ಮದೆನಾಡು : ಮನೆಯೊಳಗೆ ಅವಿತುಕೊಂಡಿತ್ತು 15 ಅಡಿ ಉದ್ದದ ಕಾಳಿಂಗ ಸರ್ಪ
Team Udayavani, Mar 9, 2022, 5:53 PM IST
ಮಡಿಕೇರಿ : ಮದೆನಾಡು ಗ್ರಾ.ಪಂ ವ್ಯಾಪ್ತಿಯ ಬೋಮ್ಮೇಗೌಡನ ಭವಾನಿಶಂಕರ್ ಎಂಬುವವರ ಮನೆಯಲ್ಲಿ ಸೇರಿಕೊಂಡಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಪಿಯೂಷ್ ಪೆರೇರ ಸೆರೆ ಹಿಡಿದು ರಕ್ಷಿಸಿದ್ದಾರೆ.
ಕಾಫಿ ತುಂಬಿದ ಚೀಲಗಳ ಮಧ್ಯೆ ಸೇರಿಕೊಂಡಿದ್ದ ಸುಮಾರು 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹರ ಸಾಹಸದ ಮೂಲಕ ಪಿಯೂಷ್ ಪೆರೇರ ಅವರು ಸೆರೆ ಹಿಡಿದರು. ಒಂದು ಸಂದರ್ಭದಲ್ಲಿ ಕಾಳಿಂಗ ಸರ್ಪನ ಅಪಾಯಕಾರಿ ದಾಳಿಯಿಂದಲೂ ತಪ್ಪಿಸಿಕೊಳ್ಳಬೇಕಾದ ಸನ್ನಿವೇಶ ಅವರಿಗೆ ಎದುರಾಯಿತು. ಕೊನೆಗೂ ಯಶಸ್ವಿಯಾಗಿ ಸೆರೆಯಾದ ಕಾಳಿಂಗನನ್ನು ಸಂಪಾಜೆ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಟ್ಟ ಪೆರೇರ ತೃಪ್ತಿಯ ನಿಟ್ಟುಸಿರು ಬಿಟ್ಟರು.
ಇಲ್ಲಿಯವರೆಗೆ ನೂರಾರು ಹಾವುಗಳನ್ನು ರಕ್ಷಿಸಿರುವ ಪಿಯೂಷ್ ಪೆರೇರ ಅವರು ಸೆರೆ ಹಿಡಿದಿರುವ ನಾಲ್ಕನೇ ಕಾಳಿಂಗ ಸರ್ಪ ಇದಾಗಿದೆ. ಹಾವುಗಳ ನಾಶದಿಂದ ಪ್ರಾಕೃತಿಕ ಅಸಮಾತೋಲನ ಉಂಟಾಗುವುದರಿಂದ ಯಾರೂ ಕೊಲ್ಲದೆ ರಕ್ಷಿಸುವಂತೆ ಮನವಿ ಮಾಡಿದ್ದಾರೆ.
ಪಿಯೂಷ್ ಪೆರೇರ ಅವರ ಮೊ.ಸಂ : 94819 52253
ಇದನ್ನೂ ಓದಿ : ಗಂಗಾವತಿಯಲ್ಲಿ ಮಟ್ಕಾ,ಇಸ್ಪೀಟ್, ಮೀಟರ್ ಬಡ್ಡಿ ದಂಧೆ: ಅಧಿವೇಶನದಲ್ಲಿ ಹೆಚ್ ಡಿಕೆ ಪ್ರಸ್ತಾಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೈಸೂರು ದಸರಾಕ್ಕೆ ಮುನ್ನುಡಿ : ಸಾಂಪ್ರದಾಯಿಕ ಪೂಜೆ ಮೂಲಕ ಅರಮನೆ ಪ್ರವೇಶಿಸಿದ ಗಜಪಡೆ
ನಾಗರಪುರದ ಕಚೇರಿ ಮೇಲೆ ಆರೆಸ್ಸೆಸ್ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ : ಸಿದ್ದು
ಮನೆ ಗೋಡೆ ಕುಸಿದು ಯುವಕ ಸಾವು : ಕೆಲ ದಿನದ ಹಿಂದಷ್ಟೇ ಹೆರಿಗೆಯಾಗಿದ್ದ ತಾಯಿ, ಮಗು ಪಾರು
ಗಾಳಿ ಮಳೆಯ ಅಬ್ಬರ : ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ರಜೆ
ಮಲೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ : ಮನೆಯ ಮೇಲೆ ಮರ ಬಿದ್ದು ಇಬ್ಬರು ಸಾವು
MUST WATCH
ಹೊಸ ಸೇರ್ಪಡೆ
ಮೈಸೂರು ದಸರಾಕ್ಕೆ ಮುನ್ನುಡಿ : ಸಾಂಪ್ರದಾಯಿಕ ಪೂಜೆ ಮೂಲಕ ಅರಮನೆ ಪ್ರವೇಶಿಸಿದ ಗಜಪಡೆ
ನಾಗರಪುರದ ಕಚೇರಿ ಮೇಲೆ ಆರೆಸ್ಸೆಸ್ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ : ಸಿದ್ದು
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಹಾನಿ
ಮನೆ ಗೋಡೆ ಕುಸಿದು ಯುವಕ ಸಾವು : ಕೆಲ ದಿನದ ಹಿಂದಷ್ಟೇ ಹೆರಿಗೆಯಾಗಿದ್ದ ತಾಯಿ, ಮಗು ಪಾರು
ಗಾಳಿ ಮಳೆಯ ಅಬ್ಬರ : ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ರಜೆ