ಸಾಲ ಕಂತು ಪಾವತಿಗೆ ಕೃಷಿಕರಿಗೆ ನೋಟಿಸ್ : ಅವಧಿ ವಿಸ್ತರಿಸುವಂತೆ ಸಿಎಂ ಗೆ ಸಚಿವ ಕೋಟ ಮನವಿ
Team Udayavani, May 10, 2021, 6:35 PM IST
ಪುತ್ತೂರು : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಅಲ್ಪಾವಧಿ, ಮಧ್ಯಮಾವಧಿ, ದೀರ್ಘಾವಧಿಗೆ ಪಡೆದ ಸಾಲದ ಕಂತು ಪಾವತಿಸುವಂತೆ ಕೃಷಿಕರಿಗೆ ನೋಟಿಸ್ ಕಳುಹಿಸುತ್ತಿರುವ ಹಿನ್ನೆಲೆಯಲ್ಲಿ ಸಾಲದ ಕಂತು ತುಂಬುವ ಅವಧಿಯನ್ನು ವಿಸ್ತರಣೆ ಮಾಡುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸುತ್ತೇನೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
“ಲಾಕ್ಡೌನ್ ಸಂಕಷ್ಟ : ಅವಧಿ ವಿಸ್ತರಣೆಗೆ ಆಗ್ರಹ” ಶೀರ್ಷಿಕೆಯಡಿ ಕೋವಿಡ್ ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟ ಉಂಟಾಗಿರುವ ಈ ಸಂದರ್ಭದಲ್ಲಿ ಕೃಷಿಕರಿಗೆ ಸಾಲ ಕಂತು ಮರುಪಾವತಿಗೆ ನೋಟಿಸ್ ಜಾರಿಯಾಗಿರುವ ಬಗ್ಗೆ ಮೇ 9 ರಂದು ಉದಯವಾಣಿ ವರದಿ ಪ್ರಕಟಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಮೇ 11 ರಂದು ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ. ಕಂತು ತುಂಬುವ ಅವಧಿಯನ್ನು ಆರು ತಿಂಗಳ ತನಕ ವಿಸ್ತರಣೆ ಮಾಡಲು ಮನವಿ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.
ಇದನ್ನೂ ಓದಿ :ಶಿಕಾರಿಪುರ : ಮುಸ್ಲಿಂ ಯುವಕರಿಂದ ಕೋವಿಡ್ ನಿಂದ ಮೃತಪಟ್ಟ ಹಿಂದೂ ಮಹಿಳೆಯ ಅಂತ್ಯಕ್ರಿಯೆ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು