಡಿ

ತಿರುವನಂತಪುರ/ಅಹ್ಮದಾಬಾದ್‌: ಗುಜರಾತ್‌ ಮಾದರಿ ಎಂದರೆ ಸಿಡಿದು ಬೀಳುವ ಕೇರಳದ ಎಲ್‌ಡಿಎಫ್ ಸರ್ಕಾರ ಈಗ ಅದೇ ರಾಜ್ಯಕ್ಕೆ ಅಧ್ಯಯನ ತಂಡ ಕಳುಹಿಸಿಕೊಟ್ಟಿದೆ.

ವಿಜಯ ರೂಪಾಣಿ ಗುಜರಾತ್‌ ಸಿಎಂ ಆಗಿದ್ದ ವೇಳೆ ನ್ಯಾಷನಲ್‌ ಇನ್ಫೊರ್ಮಾಟಿಕ್‌ ಸೆಂಟರ್‌ (ಎನ್‌ಐಸಿ) ಸಹಯೋಗದಲ್ಲಿ ಇ-ಆಡಳಿತ ವ್ಯವಸ್ಥೆಯಲ್ಲಿ ಜಾರಿ ತಂದಿರುವ ಡ್ಯಾಶ್‌ಬೋರ್ಡ್‌ ವ್ಯವಸ್ಥೆಯನ್ನು ಅರಿತುಕೊಳ್ಳಲು ಮುಖ್ಯ ಕಾರ್ಯದರ್ಶಿ ವಿ.ಪಿ.ಜಾಯ್‌ ನೇತೃತ್ವದಲ್ಲಿ ಇಬ್ಬರು ಸದಸ್ಯರ ತಂಡವನ್ನು ಗಾಂಧಿನಗರಕ್ಕೆ ಕಳುಹಿಸಿಕೊಟ್ಟಿದೆ. ಇತ್ತೀಚೆಗಷ್ಟೇ ಕಣ್ಣೂರಿನಲ್ಲಿ ಮುಕ್ತಾಯಗೊಂಡಿರುವ ಸಿಪಿಎಂ ಸಮ್ಮೇಳನದಲ್ಲಿ “ಕೇರಳ ಮಾದರಿ ಅಭಿವೃದ್ಧಿ’ಯನ್ನು ದೇಶಾದ್ಯಂತ ಪ್ರಚಾರ ಮಾಡಲು ನಿರ್ಣಯ ಕೈಗೊಂಡಿರುವಂತೆಯೇ ಅಚ್ಚರಿಯ ನಿರ್ಧಾರ ಪ್ರಕಟವಾಗಿದೆ.

ಈ ಬೆಳವಣಿಗೆ ಕಾಂಗ್ರೆಸ್‌ ನೇತೃತ್ವದ ಯುಡಿಎಫ್ನ ಟೀಕೆಗೆ ಕಾರಣವಾಗಿದೆ. ಇದರಿಂದಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ಗಾಢ ಮೈತ್ರಿ ಜಾಹೀರಾಗಿದೆ ಎಂದು ಎಂದು ಕಾಂಗ್ರೆಸ್‌ ಟೀಕಿಸಿದೆ.

ತಂಡ ಕಳುಹಿಸುವ ಬಗ್ಗೆ ಸಿಪಿಎಂ ಅಧಿಕೃತವಾಗಿ ಹೇಳಿಕೆ ನೀಡದಿದ್ದರೂ, “ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆ ಜತೆಗೆ ಮಾತನಾಡಿದ ಪಕ್ಷದ ಹೆಸರು ಬಹಿರಂಗಪಡಿಸಲಿಚ್ಛಿಸದ ನಾಯಕರೊಬ್ಬರು ” ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಜತೆಗೆ ಮಾತನಾಡಿದ್ದ ವೇಳೆ ಗುಜರಾತ್‌ನಲ್ಲಿರುವ ವ್ಯವಸ್ಥೆಯ ಬಗ್ಗೆ ಅಧ್ಯಯನ ನಡೆಸುವಂತೆ ಸಲಹೆ ನೀಡಿದ್ದರು’ ಎಂದರು. ಗುಜರಾತ್‌ ಸರ್ಕಾರ ಕೂಡ ಕೇರಳ ತಂಡ ಆಗಮಿಸುತ್ತಿ ರುವ ಬಗ್ಗೆ ಖಚಿತಪಡಿಸಿದೆ.

ಬಿಜೆಪಿ ಸ್ವಾಗತ: ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್‌ ಮಾತ ನಾಡಿ ಕೊನೆಗೂ ಪಿಣರಾಯಿ ವಿಜಯನ್‌ ಗುಜರಾತ್‌ ಮಾದರಿ ಆಡಳಿತ ಅಳವಡಿಸಿಕೊಳ್ಳುತ್ತಿದ್ದಾರೆ. ಇನ್ನಾದರೂ, ವೈಫ‌ಲ್ಯ ಕಂಡ ಕೇರಳ ಮಾದರಿಗೆ ವಿದಾಯ ಹೇಳಲಿ ಎಂದಿದ್ದಾರೆ.

ಏನಿದು ಡ್ಯಾಶ್‌ಬೋರ್ಡ್‌?
ಎನ್‌ಐಸಿ ಸಹಯೋಗದ ಜತೆಗೆ ಕೊರೊನಾ ಸೋಂಕು ವ್ಯವಸ್ಥೆ ನಿರ್ವಹಣೆ, ಸೋಂಕು ಸಂಖ್ಯೆಗಳ ಪರಿಶೀಲನೆ ಮತ್ತು ನಿಗಾ, ಆಸ್ಪತ್ರೆಗಳಲ್ಲಿ ಜನರಿಗೆ ಸೂಕ್ತವಾದ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿದೆಯೇ, ಜನರ ಅಭಿಪ್ರಾಯಗಳ ಸಲ್ಲಿಕೆಗಳನ್ನು ನಿರ್ವಹಿಸುವ ನಿಟ್ಟಿನಲ್ಲಿ ಡ್ಯಾಶ್‌ ಬೋರ್ಡ್‌ ಅಳವಡಿಸಲಾಗಿತ್ತು. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಅಧಿಕಾರಿಗಳು ಗುಜರಾತ್‌ಗೆ ಭೇಟಿ ನೀಡಿ ಅದರ ಅಧ್ಯಯನ ನಡೆಸಿದ್ದರು.

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.