ಕೋಲ್ಕತಾ ಲಸಿಕೆ ಹಗರಣ-ಕೇಂದ್ರದ ತನಿಖೆ ನಡೆಸಿ; ಆರೋಗ್ಯ ಸಚಿವರಿಗೆ ಸುವೇಂದು ಪತ್ರ
ಅಧಿಕಾರಿಗಳ ಸಹಭಾಗಿತ್ವ ಇಲ್ಲದೇ ಹಗರಣ ನಡೆಯಲು ಸಾಧ್ಯವಿಲ್ಲ
Team Udayavani, Jun 26, 2021, 12:45 PM IST
ಕೋಲ್ಕತಾ:ಕೋಲ್ಕತಾದ ಲಸಿಕೆ ಹಗರಣವನ್ನು ಕೇಂದ್ರ ತನಿಖಾ ಏಜೆನ್ಸಿ ಮೂಲಕ ತನಿಖೆ ನಡೆಸಬೇಕು ಎಂದು ಪಶ್ಚಿಮಬಂಗಾಳ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರಿಗೆ ಪತ್ರ ಬರೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮುಂದಿನ ಚುನಾವಣೆ ಎದುರಿಸಲು ಸನ್ನದ್ಧರಾಗಿ: ಪಕ್ಷದ ಮುಖಂಡರಿಗೆ ಕರೆ ನೀಡಿದ ಸಿಎಂ ಬಿಎಸ್ ವೈ
ನಗರಪಾಲಿಕೆಯ ಉನ್ನತ ಅಧಿಕಾರಿಗಳ ಶಾಮೀಲಾತಿ ಇಲ್ಲದೆ ಈ ಲಸಿಕೆ ಹಗರಣ ನಡೆಯಲು ಸಾಧ್ಯವಿಲ್ಲ ಎಂದು ಆರೋಪಿಸಿರುವ ಸುವೇಂದು ಅಧಿಕಾರಿ, ಈ ಬಗ್ಗೆ ಕೇಂದ್ರ ತನಿಖಾ ಏಜೆನ್ಸಿ ತನಿಖೆ ನಡೆಸಲಿ ಎಂದು ಸಚಿವರಲ್ಲಿ ಮನವಿ ಮಾಡಿಕೊಂಡಿರುವುದಾಗಿ ವರದಿ ಹೇಳಿದೆ.
ಮುಖ್ಯವಾದ ಪ್ರಶ್ನೆಯೆಂದರೆ ಆರೋಪಿಗಳು ನಿಜವಾಗಿಯೂ ಕೋವಿಡ್ ಶೀಲ್ಡ್ ಲಸಿಕೆ ಎಂದು ಹೇಳಿಕೊಂಡಿದ್ದರೆ, ಆಗ ಇದು ಸರ್ಕಾರಿ ದಾಸ್ತಾನಿನಿಂದ ಕೋವಿಡ್ ಲಸಿಕೆಯನ್ನು ಮಾರಾಟ ಮಾಡಿರುವ ಬಗ್ಗೆ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಅಲ್ಲದೇ ಇದು ಉನ್ನತ ಅಧಿಕಾರಿಗಳ ಸಹಭಾಗಿತ್ವ ಇಲ್ಲದೇ ಹಗರಣ ನಡೆಯಲು ಸಾಧ್ಯವಿಲ್ಲ ಎಂದು ಸುವೇಂದು ಅಧಿಕಾರಿ ಬರೆದ ಪತ್ರದಲ್ಲಿ ದೂರಿದ್ದಾರೆ.
ಒಂದು ವೇಳೆ ಅವುಗಳು ಕೋವಿಶೀಲ್ಡ್ ಲಸಿಕೆಗಳಲ್ಲದಿದ್ದರೆ, ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡುವಿಕೆ ಹೇಗೆ ನಡೆಯುತ್ತಿದೆ ಎಂಬ ಬಗ್ಗೆ ಕೂಡಲೇ ತನಿಖೆ ನಡೆಯಲಿ ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ