ಶ್ರಮಿಕ ವರ್ಗಕ್ಕೆ ಕೋವಿಡ್ ಪರಿಹಾರ ಪ್ಯಾಕೇಜ್‌ ಸ್ವಾಗತಾರ್ಹ ಕ್ರಮ


Team Udayavani, May 20, 2021, 7:05 AM IST

ಶ್ರಮಿಕ ವರ್ಗಕ್ಕೆ ಕೋವಿಡ್ ಪರಿಹಾರ ಪ್ಯಾಕೇಜ್‌ ಸ್ವಾಗತಾರ್ಹ ಕ್ರಮ

ಕೊರೊನಾ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಕರ್ಫ್ಯೂ ಜಾರಿಯಿಂದ ಸಂಕಷ್ಟಕ್ಕೆ ಸಿಲುಕಿರುವ ದಿನದ ದುಡಿಮೆ ನಂಬಿ ಜೀವನ ನಡೆಸುತ್ತಿರುವವರು, ಕೈಗೆ ಬೆಳೆ ಬಂದರೂ ಮಾರಾಟವಾಗದೆ ನಷ್ಟ ಅನುಭವಿಸಿದ ರೈತರು ಹಾಗೂ ಕೆಲಸ ಇಲ್ಲದೆ ಕಷ್ಟ ಅನುಭವಿಸುತ್ತಿರುವ ಆಟೋ, ಟ್ಯಾಕ್ಸಿ ಚಾಲಕರು, ಕುಶಲ ಕರ್ಮಿಗಳು, ಬೀದಿ ವ್ಯಾಪಾರಿಗಳು ಸೇರಿದಂತೆ ಶ್ರಮಿಕ ವರ್ಗಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕೊನೆಗೂ ಒಟ್ಟಾರೆ 1,111 ಕೋಟಿ ರೂ. ಆರ್ಥಿಕ ಪ್ಯಾಕೇಜ್‌ ಘೋಷಿಸಿದ್ದಾರೆ.

ದುಡಿಮೆ ನಿಂತು ಸಂಕಷ್ಟ ಎದುರಾದಾಗ ಕಷ್ಟದಲ್ಲಿರುವ ವರ್ಗದ ನೆರವಿಗೆ ಬರುವುದು ಯಾವುದೇ ಸರಕಾರದ ಕರ್ತವ್ಯ ಕೂಡ. ಆ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾರದ ಹಿಂದೆಯೇ ಈ ಬಗ್ಗೆ ಆರ್ಥಿಕ ಇಲಾಖೆ ಅಧಿಕಾರಿಗಳು ಹಾಗೂ ಸಂಪುಟದ ಸಹೋದ್ಯೋಗಿಗಳ ಜತೆ ಚರ್ಚಿಸಿದ್ದರು. ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತಿತರ ವಿಚಾರಗಳ ಬಗ್ಗೆ ಅಧ್ಯಯನ ನಡೆಸಿ ಅಂತಿಮವಾಗಿ ಪ್ಯಾಕೇಜ್‌ ಘೋಷಿಸಿದ್ದಾರೆ. ಇದು ಸ್ವಾಗತಾರ್ಹ ಕ್ರಮ. ನೆರೆ ರಾಜ್ಯಗಳಲ್ಲಿ ಈಗಾಗಲೇ ಪ್ಯಾಕೇಜ್‌ ಘೋಷಿಸಿದ್ದರಿಂದ ವಿಪಕ್ಷಗಳು ಸಹ ನಿತ್ಯ ಪ್ಯಾಕೇಜ್‌ ಘೋಷಣೆಗಾಗಿ ಸರಕಾರದ ಮೇಲೆ ಒತ್ತಡ ಹಾಕುತ್ತಲೇ ಇದ್ದವು. ಬಡವರ್ಗವೂ ಪ್ಯಾಕೇಜ್‌ನ ನಿರೀಕ್ಷೆಯಲ್ಲಿತ್ತು.

ಈಗಿನ ಮಟ್ಟಕ್ಕೆ ಹೇಳುವುದಾದರೆ ರಾಜ್ಯ ಸರಕಾರ ಪ್ಯಾಕೇಜ್‌ ಮೂಲಕ ಜನರಿಗೆ ಸ್ಪಂದಿಸುವ ಕೆಲಸ ಮಾಡಿದೆ. ಇತ್ತೀಚೆಗೆ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ಕಾರ್ಡ್‌ ಪಡೆಯದವರಿಗೂ ಮಾಸಿಕ 10 ಕೆ.ಜಿ. ಅಕ್ಕಿ ನೀಡುವ ತೀರ್ಮಾನ ಕೈಗೊಂಡಿತ್ತು. ಇಂದಿರಾ ಕ್ಯಾಂಟೀನ್‌ಗಳಲ್ಲಿ ಮೂರು ಹೊತ್ತು ಉಚಿತ ಊಟ ಸಹ ನೀಡಿತ್ತು. ಜತೆಗೆ ಕೇಂದ್ರ ಸರಕಾರವು ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನ ಯೋಜನೆಯಡಿ ಎರಡು ತಿಂಗಳು ಪ್ರತೀ ಕುಟುಂಬಕ್ಕೆ 10 ಕೆ.ಜಿ. ಅಕ್ಕಿ ನೀಡಲು ತೀರ್ಮಾ­ನಿಸಿತ್ತು. ಇವೆಲ್ಲವೂ ಬಡವರ್ಗ ಸ್ವಲ್ಪ ಉಸಿರಾಡುವಂತೆ ಮಾಡಿತ್ತು.

ಇದೀಗ ಹೂವು, ಹಣ್ಣು, ತರಕಾರಿ ಬೆಳೆದು ನಷ್ಟ ಮಾಡಿಕೊಂಡಿರುವ ರೈತರಿಗೆ ಹೆಕ್ಟೇರ್‌ಗೆ 10 ಸಾವಿರ ರೂ., ಆಟೋ, ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್‌ ಚಾಲಕರಿಗೆ ಹಾಗೂ ಕಟ್ಟಡ ಕಾರ್ಮಿಕರಿಗೆ 3 ಸಾವಿರ ರೂ., ಕೌÒರಿಕರು, ಅಗಸರು, ಟೈಲರ್‌, ಹಮಾಲಿ, ಕುಂಬಾರರು, ಅಕ್ಕ ಸಾಲಿಗರು, ಭಟ್ಟಿ ಕಾರ್ಮಿಕರು, ಮೆಕ್ಯಾನಿಕ್‌, ಕಮ್ಮಾರ, ಗೃಹ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳಿಗೆ 2 ಸಾವಿರ ರೂ. ಅನಂತರ ಆರ್ಥಿಕ ಪ್ಯಾಕೇಜ್‌ ಘೋಷಿಸಿರುವುದರಿಂದ 8 ಲಕ್ಷ ಕುಟುಂಬಗಳಿಗೆ ನೆರವಾಗಲಿದೆ. ಇದರ ಜತೆಗೆ ಕಲಾವಿದರು ಹಾಗೂ ಕಲಾ ತಂಡಗಳಿಗೆ 3 ಸಾವಿರ ರೂ. ಘೋಷಿಸಿರುವುದು ಉತ್ತಮ ಕೆಲಸ.

ರೈತರು ಮತ್ತು ಸ್ವ ಸಹಾಯ ಸಂಘಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಭೂ ಅಭಿವೃದ್ಧಿ ಬ್ಯಾಂಕ್‌ಗಳಿಂದ ಪಡೆದಿರುವ ಸಣ್ಣ ಮತ್ತು ಮಧ್ಯಮ ಹಾಗೂ ದೀರ್ಘಾವಧಿ ಸಾಲಗಳ ಕಂತು ಮರುಪಾವತಿ ಮೇ 1ರಿಂದ ಜುಲೈ 31ರ ವರೆಗೂ ಮುಂದೂಡಿರುವುದರಿಂದ

4.25 ಲಕ್ಷ ರೈತ ಕುಟುಂಬಗಳಿಗೆ, ಲಕ್ಷಾಂತರ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಅನುಕೂಲವಾಗಲಿದೆ. ಆರ್ಥಿಕ ಸಂಕಷ್ಟದಲ್ಲೂ ಇತಿ ಮಿತಿಯಲ್ಲಿ ಅಲ್ಪ ಪ್ರಮಾಣದ ಪ್ಯಾಕೇಜ್‌ ಘೋಷಿಸಿ ಕಷ್ಟಕ್ಕೆ ಸಿಲುಕಿರು ವವರ ನೆರವಿಗೆ ಧಾವಿಸುವ ಮೂಲಕ ಸರಕಾರ ನಿಮ್ಮ ಜತೆಗಿದೆ ಎಂಬ ಧೈರ್ಯ ತುಂಬಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.