Kiwifruit: ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಿವಿ ಹಣ್ಣಿನಲ್ಲಿ ಹಲವು ಆರೋಗ್ಯಕರ ಲಾಭಗಳು


Team Udayavani, Jul 13, 2023, 6:25 PM IST

9-kiwi

ನಮ್ಮ ದೇಹ ಆರೋಗ್ಯವಾಗಿಡಲು ದೈನಂದಿನ ಆಹಾರದೊಂದಿಗೆ ಅನೇಕ ರೀತಿಯ ಪೋಷಕಾಂಶಗಳು, ವಿಟಮಿನ್‌ಗಳು, ಮಿನರಲ್‌ ಗಳು ಅಗತ್ಯವಾಗಿ ಬೇಕಾಗುತ್ತದೆ. ನಮ್ಮ ದೇಹಕ್ಕೆ ರೋಗನಿರೋಧಕ ಶಕ್ತಿ, ಜೀವಸತ್ವ ಹೆಚ್ಚಿಸಲು ಹಣ್ಣುಗಳು ಹಾಗೂ ತರಕಾರಿಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರೆ ತಪ್ಪಲ್ಲ. ಅಂತಹ ಹಣ್ಣುಗಳಲ್ಲಿ ಕಿವಿ ಹಣ್ಣು ಕೂಡಾ ಒಂದು.

ಕಿವಿ ಹಣ್ಣು ವರ್ಷವಿಡೀ ದೊರೆಯುವ ಒಂದು ಹಣ್ಣಾಗಿದ್ದು, ಸೂಪರ್‌ಫುಡ್ ವಿಭಾಗದಲ್ಲಿ ಕಿವಿಹಣ್ಣು ಮೊದಲ ಸ್ಥಾನ ಪಡೆದುಕೊಂಡಿದೆ. ಕಿವಿ ಹಣ್ಣಿನಲ್ಲಿ ಆರೋಗ್ಯಕ್ಕೆ ಅಗತ್ಯವಾದ ಅನೇಕ ಪ್ರಮುಖ ಪೋಷಕಾಂಶಗಳಿವೆ.

ಹುಳಿ ಮತ್ತು ಸಿಹಿ ಅಂಶ ಹೊಂದಿರುವ ಕಿವಿ ಹಣ್ಣಿನ ರಸ ಕುಡಿಯುವುದರಿಂದ ಹಲವಾರು ಗಂಭೀರ ಕಾಯಿಲೆಗಳಿಂದ ದೇಹ ರಕ್ಷಿಸಬಹುದು. ಬೇಸಿಗೆಯಲ್ಲಿ  ಕಿವಿ ರಸ ಯಾವುದೇ ಔಷಧಿಗಿಂತ ಕಡಿಮೆಯಿಲ್ಲ ಎನ್ನಲಾಗುತ್ತದೆ.

ವಿಟಮಿನ್ ಸಿ, ವಿಟಮಿನ್ ಕೆ, ವಿಟಮಿನ್ ಇ, ಫೋಲೇಟ್, ಪೊಟ್ಯಾಸಿಯಮ್ ಅಂಶ ಈ ಹಣ್ಣಿನಲ್ಲಿದೆ. ಇದರಲ್ಲಿ( ಆ್ಯಂಟಿ ಆಕ್ಸಿಡೆಂಟ್‌) ದೇಹದ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಇಷ್ಟು ಮಾತ್ರವಲ್ಲದೇ ಇನ್ನೂ ಅನೇಕ ಆರೋಗ್ಯ ಲಾಭಗಳು ಈ ಹಣ್ಣಿನಲ್ಲಿದೆ. ಅವು ಯಾವುದೆಂದು ತಿಳಿಯಲು ಮುಂದೆ ಓದಿ.

ರಕ್ತದೊತ್ತಡ ನಿಯಂತ್ರಣ:

ಕಿವಿ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಕಿವಿ ಹಣ್ಣಿನಲ್ಲಿರುವ ಪೊಟ್ಯಾಸಿಯಮ್ ಮತ್ತು ಫೈಬರ್ ಅಂಶ ಹೇರಳವಾಗಿರುವುದರಿಂದ ರಕ್ತದೊತ್ತಡ ಹತೋಟಿಯಲ್ಲಿರಲು ಸಹಾಯ ಮಾಡುತ್ತದೆ.

ಕೊಲೆಸ್ಟ್ರಾಲ್ ನಿಯಂತ್ರಣ:

ಕಿವಿ ಹಣ್ಣು ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಕಿವಿ ಹಣ್ಣಿನಲ್ಲಿ ಆಂಟಿ ಆಕ್ಸಿಡೆಂಟ್, ಆಂಟಿ-ಇನ್ಫ್ಲಮೇಟರಿ ಅಂಶ ಇರುವುದರಿಂದ ಬೊಜ್ಜಿನ ಸಮಸ್ಯೆಗೆ ಸಹಕರಿಯಾಗಿದೆ. ನಿಯಮಿತವಾಗಿ ಕಿವಿ ಹಣ್ಣು ತಿನ್ನುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಿಸಿ ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಿಸುತ್ತದೆ. ಬೊಜ್ಜು ನಿಯಂತ್ರಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು.

ಕಣ್ಣಿನ ದೃಷ್ಟಿ ಹೆಚ್ಚಿಸುತ್ತದೆ:

ಆಹಾರದಿಂದ ಹಿಡಿದು ಮಾಲಿನ್ಯದವರೆಗೆ ದೃಷ್ಟಿಯ ಮೇಲೆ ಪರಿಣಾಮ ಬೀರುತ್ತಿದೆ. ಅವುಗಳ ಪರಿಣಾಮದ ವಿರುದ್ಧ ಹೋರಾಡಲು ಕಿವಿ ಹಣ್ಣಿನ ರಸ ಬಹಳ ಪ್ರಯೋಜನಕಾರಿಯಾಗಿದೆ. ಕಿವಿ ಹಣ್ಣಿನಲ್ಲಿರುವ ಪೋಷಕಾಂಶಗಳು ದೃಷ್ಟಿಯನ್ನು ಚುರುಕುಗೊಳಿಸುವುದರೊಂದಿಗೆ ಅನೇಕ ರೀತಿಯ ಸೋಂಕುಗಳಿಂದ ಕಣ್ಣನ್ನು ರಕ್ಷಿಸುತ್ತದೆ .

ಮೂಳೆಗಳನ್ನು ಬಲಪಡಿಸಲು:

ಗರ್ಭಿಣಿಯರಿಗೆ ಇದು ಉಪಯುಕ್ತ ಹಣ್ಣುಗಳಲ್ಲಿ ಕಿವಿ ಕೂಡಾ ಒಂದು. ಇದು ಕೀಲು ನೋವನ್ನು ಕಡಿಮೆ ಮಾಡುತ್ತದೆ. ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಒತ್ತಡ ಕಡಿಮೆಗೊಳಿಸಲು ಇದನ್ನು ತಿನ್ನಬಹುದು. ಇದು ಅನೇಕ ರೋಗಗಳು ಮತ್ತು ಸೋಂಕುಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಗರ್ಭಿಣಿಯರಿಗೆ ಪ್ರಯೋಜನಕಾರಿ:

ಕಿವಿ ಗರ್ಭಿಣಿಯರಿಗೆ ತುಂಬಾ ಪ್ರಯೋಜನಕಾರಿ ಹಣ್ಣು. ಕಿವಿಯಲ್ಲಿ ಸಾಕಷ್ಟು ಪ್ರಮಾಣದ ಫೋಲೇಟ್ ಇದೆ, ಇದು ಗರ್ಭಾಶಯದಲ್ಲಿ ಬೆಳೆಯುತ್ತಿರುವ ಮಗುವಿನ ಮೆದುಳಿನ ಬೆಳವಣಿಗೆಗೆ ಬಹಳ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಗರ್ಭಾವಸ್ಥೆಯಲ್ಲಿರುವ ಮಹಿಳೆ ಕಿವಿ ತಿನ್ನುವುದರಿಂದ ಶಿಶುಗಳಲ್ಲಿ ನರಗಳ ದೋಷಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಗರ್ಭಿಣಿಯರು ಹೆರಿಗೆಯ ನಂತರವೂ ಕಿವಿ ಹಣ್ಣನ್ನು ಸೇವಿಸಬೇಕು. ಇದರಿಂದ ಹೆರಿಗೆಯ ನಂತರ ದೌರ್ಬಲ್ಯ ಮತ್ತು ರಕ್ತಹೀನತೆ ನಿವಾರಿಸಲು ಸಹಾಯ ಮಾಡುತ್ತದೆ.

ಮಲಬದ್ಧತೆ ಸಮಸ್ಯೆ:

ಕಿವಿ ಹಣ್ಣಿನಲ್ಲಿರುವ ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ ಸರಿಯಾಗಿಡುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುಣಪಡಿಸುತ್ತದೆ. ಕಿವಿ ರಸವನ್ನು ಕುಡಿಯುವುದರಿಂದ ಮಲಬದ್ಧತೆಯಿಂದ ಉಂಟಾಗುವ ಅನೇಕ ಗಂಭೀರ ಸಮಸ್ಯೆಗಳನ್ನು ಪರಿಹರಿಸಬಹುದು. ಇದರ ರಸ ನಿಯಮಿತವಾಗಿ ಸೇವಿಸುವುದರಿಂದ ಬೇಸಿಗೆಯಲ್ಲೂ ಹೊಟ್ಟೆ ತಂಪಾಗಿಡುತ್ತದೆ ಹಾಗೂ ಆರೋಗ್ಯಕರವಾಗಿರಿಸುತ್ತದೆ.

ಚರ್ಮದ ಆರೋಗ್ಯ:

ಕಿವಿ ಹಣ್ಣು ತಿನ್ನುವುದು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ಕಿವಿಯಲ್ಲಿನ ಉರಿಯೂತ ನಿವಾರಕ ಗುಣಗಳು ಚರ್ಮದ ಮೇಲಿನ ದದ್ದುಗಳು, ಮೊಡವೆಗಳು ಮತ್ತು ಉರಿಯೂತವನ್ನು ಕಡಿಮೆ ಮಾಡಲು, ಚರ್ಮವನ್ನು ಸ್ವಚ್ಛವಾಗಿರಿಸಲು ಸಹಾಯ ಮಾಡುತ್ತದೆ.

*ಕಾವ್ಯಶ್ರೀ

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.