ಮತ್ತೆ ಸಿಎಂ ವಾಕ್ಸಮರ : ಕುಮಾರಸ್ವಾಮಿ-ಸಿದ್ದರಾಮಯ್ಯ ಟ್ವೀಟ್ ವಾರ್‌


Team Udayavani, May 17, 2019, 6:20 AM IST

cm

ಬೆಂಗಳೂರು: ‘ಸಿದ್ದು ಸಿಎಂ’ ವಿವಾದ ಅಂತ್ಯವಾಗುತ್ತಲೇ, ಮುಖ್ಯಮಂತ್ರಿ ಕುಮಾರಸ್ವಾಮಿ ಮುನ್ನೆಲೆಗೆ ತಂದಿದ್ದ ‘ಖರ್ಗೆ ಸಿಎಂ’ ವಾದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ‘ರೇವಣ್ಣ ಸಿಎಂ’ ಪ್ರತಿವಾದ ಮುಂದಿಟ್ಟಿದ್ದಾರೆ.

ಸಿದ್ದು ಬೆಂಬಲಿಗರಿಂದ ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ’ ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದನ್ನು ಕಾಂಗ್ರೆಸ್‌ ಹೈಕಮಾಂಡ್‌ ಮೇಲೆ ಒತ್ತಡ ತಂದು ತಣ್ಣಗಾಗಿಸುವಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ದೇವೇಗೌಡ ಅವರು ಯಶಸ್ವಿಯಾಗಿದ್ದರು. ಈ ನಡುವೆಯೇ ಸಿಎಂ ಕುಮಾರಸ್ವಾಮಿ ಅವರೇ, ಕುಂದಗೋಳ-ಚಿಂಚೋಳಿ ಉಪಚುನಾವಣೆ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಎಂದೋ ಮುಖ್ಯಮಂತ್ರಿಯಾಗಿರಬೇಕಿತ್ತು ಎಂದು ಹೇಳುವ ಮೂಲಕ ‘ಮುಖ್ಯಮಂತ್ರಿ’ ಹೇಳಿಕೆಗೆ ಕಿಚ್ಚು ಹತ್ತಿಸಿದ್ದರು. ಈಗ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ, ರೇವಣ್ಣ ಅವರೂ ಮುಖ್ಯಮಂತ್ರಿಯಾಗಲು ಅರ್ಹರು ಎಂದು ಹೇಳುವ ಮೂಲಕ ಕುಮಾರಸ್ವಾಮಿ ಮತ್ತು ಜೆಡಿಎಸ್‌ಗೆ ತಿರುಗೇಟು ನೀಡಿದ್ದಾರೆ.

ಸಿದ್ದು ಹೇಳಿದ್ದೇನು?

‘ಎಚ್.ಡಿ. ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ರೇವಣ್ಣ ಕೂಡ ಒಬ್ಬರು. ಎಲ್ಲದಕ್ಕೂ ಕಾಲ ಕೂಡಿ ಬರಬೇಕು’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕುಮಾರಸ್ವಾಮಿ ಹೇಳಿದ್ದು

ಅದಕ್ಕೆ ಪ್ರತಿಯಾಗಿ ಕುಮಾರಸ್ವಾಮಿ, ನಾಡಿನ ಹಿರಿಯ ರಾಜಕಾರಣಿ ಖರ್ಗೆ ಅವರು ಮುಖ್ಯಮಂತ್ರಿಯಾಗಬೇಕಿತ್ತು ಎಂಬ ನನ್ನ ಹೇಳಿಕೆ ಕರ್ನಾಟಕದ ಹಲವು ದಶಕಗಳ ರಾಜಕೀಯ ವಾಸ್ತವತೆಯನ್ನು ಆಧರಿಸಿದ ಮನದಾಳದ ಮಾತು.

ಆಪರೇಷನ್‌ ರೆಸಾರ್ಟ್‌ ಶುರು?

– ಫ‌ಲಿತಾಂಶಕ್ಕೆ ಮುನ್ನ ಮೂರೂ ಪಕ್ಷಗಳ ಶಾಸಕಾಂಗ ಸಭೆ

– ಶಾಸಕರನ್ನು ರೆಸಾರ್ಟ್‌ಗೆ ಸ್ಥಳಾಂತರಿಸುವ ಸಾಧ್ಯತೆ

ಬೆಂಗಳೂರು: ‘ಆಪರೇಷನ್‌ ಭೀತಿ’ಯಿಂದ ಲೋಕಸಭೆ ಚುನಾವಣೆ ಫ‌ಲಿತಾಂಶಕ್ಕೆ ಎರಡು ದಿನ ಮುಂಚಿತವಾಗಿಯೇ ಮೂರೂ ಪಕ್ಷಗಳು ತಮ್ಮ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿವೆ. ಫ‌ಲಿತಾಂಶವು ರಾಜ್ಯ ಸರಕಾರದ ಮೇಲೂ ಪರಿಣಾಮ ಬೀರಬಹುದು ಎಂಬ ಮಾತುಗಳ ಹಿನ್ನೆಲೆಯಲ್ಲಿ ಶಾಸಕರನ್ನು ರೆಸಾರ್ಟ್‌ಗೆ ಸ್ಥಳಾಂತರಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

ಮೇ 23ಕ್ಕೆ ಫ‌ಲಿತಾಂಶ ಹಿನ್ನೆಲೆಯಲ್ಲಿ ಮೇ 21ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಅದೇ ದಿನ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯೂ ನಿಗದಿಯಾಗುವ ಸಾಧ್ಯತೆಯಿದೆ.

ಇನ್ನು ಅತೃಪ್ತ ಕಾಂಗ್ರೆಸ್‌ ಶಾಸಕರು ಮೇ 21ರಂದು ಸಮಾನ ಮನಸ್ಕ ಶಾಸಕರ ಸಭೆ ನಿಗದಿಪಡಿಸಿದ್ದರು. ಅದಕ್ಕೆ ಹೈಕಮಾಂಡ್‌ ಹಾಗೂ ಕೆಪಿಸಿಸಿ ಅವಕಾಶ ನೀಡದ ಕಾರಣ ಅಧಿಕೃತವಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಅದೇ ದಿನ ಕರೆಯಬೇಕು ಎಂದು ಅತೃಪ್ತ ಶಾಸಕರು ಬೇಡಿಕೆ ಇಟ್ಟಿದ್ದಾರೆ.

ಸರಕಾರದಲ್ಲಿ ಕಾಂಗ್ರೆಸ್‌ ಶಾಸಕರ ಕೆಲಸಗಳು ಆಗುತ್ತಿಲ್ಲ. ಹೀಗಾಗಿ, ಮುಖ್ಯಮಂತ್ರಿಯವರಿಗೆ ಕೆಲವೊಂದು ನಿರ್ದೇಶನ ನೀಡಬೇಕಾಗಿದೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲೇ ಅದು ತೀರ್ಮಾನವಾಗಲಿ ಎಂದು ಒತ್ತಾಯಿಸಿದ್ದಾರೆ. ಹೀಗಾಗಿ, ಮೇ 21 ಅಥವಾ 22 ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.