ಯಾವುದೇ ಕಾರಣಕ್ಕೂ ಈ ವರ್ಷ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಬಾರದು : ಕಿಮ್ಮನೆ ರತ್ನಾಕರ್
Team Udayavani, Sep 13, 2021, 3:20 PM IST
ಶಿವಮೊಗ್ಗ : ಈ ಭಾರಿ ಯಾವುದೇ ಕಾರಣಕ್ಕೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಬಾರದು ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿ ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ ಅವರು ಇದೊಂದು ಮುಂದಿನ 40 ರಿಂದ 50 ವರ್ಷದ ಜನಾಂಗವನ್ನು ರೂಪಿಸುವಂತಹ ಮಹತ್ವದ ವಿಷಯವಾಗಿದ್ದು ಇಷ್ಟೊಂದು ಮಹತ್ವದ ನೀತಿ ಸಂಸತ್, ದೇಶದ ಯಾವುದೇ ರಾಜ್ಯದ ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಚರ್ಚೆಯೇ ಆಗಿಲ್ಲ. ಅಲ್ಲದೆ ಟೆಂಡರ್ ಕರೆದು ಮುಚ್ಚಿದ ಲಕೋಟೆಯಲ್ಲಿಟ್ಟು ಪ್ರಕಟಿಸಿದಂತೆ ಎನ್ಇಪಿ ಜಾರಿಗೆ ಬಂದಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಈ ವರ್ಷ ಎನ್ಇಪಿ ಜಾರಿಯಾಗಬಾರದು ಎಂದು ಹೇಳಿದ್ದಾರೆ.
ಬಳಿಕ ಮಾತನಾಡಿದ ಅವರು ದೇಶದ 130 ಕೋಟಿ ಜನರ ಭವಿಷ್ಯದ ಪ್ರಶ್ನೆಯಾಗಿದೆ. ದೇಶದ ಬಹು ಸಂಸ್ಕ್ರತಿಯನ್ನು ಗಮನದಲ್ಲಿಟ್ಟುಕೊಂಡು ನೀತಿ ಜಾರಿಗೊಳಿಸಬೇಕು. ಇದು ಶಿಕ್ಷಣ ಕ್ಷೇತ್ರದ ಖಾಸಗೀಕರಣದ ಮೊದಲ ಹೆಜ್ಜೆಯಾಗಿದೆ. ಈ ಹಿಂದೆ ನೋಟು ಜಿಎಸ್ಟಿ, ರೈಲ್ವೆ, ಅಮಾನ್ಯೀಕರಣ, ಟೆಲಿಕಾಂ ವಿಷಯದಲ್ಲಿ ತೆಗೆದುಕೊಂಡಿದ್ದರು. ಎನ್ಇಪಿ ವಿಷಯದಲ್ಲೂ ಪ್ರಧಾನಿ ಮೋದಿ ಏಕಪಕ್ಷೀಯವಾಗಿ ತೆಗೆದುಕೊಂಡಿದ್ದಾರೆ. ಶಿಕ್ಷಕರ ಸಂಘಟನೆ, ಶಿಕ್ಷಣ ತಜ್ಞರೊಂದಿಗೆ ಅವರು ಚರ್ಚೆಯೇ ನಡೆಸಿಲ್ಲ. 3 ರಿಂದ 18ನೇ ವರ್ಷದ ವರೆಗಿನ ಮಕ್ಕಳ ಶಿಕ್ಷಣದ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದ ಅವರು ಎನ್ಇಪಿ ಜಾರಿಯಿಂದ ಬಿಎಡ್ ಕಾಲೇಜುಗಳು ಮುಚ್ಚಿ, ಅಂಗನವಾಡಿ ಕಾರ್ಯಕರ್ತರು ನಿರುದ್ಯೋಗಿಗಳಾಗಲಿದ್ದಾರೆ. ಈ ನೀತಿಯಿಂದ ಬಡ ಮಕ್ಕಳು, ವಿಕಲಚೇತನರು, ಶಾಲೆ ಬಿಟ್ಟವರು ಶಿಕ್ಷಣದಿಂದ ವಂಚಿತರಾಗಲಿದ್ದಾರೆ.
ಇದನ್ನೂ ಓದಿ :ವಾಜಪೇಯಿಯವರೂ ಎತ್ತಿನ ಗಾಡಿಯಲ್ಲಿ ಬಂದಿದ್ದರು, ನಾವು ಬಂದರೆ ತಪ್ಪೇಕೆ?: ಸಿದ್ದರಾಮಯ್ಯ
ಹಾಲಿ ಇರುವ ಶಿಕ್ಷಣ ನೀತಿಯಲ್ಲಿ ಇದಕ್ಕೆ ಅವಕಾಶ ಇದೆ. ಆದರೆ ನೂತನ ಎನ್ಇಪಿಯಲ್ಲಿ ಇದರ ಬಗ್ಗೆ ಚಕಾರವಿಲ್ಲ ಪ್ರಜಾಸತ್ತಾತ್ಮಕ ದೇಶದಲ್ಲಿ ಚರ್ಚೆಗೆ ಅವಕಾಶವೇ ಇಲ್ಲದಂತಾಗಿದೆ.ಹಾಗಾಗಿ ಈ ರೀತಿಯ ಅವೈಜ್ಞಾನಿಕ ನೀತಿಗಳು ಜಾರಿಗೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ