ವಿಶ್ವ ಕುಂದಾಪ್ರ ಕನ್ನಡ ದಿನ; ಗಿಳಿಯಾರಿನಲ್ಲಿ “ಕೆಸರಂಗ್ ” ಮಿಂದೆದ್ದು ಸಂಭ್ರಮ


Team Udayavani, Aug 8, 2021, 7:44 PM IST

ವಿಶ್ವ ಕುಂದಾಪ್ರ ಕನ್ನಡ ದಿನ; ಗಿಳಿಯಾರಿನಲ್ಲಿ “ಕೆಸರಂಗ್ ” ಮಿಂದೆದ್ದು ಸಂಭ್ರಮ

ಕೋಟ: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ಇಂದು ಕುಂದಗನ್ನಡ ಭಾಗದಲ್ಲಿ ಹಲವಾರು ವಿಶೇಷ ಕಾರ್ಯಕ್ರಮಗಳು ಸಂಘಟಿತಗೊಂಡಿದ್ದು, ಕೋಟದ ಮೂಡುಗಿಳಿಯಾರಿನಲ್ಲಿ ಜನಸೇವಾ ಟ್ರಸ್ಟ್ ಆಶ್ರಯದಲ್ಲಿ. ಅಶೋಕ್ ನೀಲಾವರ ಕೆಸರಿನ ಕ್ರೀಡಾಂಗಣದಲ್ಲಿ ”ಕೆಸರಂಗ್” ಕ್ರೀಡಾಕೂಟ ಜರಗಿತು. ಈ ಸಂದರ್ಭ ಮಕ್ಕಳು, ಹಿರಿಯರು ಅತ್ಯಂತ ಸಂತಸದಲ್ಲಿ ಕೆಸರುಗದ್ದೆಯ ಆಟೋಟದಲ್ಲಿ ಭಾಗವಹಿಸಿ ಕೆಸರಿನಲ್ಲಿ ಮಿಂದೆದ್ದು ಸಂಭ್ರಮಿಸಿದರು.

ಅತಿಥಿಗಳನ್ನು ಸಾಂಪ್ರದಾಯಿಕ ಶೈಲಿಯ ಡೋಲು, ಕೊಳಲು ವಾದನದೊಂದಿಗೆ ತಲೆಗೆ ಮಂಡಾಳೆ ತೋಡಿಸಿ ಟ್ರಸ್ಟ್ನ ಶಾಲು ಹೊದಿಸಿ ಕೃಷಿಭೂಮಿಗೆ ಸ್ವಾಗತಿಸಲಾಯಿತು. ಕುಂದಗನ್ನಡದ ರಾಯಭಾರಿ ಮನು ಹಂದಾಡಿ ಹಸಿರು ಕಣ, ಹಸಿರು ಬಳೆ, ಅರಿಶಿಣ, ಕುಂಕುಮ, ಕಾಡಿಗೆ, ಕೆಸ್ಕರ, ಶಾವಂತಿಗೆ ಹೂವನ್ನು ಕೃಷಿ ಭೂಮಿಗೆ ಸಮರ್ಪಿಸಿ ಆರತಿ ಎತ್ತಿ ಪೂಜೆ ಸಲ್ಲಿಸಿ ಕೃಷಿ ಭೂಮಿಯನ್ನು ಗರ್ಭಿಣಿ ಮಹಿಳೆಯರಿಗೆ ಹೋಲಿಸಿ ಭಾವನಾತ್ಮಕ ವಾಗಿ ಮಾತನಾಡಿದರು.

ಪತ್ರಕರ್ತ, ಕುಂದಾಪುರ ಕನ್ನಡ ನಿಘಂಟು ಪ್ರಧಾನ ಸಂಪಾದಕ ಪಂಜು ಗಂಗೊಳ್ಳಿಯವರು ಭೂಮಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶಿಷ್ಠ ರೀತಿಯಲ್ಲಿ ಚಾಲನೆ ನೀಡಿ, ಭಾಷೆ ಉಳಿಸಬೇಕಾದರೆ ದೊಡ್ಡ ಸಾಹಸ ಮಾಡಬೇಕಿಲ್ಲ.ಯಾರೆಲ್ಲ ಭಾಷೆಯನ್ನು ಬಳಸುತ್ತಾರೆ. ಅವರೆಲ್ಲ ಭಾಷೆಯನ್ನು ಉಳಿಸಿದಂತೆ. ಕುಂದಗನ್ನಡ ಎನ್ನುವಂತದ್ದು ಹೃದಯದ ಭಾಷೆ ಎಂದರು. ವೈದ್ಯಾಧಿಕಾರಿ ಡಾ.ನಾಗೇಶ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಇದನ್ನೂ ಓದಿ :ಕಂಬಳ ಕ್ಷೇತ್ರದ ಸಾಧಕ ಕೆದುಬರಿ ಗುರುವಪ್ಪ ಪೂಜಾರಿ ರಸ್ತೆ ಅಪಘಾತದಲ್ಲಿ ಸಾವು

ಕೆಸರಂಗ್ ಕ್ರೀಡಾಕೂಟದ ಪ್ರಯುಕ್ತ ಕೆಸರುಗದ್ದೆಯ ಓಟ, ಹ್ಗಗಜಗ್ಗಾಟ, ರಗೋಲಿ, ಕೆಸರಿನಲ್ಲಿ ವಾಲಿಬಾಲ್, ಅಡಿಕೆ ಹಳೆ ಸ್ಪರ್ಧೆ, ಕಂಬ ಸುತ್ತುವ ಆಟ ಮುಂತಾದ ಆಟೋಟಗಳು ನಡೆಯಿತು. ಮಕ್ಕಳು, ಹಿರಿಯರು ಅತ್ಯಂತ ಸಂತಸದಲ್ಲಿ ಆಟೋಟದಲ್ಲಿ ಭಾಗವಹಿಸಿ ಕೆಸರಿನಲ್ಲಿ ಮಿಂದೆದ್ದು ಸಂಭ್ರಮಿಸಿದರು.

ಜೈ ಭಾರ್ಗವ ಬಳಗದ ರಾಜ್ಯಾಧ್ಯಕ್ಷ ಅಜಿತ್ ಶೆಟ್ಟಿ ಕಿರಾಡಿ, ಉಡುಪಿ ಜಿಲ್ಲಾ ಕ.ಸಾ.ಪ. ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಸಾಹಿತಿ ನರೇಂದ್ರ ಕುಮಾರ್ ಕೋಟ, ಕೋಟ ಸಿ.ಎ. ಬ್ಯಾಂಕ್ ಅಧ್ಯಕ್ಷ ತಿಮ್ಮ ಪೂಜಾರಿ, ಉದ್ಯಮಿ ಭೋಜ ಪೂಜಾರಿ, ಭರತ್ ಶೆಟ್ಟಿ, ವಿಶ್ವನಾಥ ಹೇರ್ಳೆ, ಸಾಂಸ್ಕೃತಿಕ ಚಿಂತಕ ಉದಯ ಶೆಟ್ಟಿ ಪಡುಕರೆ, ಪ್ರವಿಣ್ ಯಕ್ಷಿಮಠ, ಸುಭಾಸ್ ಶೆಟ್ಟಿ ಗಿಳಿಯಾರು, ವಸಂತ್ ಗಿಳಿಯಾರ್, ಅಲ್ವಿನ್ ಅಂದ್ರಾದೆ, ಮತ್ತು ಜನಸೇವಾ ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು. ಸುನೀಲ್ ಪಾಂಡೇಶ್ವರ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.