ಕುಮಾರಸ್ವಾಮಿ ಸಾಲಮನ್ನಾ ಮಾಡಿದ್ದು ಸರಿಯಾಗಿಲ್ಲ; ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ
Team Udayavani, Sep 24, 2019, 11:14 AM IST
ಹುಬ್ಬಳ್ಳಿ:ನಾನು ರಾಜ್ಯದ ರೈತರ ಸಾಲಮನ್ನಾ ಮಾಡಿದ್ದು ಸರಿಯಾಗಿಯೇ ಇತ್ತು. ಆದರೆ ಕುಮಾರಸ್ವಾಮಿ ಮೈತ್ರಿ ಸರಕಾರದಲ್ಲಿ ಸಾಲಮನ್ನಾ ಮಾಡಿದ್ದು ಸರಿಯಾಗಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಅಸಮಾಧಾನ ಹೊರಹಾಕಿದ್ದಾರೆ.
ಹುಬ್ಬಳ್ಳಿಯಲ್ಲಿ ರೈತರೊಬ್ಬರು ಸಾಲಮನ್ನಾ ಇನ್ನೂ ಸರಿಯಾಗಿ ಆಗಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಸಾಲಮನ್ನಾ ಮಾಡಿದ್ದು ಸರಿಯಾಗದೇ ಇರೋದ್ರಿಂದ ಈ ಸಮಸ್ಯೆಯಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ಆರೋಪ, ಪ್ರತ್ಯಾರೋಪ ಮುಂದುವರಿದಂತಾಗಿದೆ.