Kota: ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ತಪ್ಪಿಸಲು ಜಿಲ್ಲಾಡಳಿತದಿಂದ ಮಾಸ್ಟರ್ಪ್ಲಾನ್!
ಜಿಲ್ಲೆಯ ಎಲ್ಲಾ ಹಾಸ್ಟೆಲ್ ಮತ್ತು ಪಿ.ಜಿ ಗಳಿಗೆ ಜಿಲ್ಲಾಡಳಿತದ ವಿಚಿತ್ರ ಆದೇಶ
Team Udayavani, Aug 18, 2023, 4:15 PM IST
ಕೋಟಾ (ರಾಜಸ್ಥಾನ): ಜೆಇಇ, ನೀಟ್ ಪರೀಕ್ಷೆಗಳ ಕೋಚಿಂಗ್ಗಳಿಗಾಗಿಯೇ ಪ್ರಸಿದ್ಧವಾಗಿ ದೇಶದ ʻಕೋಚಿಂಗ್ ಹಬ್ʼ ಎಂದೇ ಕರೆಯಲ್ಪಟ್ಟಿರುವ ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೊಸದೇನಲ್ಲ. ದೇಶದ ಮೂಲೆ ಮೂಲೆಗಳಿಂದ ಬೇರೆ ಬೇರೆ ಕಾಲೇಜು ಪ್ರವೇಶ ಪರೀಕ್ಷೆಗಳ ಕೋಚಿಂಗ್ಗೆಂದು ಬರುವ ವಿದ್ಯಾರ್ಥಿಗಳು ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದು ಕೋಟಾದಲ್ಲಿ ಸರ್ವೇ ಸಾಮಾನ್ಯವೆನ್ನುವಂತಾಗಿದೆ.
ಇದನ್ನು ತಡೆಗಟ್ಟುವ ಉದೇಶದಿಂದ ಕೋಟಾ ಜಿಲ್ಲಾಡಳಿತ ವಿಚಿತ್ರ ಆದೇಶವೊಂದನ್ನು ಹೊರಡಿಸಿದೆ. ಜಿಲ್ಲೆಯ ಎಲ್ಲಾ ಹಾಸ್ಟೆಲ್ ರೂಂಗಳು ಮತ್ತು ಪಿ.ಜಿ ಗಳಲ್ಲಿ ಸ್ಪ್ರಿಂಗ್ ಇರುವ ಫ್ಯಾನ್ಗಳನ್ನು ಅಳವಡಿಸಲು ಜಿಲ್ಲಾಡಳಿತ ಆದೇಶಿಸಿದೆ.
ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಪೈಕಿ ಹೆಚ್ಚಿನವರು ಫ್ಯಾನ್ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ.
ರಾಜಸ್ಥಾನದ ಕೋಟಾ ಜಿಲ್ಲೆಯ ಜಿಲ್ಲಾಧಿಕಾರಿ ಓಂ ಪ್ರಕಾಶ್ ಬುಂಕಾರ್ ಅವರು ಈ ಆದೇಶ ಹೊರಡಿಸಿದ್ದು, ಕೋಚಿಂಗ್ಗಾಗಿ ಕೋಟಾಗೆ ಬರುವ ವಿದ್ಯಾರ್ಥಿಗಳ ಆತ್ಮಹತ್ಯೆಯನ್ನು ತಡೆಗಟ್ಟುವುದಕ್ಕಾಗಿ ಈ ಕ್ರಮ ಕೈಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.
2022 ರಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಕೆಲವೊಂದು ಆದೇಶಗಳನ್ನು ಹೊರಡಿಸಿತ್ತು. ಅದರಲ್ಲಿ ವಿದ್ಯಾರ್ಥಿಗಳಿಗೆ ವಾರದ ರಜೆ ನೀಡುವುದು, ತರಗತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ 80 ಮೀರದಂತೆ ಇರುವುದು, ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಮನೋವೈಜ್ಙಾನಿಕ ಮೌಲ್ಯಮಾಪನ ಸೇರಿ ಹಲವು ವಿಚಾರಗಳ ಬಗ್ಗೆ ಕೋಚಿಂಗ್ ಸಂಸ್ಥೆ, ಹಾಸ್ಟೆಲ್, ಪಿಜಿ ಮಾಲಿಕರಿಗೆ ಆದೇಶಿಸಲಾಗಿತ್ತು.
ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ತೀರಾ ಸಾಮಾನ್ಯ. ಈ ವರ್ಷವೊಂದರಲ್ಲೇ 22 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಗಸ್ಟ್ ತಿಂಗಳಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಮಂಗಳವಾರವಷ್ಟೇ ಬಿಹಾರ ಮೂಲದ 18 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಘಟನೆ ಬೆನ್ನಲ್ಲೇ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ.
ಇದನ್ನೂ ಓದಿ: G20: ರಾಸಾಯನಿಕ, ಜೈವಿಕ ಶಸ್ತ್ರಾಸ್ತ್ರಗಳ ದಾಳಿ ನಿಭಾಯಿಸಲು ದೆಹಲಿ ಪೊಲೀಸರಿಗೆ ತರಬೇತಿ
#WATCH | Spring-loaded fans installed in all hostels and paying guest (PG) accommodations of Kota to decrease suicide cases among students, (17.08) https://t.co/laxcU1LHeW pic.twitter.com/J16ccd4X0S
— ANI MP/CG/Rajasthan (@ANI_MP_CG_RJ) August 18, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು