ದೇವಸ್ಥಾನಗಳ ರಕ್ಷಣೆಗೆ ಸರಕಾರ ಬದ್ಧ: ಕೋಟ ಶ್ರೀನಿವಾಸ ಪೂಜಾರಿ

ಕಾರಿಂಜ ದೇವಸ್ಥಾನ ತಡೆಗೋಡೆ ಕುಸಿತ: ಸಚಿವರಿಂದ ಪರಿಶೀಲನೆ

Team Udayavani, Oct 26, 2020, 3:18 PM IST

ದೇವಸ್ಥಾನಗಳ ರಕ್ಷಣೆಗೆ ಸರಕಾರ ಬದ್ಧ: ಕೋಟ ಶ್ರೀನಿವಾಸ ಪೂಜಾರಿ

ಪುಂಜಾಲಕಟ್ಟೆ : ಎಲ್ಲ ದೇವಸ್ಥಾನಗಳ ರಕ್ಷಣೆಗೆ ಸರಕಾರ, ಜಿಲ್ಲಾಡಳಿತ ಬದ್ಧವಾಗಿದ್ದು, ಐತಿಹಾಸಿಕ ಶ್ರೀ  ಕಾರಿಂಜೇಶ್ವರ ದೇವಸ್ಥಾನದ ಹಿತದೃಷ್ಟಿಯಿಂದ  ಆಸುಪಾಸಿನಲ್ಲಿ ಗಣಿಗಾರಿಕೆಗೆ  ತಾತ್ಕಾಲಿಕ ತಡೆ ನೀಡಲು ನಿರ್ಧರಿಸಲಾಗಿದೆ ಎಂದು ಧಾರ್ಮಿಕ ದತ್ತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ತಡೆಗೋಡೆ ಕೆಲವು ದಿನಗಳ ಹಿಂದೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಜತೆಗೆ  ಸೋಮವಾರ ಭೇಟಿ ನೀಡಿದ ಅವರು, ತಡೆಗೋಡೆಯನ್ನು ವೀಕ್ಷಿಸಿ, ಅಧಿಕಾರಿಗಳ ಸಭೆ ನಡೆಸಿ ಬಳಿಕ  ಮಾತನಾಡಿದರು.

ಕಲ್ಲುಕೋರೆ ಹಾಗೂ ಜಲ್ಲಿಕ್ರಷರ್ ನಿಂದ ದೇವಸ್ಥಾನಕ್ಕೆ ಸಮಸ್ಯೆಯಾಗುತ್ತಿದೆ ಎಂಬ ಭಕ್ತಾದಿಗಳ ದೂರಿನ ಹಿನ್ನೆಲೆಯಲ್ಲಿ ಶಾಸಕರ ಜೊತೆ ಪರಿಶೀಲನೆ ನಡೆಸಿ, ಅಧಿಕಾರಿಗಳ ಸಭೆ ನಡೆಸಿದ್ದೇನೆ.

ಇದನ್ನೂ ಓದಿ:ರಾಜಸ್ಥಾನದ ಗೆಲುವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಕೂಟದಿಂದಲೇ ಔಟ್

ಸುತ್ತಮುತ್ತಲಿನ ಮೂರು ಕಲ್ಲಿನ ಕೋರೆಗಳು ಅಧಿಕೃತವಾಗಿದ್ದು, ಅದರಲ್ಲಿ ಪದ್ಮಶೇಖರ್ ಹಾಗೂ ಲಕ್ಷ್ಮಣ್ ಎಂಬವರ ಎರಡು ಕೋರೆಗಳು ತಾಂತ್ರಿಕ ಕಾರಣಗಳಿಂದ ಕಾರ್ಯಸ್ಥಗಿತಗೊಳಿಸಿದೆ. ಪ್ರಸ್ತುತ ಕಾರ್ಯಾಚರಿಸುತ್ತಿರುವ ಮರ್ವಿನ್ ಎಂಬವರ ಕೋರೆಯನ್ನು ತತ್‌ಕ್ಷಣದಿಂದಲೇ ಸ್ಥಗಿತಗೊಳಿಸಲು ಅಧಿಕಾರಿಗಳ ಮೂಲಕ ಸೂಚನೆ ನೀಡಲಾಗುವುದು ಎಂದ ಅವರು, ಗಣಿಗಾರಿಕೆಯಿಂದ ದೇವಳಕ್ಕೆ ಹಾಗೂ ಇಲ್ಲಿನ ಬಂಡೆಗಳಿಗೆ ಆಗುವ ತೊಂದರೆಗಳ ಬಗ್ಗೆ ಎನ್‌ಐಟಿಕೆ ಯ ತಜ್ಞರಿಂದ ಪರಿಶೀಲನೆ ನಡೆಸಿ ಅವರ ವರದಿಯನ್ನಾಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಕುಸಿದು ಬಿದ್ದಿರುವ ಆವರಣಗೋಡೆಯ ಪುನರ್ ನಿರ್ಮಾಣ ಹಾಗೂ ಅನೇಕ ತುರ್ತು ಕಾಮಗಾರಿಗಳನ್ನು ಶೀಘ್ರ ನಡೆಸುವುದಾಗಿ ಹೇಳಿದ ಅವರು ಶಾಸಕ ರಾಜೇಶ್ ನಾಯ್ಕ್ ಅವರ ಕೋರಿಕೆಯಂತೆ ಕಾರಿಂಜೇಶ್ವರ ಕ್ಷೇತ್ರವನ್ನು ಪ್ರವಾಸೋದ್ಯಮಕ್ಕೆ ಸೇರ್ಪಡೆಗೊಳಿಸಲಾಗಿದ್ದು,  ತಜ್ಞರ ಸಲಹೆಯೊಂದಿಗೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ:ಆಗ್ನೇಯ ಪದವೀಧರ ಕ್ಷೇತ್ರವನ್ನು ವೈ.ಎ. ನಾರಾಯಣಸ್ವಾಮಿ ಅಪವಿತ್ರಗೊಳಿಸಿದ್ದಾರೆ: ಡಾ.ಹಾಲನೂರ್

ಬಂಟ್ವಾಳ ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ, ಮುಜರಾಯಿ ಇಲಾಖೆ ಸಹಾಯಕ ಕಮೀಷನರ್ ವೆಂಕಟೇಶ್,  ಗಣಿ ಇಲಾಖಾಧಿಕಾರಿ ಮಾದೇಶ್ವರ, ತಹಶಿಲ್ದಾರ್ ರಶ್ಮಿ ಎಸ್. ಆರ್., ಆಡಳಿತಾಧಿಕಾರಿ ನೋಣಯ್ಯ ನಾಯ್ಕ್, ಕಂದಾಯ ಅಧಿಕಾರಿ ನವೀನ್, ಗ್ರಾಮ ಕರಣಿಕೆ ಆಶಾ ಮೆಹಂದಳೆ,   ಗ್ರಾಮಣಿಗಳಾದ ಗಣಪತಿ ಮಚ್ಚಿನ್ನಾಯ, ವೆಂಕಟರಮಣ ಮುಚ್ಚಿನ್ನಾಯ, ಪ್ರಮುಖರಾದ ಶಿವಪ್ಪ ಗೌಡ, ಪ್ರಮೋದ್ ಕುಮಾರ್ ರೈ, ಡೊಂಬಯ ಅರಳ, ರವೀಶ್ ಶೆಟ್ಟಿ,   ಮೋಹನ  ಆಚಾರ್ಯ, ರಾಜಾರಾಮ್ ನಾಯಕ್, ಪ್ರಭಾಕರ ಪ್ರಭು,ಚಿದಾನಂದ ರೈ, ರಮಾನಾಥ ರಾಯಿ,  ಪುರುಷೋತ್ತಮ ಶೆಟ್ಟಿ, ಗಣೇಶ್ ರೈ ಮಾಣಿ, ಸುದರ್ಶನ ಬಜ, ಪ್ರದೀಪ್ ಅಜ್ಜಿಬೆಟ್ಟು, ರಾಜಗೋಪಾಲ ಪ್ರಭು, ರಾಮಕೃಷ್ಣ ಮಯ್ಯ, ರಾಧಾಕೃಷ್ಣ ಮಯ್ಯ, ಪುರುಷೋತ್ತಮ ಪೂಜಾರಿ, ಅರ್ಚಕರಾದ ಜಯಶಂಕರ ಉಪಾಧ್ಯಾಯ, ಮಿಥುನ್ ರಾಜ್ ನಾವಡ, ಚಂದ್ರಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.