ಹಳ್ಳಕ್ಕೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತ್ಯು… ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ
Team Udayavani, Feb 2, 2023, 9:23 PM IST
ಕುರುಗೋಡು: ಕುರುಗೋಡು: ಗುತ್ತಿಗನೂರು ಗ್ರಾಮದಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಹಳ್ಳದಲ್ಲಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುವ ದಾರುಣ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಗುತ್ತಿಗನೂರು ಗ್ರಾಮದ ಕುರುಬ ಸಮುದಾಯದ ತಂದೆ ಮಲ್ಲಿಕಾರ್ಜುನ ತಾಯಿ ಲಕ್ಷ್ಮಿ ಅವರ ಮೊದಲನೇ ಮಗ ಮತ್ತು ಕೊನೆಯ ಮಗ ಬೇರೆ ಗ್ರಾಮಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಮಂಗಳವಾರ ಗ್ರಾಮದಲ್ಲಿ ಅಂಬಾದೇವಿ ಜಾತ್ರಾ ಮಹೋತ್ಸವ ಇದ್ದ ಕಾರಣಕ್ಕೆ ಗ್ರಾಮಕ್ಕೆ ಬಂದಿದ್ದಾರೆ, ಗುರುವಾರ ಮಧ್ಯಾಹ್ನ ಗ್ರಾಮದ ಹಳ್ಳದ ತೀರಕ್ಕೆ ಬಯಲು ಬಹಿರ್ದೆಸೆಗೆಂದು ತೆರಳಿದ ಸಂದರ್ಭ ಇಬ್ಬರು ಕಾಲು ಜಾರಿ ಬಿದ್ದು ನೀರು ಪಲಾಗಿದ್ದಾರೆ.
ಇವರ ಜೊತೆಗೆ ಇದ್ದ ಸಂಬಂಧಿ ಸುರೇಶ್ ಎನ್ನುವ ಬಾಲಕ ಗ್ರಾಮಸ್ಥರಿಗೆ ತಿಳಿಸಿದ್ದಾನೆ ಕೂಡಲೇ ಸ್ಥಳಕ್ಕೆ ಬಂದ ಸ್ಥಳೀಯರು ಹರ್ಷವರ್ಧನ ದೇಹವನ್ನು ನೀರಿನಿಂದ ಮೇಲೆ ತಂದಿದ್ದಾರೆ ನಂತರ ಮಣಿಕಂಠನನ್ನು ಹುಡುಕಾಡಿದರೂ ಸಿಗದೆ ಕೆಲ ಸಮಯದ ಬಳಿಕ ಮೃತದೇಹ ಪತ್ತೆಯಾಗಿದೆ.
ಅಂಬಾದೇವಿ, ಗಂಗಾದೇವಿ ನಮ್ಮ ಮಕ್ಕಳೇ ಬೇಕಿತ್ತಾ ನಿಮಗೆ… ಇಬ್ಬರು ಮಕ್ಕಳ ಜೀವ ಕಸಿದುಕೊಂಡು ನಮ್ಮ ಕುಟುಂಬವನ್ನೇ ಅನಾಥ ಮಾಡಿ ಬಿಟ್ಟಿಯಲ್ಲ ಎಂದು ಕುಟುಂಬಸ್ಥರು ತಮ್ಮ ಆಕ್ರಂದವನ್ನು ಹೊರ ಹಾಕಿದರು.
ಮೃತ ಪಟ್ಟ ಬಾಲಕರ ಶವವನ್ನು ಶಾಸಕ ಗಣೇಶ್ ತಮ್ಮ ಕಾರಿನಲ್ಲಿ ಮನೆಗೆ ಸಾಗಿಸಿ ನಂತರ ಕುರುಗೋಡಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಿದ್ದಾರೆ.
ಮೃತ ಪಟ್ಟ ಹಿರಿಯ ಪುತ್ರ ಮಣಿಕಂಠ (14) ಕುರುಗೋಡಿನ ಬೈಲೂರು ಗ್ರಾಮದ ಶಾರದ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ವಿದ್ಯಾಭ್ಯಾಸ ಪಡಿಯುತಿದ್ದ, ಕೊನೆ ಪುತ್ರ ಹರ್ಷ ವರ್ದನ (9) ಬಳ್ಳಾರಿ ಯ ಅಂಬೇಡ್ಕರ್ ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಪಡಿಯುತಿದ್ದ ಇನ್ನೂ ಎರಡನೇ ಪುತ್ರ ಅರ್ಜುನ್ ಹೊಸಪೇಟೆ ಯಲ್ಲಿ ವಿದ್ಯಾಬ್ಯಾಸ ಪಡಿಯುತ್ತಿದ್ದಾನೆ.
ಈ ಕುರಿತು ಕುರುಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬ್ರಹ್ಮಾವರ: ಮದುವೆಗೆಂದು ತಂದಿಟ್ಟ 7.26 ಲಕ್ಷ ರೂ.ನ ಚಿನ್ನಾಭರಣ ಕಳವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ
ಕೆಕೆಆರ್ ಟಿಸಿ ಗೆ 802 ಬಸ್ ಸೇರ್ಪಡೆ: 28ರಂದು ಸೇಡಂದಲ್ಲಿ ಲೋಕಾರ್ಪಣೆ
ಕುತೂಹಲ ಮೂಡಿಸಿದ ಭೇಟಿ: ಸಿಎಂ ಬೊಮ್ಮಾಯಿ ಜತೆ ಒಂದು ಗಂಟೆ ಚರ್ಚಿಸಿದ ಸಾಹುಕಾರ್
ಬಿಸಿಲ ಬೇಗೆಗೆ ರಾಜ್ಯದ ಜನ ತತ್ತರ! ಏನೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು? ಇಲ್ಲಿದೆ ಮಾಹಿತಿ…
ಕೋವಿಡ್ ಮಹಾಮಾರಿ ಮತ್ತೆ ಸದ್ದು; ರಾಜ್ಯದಲ್ಲಿ 155 ಹೊಸ ಪ್ರಕರಣ ಪತ್ತೆ
MUST WATCH
ಹೊಸ ಸೇರ್ಪಡೆ
ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್
ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ
ಮಾಸ್ ಲುಕ್ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್ ರಾಜ್
ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ
ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ