Kundapura ಪತಿಯಿಂದ ಜೀವಬೆದರಿಕೆ: ದೂರು ದಾಖಲು
Team Udayavani, Mar 27, 2024, 8:45 PM IST
ಕುಂದಾಪುರ: ಕುಂಭಾಶಿ ಗ್ರಾಮದ ನಿವೇದಿತಾ (40) ಅವರು 2005ರಲ್ಲಿ ವಾಸುದೇವ ಅವರನ್ನು ಮದುವೆಯಾಗಿದ್ದು ಈಗ ನಿರ್ಲಕ್ಷ್ಯ ಮಾಡಿ ಜೀವಬೆದರಿಕೆ ಹಾಕುತ್ತಿದ್ದಾರೆ.
ಚಿನ್ನಾಭರಣ ವಶದಲ್ಲಿ ಇಟ್ಟುಕೊಂಡಿದ್ದಾರೆ ಎಂದು ದೂರು ದಾಖಲಾಗಿದೆ. 2020ರಲ್ಲಿ ವಾಸುದೇವ ಮುಂಬಯಿಯಲ್ಲಿ ಪ್ರಿಯಾ ಮೋರೆ ಜತೆ ಸೇರಿ ಹೊಟೇಲ್ ವ್ಯವಹಾರ ಆರಂಭಿಸಿದ್ದು ನಿವೇದಿತಾರನ್ನು ನಿರ್ಲಕ್ಷಿಸಲು ಆರಂಭಿಸಿದ್ದರು.
ಹೊಟೇಲ್ ವ್ಯವಹಾರದಲ್ಲಿ ನಷ್ಟ ಉಂಟಾದ ಬಳಿಕ ಉಡುಪಿ ಸಂತೆಕಟ್ಟೆಯಲ್ಲಿ ವಾಸವಿದ್ದು ಅಲ್ಲಿಯೂ ನಿವೇದಿತಾಗೆ ಚಿತ್ರಹಿಂಸೆ ನೀಡಿ 2023ರಲ್ಲಿ ಮನೆಯಿಂದ ಹೊರಗೆ ಹಾಕಿ ಜೀವ ಬೆದರಿಕೆ ಹಾಕಿದ್ದಾರೆ.
140 ಗ್ರಾಂ ಚಿನ್ನಾಭರಣಗಳನ್ನು ವಶದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ