ಕೋವಿಡ್ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ: ಕೋಟ ಸೂಚನೆ
ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಶೇ. 75 ಬೆಡ್ ಮೀಸಲಿಡಿ
Team Udayavani, May 28, 2021, 10:03 PM IST
ಮಂಗಳೂರು : ಕೊರೊನಾ ಸೋಂಕಿತರಿಗೆ ಸರಕಾರದ ಮಾರ್ಗಸೂಚಿ ಅನ್ವಯ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಯು ಶೇ. 75ರಷ್ಟು ಬೆಡ್ಗಳನ್ನು ಮೀಸಲಿಡಬೇಕು. ಸರಕಾರಿ ಆಸ್ಪತ್ರೆಯಿಂದ ಶಿಫಾರಸು ಮಾಡುವ ಕೊರೊನಾ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಸೋಂಕಿತರು ಶೀಘ್ರ ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.
ನಗರದ ಎ.ಜೆ. ಆಸ್ಪತ್ರೆ ವೈದ್ಯಕೀಯ ಸಂಸ್ಥೆಯ ಸಭಾಂಗಣದಲ್ಲಿ ಕೋವಿಡ್ ರೋಗಿಗಳಿಗೆ ವೈದ್ಯಕೀಯ ಸಂಸ್ಥೆಗಳು ಚಿಕಿತ್ಸೆ ನೀಡುವ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಯುಷ್ಮಾನ್ ಆರೋಗ್ಯ ಕರ್ನಾಟಕದ ಯೋಜನೆಯಡಿ ಚಿಕಿತ್ಸೆಗೆ ಬರುವ ಕೊರೊನಾ ರೋಗಿಗಳಿಗೆ ತಪ್ಪದೇ ಚಿಕಿತ್ಸೆ ನೀಡಬೇಕು. ಇವರಿಗೆ ಸಹಕರಿಸಲು ಎರಡು ಜನ ಆರೋಗ್ಯ ಮಿತ್ರರನ್ನು ನೇಮಕ ಮಾಡಲಾಗಿದ್ದು, ಆರೋಗ್ಯಮಿತ್ರರು ಕೊರೊನಾ ಚಿಕಿತ್ಸೆಗೆ ಬರುವ ಅರ್ಹ ಆಯುಷ್ಮಾನ್ ಆರೋಗ್ಯ ಕರ್ನಾಟಕ ಫಲಾನುಭವಿಗಳಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ :50 ಆಮ್ಲಜನಕ ಸಹಿತ ಬೆಡ್ ವ್ಯವಸ್ಥೆ: ಶಾಸಕ ಕುಮಾರ ಬಂಗಾರಪ್ಪ
ಜಿಲ್ಲಾಧಿಕಾರಿ ಡಾ| ರಾಜೇಂದ್ರ. ಕೆ.ವಿ., ಶಾಸಕ ಡಾ| ಭರತ್ ಶೆಟ್ಟಿ ವೈ, ಜಿ. ಪಂ. ಸಿಇಒ ಡಾ|ಕುಮಾರ್, ಎ.ಸಿ. ಮದನ್ಮೋಹನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್ ಉಪಸ್ಥಿತರಿದ್ದರು.
ಹೆಚ್ಚಿನ ದರ ಪಡೆದರೆ ಆಸ್ಪತ್ರೆಯಿಂದ ಮರುಪಾವತಿ
ಕೊರೊನಾ ಸೋಂಕಿತರ ವಿವಿಧ ಪರೀಕ್ಷೆಗಳು ಹಾಗೂ ಚಿಕಿತ್ಸೆಯ ವೆಚ್ಚವನ್ನು ಪಡೆಯುವಾಗ ಸರಕಾರ ನಿಗದಿಪಡಿಸಿರುವ ದರವನ್ನು ಮಾತ್ರ ಪಡೆಯಬೇಕು. ಹೆಚ್ಚಿನ ಮೊತ್ತವನ್ನು ಪಡೆದಿದ್ದಾರೆ ಎಂಬ ದೂರುಗಳಿದ್ದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಯವರಿಗೆ ಸಾರ್ವಜನಿಕರು ಮಾಹಿತಿ ನೀಡಬಹುದು. ಬಳಿಕ ಹೆಚ್ಚುವರಿ ಹಣವನ್ನು ಆಸ್ಪತ್ರೆಯಿಂದ ಮರುಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ