ರಾಜ್ಯದಲ್ಲಿ ಚುನಾವಣೆ ಅಂದ್ರೆ ಅಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ : ಈಶ್ವರಪ್ಪ
Team Udayavani, Sep 30, 2020, 12:18 PM IST
ಶಿವಮೊಗ್ಗ : ಶಿರಾ ಹಾಗೂ ಆರ್ ಆರ್ ನಗರ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರದಲ್ಲೂ ಬಿಜೆಪಿ ಗೆಲುವು ನಿಶ್ಚಿತ ಚುನಾವಣೆ ಅಂದ್ರೇ ಅಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂಬುದು ಬರೆದಿಟ್ಟುಕೊಳ್ಳಿ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಎರಡು ಕ್ಷೇತ್ರದಲ್ಲೂ ನಾವೇ ಗೆಲ್ತೇವೆ. ಮತ್ತೇ ಯಾರಿದ್ದಾರೆ ಒಂದು ಕಡೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಡಿದಾಡುತ್ತಿದ್ದಾರೆ. ಇನ್ನೊಂದೆಡೆ ಕುಮಾರಸ್ವಾಮಿ ಅವರು ನಮ್ಮದು ಒಂದು ಪಕ್ಷ ಇದೆ ಎನ್ನುತ್ತಿದ್ದಾರೆ ಈಗಾಗಲೇ ಸರ್ಕಾರ ಹಾಗೂ ಸಿಎಂ ಸ್ಥಾನವನ್ನು ಕುಮಾರಸ್ವಾಮಿ ಕಳೆದುಕೊಂಡಿದ್ದಾರೆ.
ಹಿಂದೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನವನ್ನ ಬಿಜೆಪಿಯೇ ಗೆದ್ದಿದೆ. ಇತ್ತೀಚಿಗೆ ನಡೆದ ಉಪಚುನಾವಣೆ ಯಲ್ಲಿ ಕೂಡ 12 ಸ್ಥಾನ ನಾವೇ ಗೆದ್ದಿದ್ದೇವೆ. ಒಂದು ರೀತಿ ಚುನಾವಣೆಯಲ್ಲಿ ಗೆಲುವು ಅಂದ್ರೇ ಬಿಜೆಪಿಯದ್ದಾಗಿದೆ ಎಂದರು.
ಇದನ್ನೂ ಓದಿ:ಉತ್ತರಪ್ರದೇಶದಲ್ಲಿ ಯೋಗಿ ಆಡಳಿತ ಇರುವವರೆಗೆ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ: ಸಿದ್ದು
ರಾಜ್ಯ ಹಾಗೂ ದೇಶದ ಜನಕ್ಕೆ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಗೊತ್ತಿದೆ. ಬೂತ್ ಮಟ್ಟದಲ್ಲಿ ಬಿಜೆಪಿ ಸದೃಢವಾಗಿದ್ದು, ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತೇ ಎಂದಿದ್ದಾರೆ.
ಇನ್ನು ಸಿಎಂ ಬದಲಾವಣೆ ವಿಚಾರಣೆ ಕುರಿತು ಮಾತನಾಡಿದ ಸಚಿವರು ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.