ಕೊಪ್ಪಳದಲ್ಲಿ ಮತ್ತೆ 15 ಮಂದಿಗೆ ಸೋಂಕು ದೃಢ ! ಸೋಂಕಿನ ಸಂಖ್ಯೆ 446ಕ್ಕೆ ಏರಿಕೆ


Team Udayavani, Jul 18, 2020, 7:27 PM IST

ಕೊಪ್ಪಳದಲ್ಲಿ ಮತ್ತೆ 15 ಮಂದಿಗೆ ಸೋಂಕು ದೃಢ ! ಸೋಂಕಿನ ಸಂಖ್ಯೆ 446ಕ್ಕೆ ಏರಿಕೆ

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ಮತ್ತೇ 15 ಜನರಿಗೆ ಕೋವಿಡ್ ಸೋಂಕು ದೃಢಪಡುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆಯು 446ಕ್ಕೆ ಏರಿಕೆಯಾಗಿದೆ. ಶುಕ್ರವಾರ ರಾತ್ರಿ 53 ವರ್ಷದ ವೃದ್ಧ ಸಾವನ್ನಪಿದ್ದು, ಸಾವಿನ ಸಂಖ್ಯೆಯು 10ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಈ ವರೆಗೂ ಆಸ್ಪತ್ರೆಯಿಂದ 282 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಶನಿವಾರ ದೃಢಪಟ್ಟ 15 ಜನರ ಪೈಕಿ ಗಂಗಾವತಿಯ 35 ವರ್ಷದ ಮಹಿಳೆ, ಕೊಪ್ಪಳ ತಾಲೂಕಿನ ಭಾಗ್ಯನಗರದ 18 ವರ್ಷದ ಯುವಕ, ಬೇವಿನಹಳ್ಳಿಯ 30 ವರ್ಷದ ಯುವಕ, ಯಲಬುರ್ಗಾ ತಾಲೂಕಿನ ಬೆಣಕಲ್‌ನ 25 ವರ್ಷದ ಯುವಕ, ಯಲಬುರ್ಗಾದ 20 ವರ್ಷದ ಯುವತಿ, ಗಂಗಾವತಿ ನಗರದ 33 ವರ್ಷದ ಮಹಿಳೆ, 24 ವರ್ಷದ ಯುವಕ, 47 ವರ್ಷದ ವ್ಯಕ್ತಿ, ಕನಕಗಿರಿಯ 35 ವರ್ಷದ ಪ್ರಂಟ್‌ಲೈನ್ ವರ್ಕರ‍್ಸ್, ಕುಷ್ಟಗಿ ತಾಲೂಕಿನ ತಾವರಗೇರಾದ 63 ವರ್ಷದ ವ್ಯಕ್ತಿ, ಗಂಗಾವತಿ 54 ವರ್ಷದ ವ್ಯಕ್ತಿ, ಕಾರಟಗಿಯ 35 ವರ್ಷದ ವ್ಯಕ್ತಿ, 70 ವರ್ಷದ ಮಹಿಳೆ, ಯಲಬುರ್ಗಾದ ಯರೆಹಂಚಿನಾಳ ಗ್ರಾಮದ 34 ವರ್ಷದ ಪ್ರಂಟ್‌ಲೈನ್ ವರ್ಕರ‍್ಸ್, ಕುಷ್ಟಗಿಯ ತುಗ್ಗಲದೋಣಿಯ 40 ವರ್ಷದ ವ್ಯಕ್ತಿಯು ಸೇರಿದಂತೆ ಒಟ್ಟು 15 ಜನರಿಗೆ ಸೋಂಕು ದೃಢಪಟ್ಟಿದೆ.

ಇವರಲ್ಲಿ ಇಬ್ಬರು ಅನ್ಯ ಜಿಲ್ಲೆಯಿಂದ ಪ್ರವಾಸ ಮಾಡಿದ್ದರೆ, ಐವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿಯಿಲ್ಲ. ಮೂವರ ಟ್ರಾವೆಲ್ ಹಿಸ್ಟರಿ ಪತ್ತೆ ಕಾರ್ಯ ನಡೆದಿದೆ. ಇಬ್ಬರು ಐಎಲ್‌ಐ ಕೇಸ್‌ನಡಿ ಸೋಂಕಿಗೆ ತುತ್ತಾಗಿದ್ದರೆ, ಇಬ್ಬರು ಕೋವಿಡ್ ಪ್ರಂಟ್‌ಲೈನ್ ವರ್ಕರ್ಸ್‌ಗೆ ಸೋಂಕು ತಗುಲಿದೆ.

ಸೋಂಕಿತರ ಸಂಖ್ಯೆ 446ಕ್ಕೆ ಏರಿಕೆ : ಜಿಲ್ಲೆಯಲ್ಲಿ ಶುಕ್ರವಾರದ ಅಂತ್ಯಕ್ಕೆ 431 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಆದರೆ ಶನಿವಾರ ಮತ್ತೆ 15 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ ಈ ವರೆಗು 446 ಜನರಿಗೆ ಸೋಂಕು ತಗುಲಿದಂತಾಗಿದೆ. ಇವರಲ್ಲಿ ಶನಿವಾರ 17 ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಾರಂಭಿಸಿದ್ದರೆ, 34 ಜನರು ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ. ಒಟ್ಟಾರೆ ಈ ವರೆಗು 282 ಜನರು ಸೋಂಕುಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸಾವಿನ ಸಂಖ್ಯೆಯು 10ಕ್ಕೆ ಏರಿಕೆ : ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಕಾರಟಗಿಯ 53 ವರ್ಷದ ವೃದ್ಧನೋರ್ವ ಸೋಂಕಿನಿಂದ ಬಳಲಿ ಮೃತಪಟ್ಟಿದ್ದು, ಶನಿವಾರ ಜಿಲ್ಲಾಡಳಿತ ಇದನ್ನು ದೃಢಪಡಿಸಿದೆ. ಈ ಮೂಲಕ ಸಾವಿನ ಸಂಖ್ಯೆಯು 10ಕ್ಕೆ ಏರಿಕೆಯಾದಂತಾಗಿದೆ. ಇದು ಜಿಲ್ಲೆಯ ಜನರಲ್ಲಿ ಆತಂಕ ಮೂಡುವಂತೆ ಮಾಡಿದೆ. ಆದರೆ ಸೋಂಕಿನಿಂದ ಬಳಲುವ ಜನರು ಬೇಗನೆ ಗುಣಮುಖರಾಗಿ ಮನೆಗೆ ವಾಪಸ್ಸಾಗುತ್ತಿರುವುದು ಸ್ವಲ್ಪ ಸಮಾಧಾನದ ಸಂಗತಿ. ಒಟ್ಟು 282 ಜನರು ಮನೆಗೆ ಆಗಮಿಸಿದ್ದರೆ, 154 ಜನರು ಸಕ್ರಿಯ ಕೇಸ್‌ನಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.