ಉಕ್ರೇನ್ ನ ಖೇರ್ಸನ್ ನಗರ ರಷ್ಯಾ ಸೇನೆ ವಶಕ್ಕೆ; 9,000 ರಷ್ಯಾ ಸೈನಿಕರ ಹತ್ಯೆ; ಉಕ್ರೇನ್
ಪುರಾತನ ಯೂನಿರ್ವಸಿಟಿ ಹಾಗೂ ಪೊಲೀಸ್ ಕಟ್ಟಡ ಸೇರಿದಂತೆ ಹಲವು ಕಟ್ಟಡಗಳು ಧ್ವಂಸ
Team Udayavani, Mar 3, 2022, 2:49 PM IST
ಮಾಸ್ಕೋ/ಕೀವ್: ಉಕ್ರೇನ್ ನ ಪ್ರಮುಖ ನಗರಗಳನ್ನು ಗುರಿಯಾಗಿರಿಸಿಕೊಂಡು ರಷ್ಯಾ ಸೇನಾಪಡೆ ದಾಳಿಯನ್ನು ತೀವ್ರಗೊಳಿಸಿದ್ದು, ಗುರುವಾರ (ಮಾರ್ಚ್ 03) ರಷ್ಯಾ ಸೇನೆ ಉಕ್ರೇನ್ ನ ಪ್ರಮುಖ ನಗರವಾದ ಖೇರ್ಸನ್ ಅನ್ನು ವಶಪಡಿಸಿಕೊಂಡಿರುವುದಾಗಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಇದನ್ನೂ ಓದಿ:ನಂಬಲಸಾಧ್ಯ!; ಭಾರತದ ಕೋವಿಡ್ ಸಾವುಗಳ ಕುರಿತು ಚಿದಂಬರಂ ಶಂಕೆ
ಉಕ್ರೇನ್ ನ ಚೆರ್ನಿಹಿವ್ ನಗರದಲ್ಲಿರುವ ತೈಲಾಗಾರದ ಮೇಲೆ ರಷ್ಯಾ ಪಡೆ ಶೆಲ್ ದಾಳಿ ನಡೆಸಿದ ನಂತರ ಬೆಂಕಿ ಹೊತ್ತಿಕೊಂಡಿದ್ದು, ಖಾರ್ಕಿವ್ ನಗರದಲ್ಲಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿ ಹೇಳಿದೆ.
ಬುಧವಾರ ಕೂಡಾ ರಷ್ಯಾ ಪಡೆ ಉಕ್ರೇನ್ ನ ಎರಡು ಬಂದರುಗಳನ್ನು ವಶಕ್ಕೆ ತೆಗೆದುಕೊಂಡಿತ್ತು. ಅಲ್ಲದೇ ಕೀವ್ ನಗರದ ಲ್ಲಿ ಬಾಂಬ್ ಗಳ ಸುರಿಮಳೆಗೈದಿರುವುದಾಗಿ ವರದಿ ವಿವರಿಸಿದೆ. ರಷ್ಯಾ ದಾಳಿಯಲ್ಲಿ ಅಂದಾಜು ಎರಡು ಸಾವಿರ ಮಂದಿ ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.
ಉಕ್ರೇನ್ ನ ಎರಡನೇ ಅತೀ ದೊಡ್ಡ ನಗರವಾದ ಖಾರ್ಕಿವ್ ನಲ್ಲಿ ರಷ್ಯಾದ ಭಾರೀ ಪ್ರಮಾಣದ ಶೆಲ್ ಮತ್ತು ಕ್ಷಿಪಣಿ ದಾಳಿಗೆ ಪುರಾತನ ಯೂನಿರ್ವಸಿಟಿ ಹಾಗೂ ಪೊಲೀಸ್ ಕಟ್ಟಡ ಸೇರಿದಂತೆ ಹಲವು ಕಟ್ಟಡಗಳು ಧ್ವಂಸಗೊಂಡಿರುವುದಾಗಿ ವರದಿ ತಿಳಿಸಿದೆ.
ಮತ್ತೊಂದೆಡೆ ಉಕ್ರೇನ್ ನಲ್ಲಿ ಯಾವುದೇ ವಿದ್ಯಾರ್ಥಿಯನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡ ಬಗ್ಗೆ ಯಾವುದೇ ಮಾಹಿತಿಯಾಗಲಿ ಅಥವಾ ವರದಿಯಾಗಲಿ ಬಂದಿಲ್ಲ ಎಂದು ಭಾರತ ಸರಕಾರ ತಿಳಿಸಿದೆ. ಪ್ರತಿಪಕ್ಷಗಳ ಆರೋಪದ ನಡುವೆಯೂ ಗುರುವಾರ ಭಾರತದ ಆಪರೇಷನ್ ಗಂಗಾ ಕಾರ್ಯಾಚರಣೆಯಡಿ 19 ವಿಮಾನಗಳ ಮೂಲಕ ಉಕ್ರೇನ್ ನ ನೆರೆದೇಶಗಳ ಗಡಿಯಲ್ಲಿರುವ 3,726 ಭಾರತೀಯರನ್ನು ಕರೆತರಲಾಗುತ್ತಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂದ್ಯಾ ತಿಳಿಸಿದ್ದಾರೆ. ಯುದ್ಧಗ್ರಸ್ತ ಉಕ್ರೇನ್ ನಲ್ಲಿ ಇನ್ನೂ ಸುಮಾರು 8,000 ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿರುವುದಾಗಿ ವರದಿ ತಿಳಿಸಿದೆ.
ಯುದ್ಧದಲ್ಲಿ ರಷ್ಯಾದ ಸೈನಿಕರ ಮಾರಣಹೋಮ:
ಕಳೆದ 8 ದಿನಗಳಿಂದ ರಷ್ಯಾ ಮತ್ತು ಉಕ್ರೇನ್ ನಡುವೆ ಮುಂದುವರಿದಿರುವ ಯುದ್ಧದಲ್ಲಿ ರಷ್ಯಾದ ಒಂಬತ್ತು ಸಾವಿರ ಸೈನಿಕರನ್ನು ಹತ್ಯೆಗೈದಿದ್ದು, 290ಕ್ಕೂ ಅಧಿಕ ಯುದ್ಧ ಟ್ಯಾಂಕ್ ಗಳನ್ನು , 90 ಸೇನಾ ವಾಹನಗಳನ್ನು ನಾಶಗೊಳಿಸಿರುವುದಾಗಿ ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ