
ಕೊಂಚೂರ ಹನುಮಾನ್ ದೇವರ ರಥೋತ್ಸವದಲ್ಲಿ ಜನಸ್ತೋಮ :ಭಕ್ತರನ್ನು ನಿಯಂತ್ರಿಸಲು ಲಘು ಲಾಠಿ ಪ್ರಹಾರ
Team Udayavani, Dec 19, 2021, 7:54 PM IST

ವಾಡಿ (ಚಿತ್ತಾಪುರ) : ಮಹಾಮಾರಿ ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಭೀತಿಯಲ್ಲೇ ರವಿವಾರ ಕೊಂಚೂರು ಶ್ರೀಹನುಮಾನ ದೇವರ ರಥೋತ್ಸವ ಕೇವಲ ಹತ್ತಡಿ ಚಲಿಸಿ ನಿಂತಿತು.
ತಾಲೂಕು ಆಡಳಿತದ ಆದೇಶದನ್ವಯ ತೇರು ಮೂಲ ಸ್ಥಳದಿಂದ ಸಾಗುತ್ತಿದ್ದಂತೆ ಪೊಲೀಸರು ರಥಬೀದಿಯಲ್ಲಿ ವಾಹನವನ್ನು ನಿಲ್ಲಿಸಿ ರಥೋತ್ಸವ ಪಾದಗಟ್ಟೆಗೆ ಹೋಗುವುದನ್ನು ತಡೆದರು. ಈ ವೇಳೆ ಭಕ್ತರ ಉದ್ಘೋಷ ಮುಗಿಲು ಮುಟ್ಟಿತು. ರಥೋತ್ಸವ ವೇಳೆ ಜಮಾಯಿಸಿದ್ದ ಅಸಂಖ್ಯಾತ ಭಕ್ತರು ತೇರು ಏಳೆದು ಸಂಭ್ರಮಿಸಿದರು. ಮೊದಲು ನಿಂತ ತೇರಿಗೆ ಹಣ್ಣು ಎಸೆದ ಭಕ್ತಸಾಗರ, ನಂತರ ನಿಧಾನವಾಗಿ ಮುಂದೆ ಸಾಗಿದ ಹನುಮನ ತೇರಿಗೆ ಮುಗಿಬಿದ್ದು ಬಾಳೆ ಹಣ್ಣು ಎಸೆದು ಹರಕೆ ತೀರಿಸಿದರು. ಸೇರಿದ್ದ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾದ ಪ್ರಸಂಗ ಎದುರಾಯಿತು.
ಪೊಲೀಸರು ಲಾಠಿ ಬೀಸುತ್ತಿದ್ದಂತೆ ರಥದ ಸುತ್ತಲೂ ನೆರೆದಿದ್ದ ಭಕ್ತರು ಓಡಲು ಮುಂದಾದರು. ಈ ವೇಳೆ ನೂಕುನುಗ್ಗಲು ಉಂಟಾಗಿ ಕೆಲವರು ಕೆಳಗೆ ಬಿದ್ದು ಅಪಾಯ ಎದುರಿಸಿದರು. ದೇವಸ್ಥಾನದಲ್ಲಿ ಭಕ್ತರು ಸಾಲುಗಟ್ಟಿ ದೇವರ ದರ್ಶನ ಪಡೆದುಕೊಂಡರು. ಸಿಪಿಐ ಕೃಷ್ಣಪ್ಪ ಕಲ್ಲೆದೇವರು, ಪಿಎಸ್ ಐ ವಿಜಯಕುಮಾರ ಭಾವಗಿ, ಜಾತ್ರೆಗೆ ಸೂಕ್ತ ಬಂದೋಬಸ್ತ್ ಒದಗಿಸಿದ್ದರು.
ಇದನ್ನೂ ಓದಿ :ಪ್ರೀತಿ ನಿರಾಕರಿಸಿದಕ್ಕೆ ಬೆಂಕಿ ಹಚ್ಚಿ ತಾನೂ ಜೀವ ಕಳೆದುಕೊಂಡ!
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

Politics: ಐದು ತಿಂಗಳಲ್ಲಿ ಸರ್ಕಾರ ಬಹಳ ದೊಡ್ಡ ಯಡವಟ್ಟು ಮಾಡ್ಕೊಂಡಿದೆ: ಕೇಂದ್ರ ಸಚಿವೆ ಶೋಭಾ

Karnataka: ಕೈಗೆ ಲಿಂಗಾಯತ ಸಂಕಷ್ಟ- ಡಿಸಿಎಂ ಹುದ್ದೆ ತಣ್ಣಗಾದ ಬೆನ್ನಲ್ಲೇ ಮತ್ತೂಂದು ವಿವಾದ

WhatsApp, Telegram ಆ್ಯಪ್ ವಂಚನೆ ಜಾಲ ಬಯಲಿಗೆ
MUST WATCH
ಹೊಸ ಸೇರ್ಪಡೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್