ಕುರುಗೋಡು: ಪಲ್ಲಕ್ಕಿ ಉತ್ಸವದಲ್ಲಿ ಹಾಲಿ ಶಾಸಕ ಗಣೇಶ್ ಭಾವಚಿತ್ರ ಪ್ರದರ್ಶನ

ಸಂಪ್ರದಾಯಕ್ಕೆ ರಾಜಕೀಯ ಮಸಿ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಪೋಸ್ಟರ್

Team Udayavani, Mar 9, 2023, 11:20 AM IST

2-kurugodu

ಕುರುಗೋಡು: ಸಹಸ್ರಾರು ಭಕ್ತರ ಆರಾಧ್ಯ ದೈವ ಹಾಗೂ ಐತಿಹಾಸಿಕ ಪ್ರಸಿದ್ಧಿ ಕುರುಗೋಡು ಶ್ರೀ ದೊಡ್ಡ ಬಸವೇಶ್ವರ ಸ್ವಾಮಿಯ ಶಿವಶರಣ ತಾಯಿ ನೀಲಮ್ಮ ದೇವಿಯ ಪಲ್ಲಕ್ಕಿ ಉತ್ಸವ ಎಳೆಯುವ ಸಂದರ್ಭದಲ್ಲಿ ಹಾಲಿ ಶಾಸಕ ಜೆ.ಎನ್.ಗಣೇಶ್ ಅವರ ಭಾವಚಿತ್ರಗಳು ಪ್ರದರ್ಶನಗೊಂಡಿರುವುದು ಸಂಪ್ರದಾಯಕ್ಕೆ ಮಸಿ ಬಡಿದಂತಾಗಿದೆ.

ಪಲ್ಲಕ್ಕಿ ಉತ್ಸವದಲ್ಲಿ ನಡೆದ ಶಾಸಕರ ಭಾವಚಿತ್ರಗಳ ಪ್ರದರ್ಶನವನ್ನು ಸಾಕಷ್ಟು ಭಕ್ತರು ಖಂಡಿಸುವುದರೊಂದಿಗೆ ಅನೇಕ ವರ್ಷಗಳಿಂದ ಯಾವುದೇ ರಾಜಕೀಯದ ಕಪ್ಪುಚುಕ್ಕಿ ಇಲ್ಲದೇ ನಡೆದುಕೊಂಡು ಬಂದ ಸಂಪ್ರದಾಯಕ್ಕೆ ಮಸಿ ಬಡಿಯುವ ಕೆಲಸವಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ.

ಶಾಸಕರ ಭಾವಚಿತ್ರಗಳ ಪ್ರದರ್ಶನದ ಉದ್ದೇಶವೇನು?. ಹಾಗೂ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲು ಇವರಪ್ಪನ ಮನೆಯ ಆಸ್ತಿನಾ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಕಂಪ್ಲಿ ಕ್ಷೇತ್ರದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಹಲವು ವರ್ಷದಿಂದ ಸಂಪ್ರದಾಯ ಬದ್ಧವಾಗಿ ಕುರುಗೋಡು ಜನತೆ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಯು ಕುರುಗೋಡಿನಲ್ಲಿ ಶ್ರೀ ದೊಡ್ಡ ಬಸವೇಶ್ವರ ಜಾತ್ರಾ ಮತ್ತು ಪಲ್ಲಕ್ಕಿ ಉತ್ಸವ, ಮಹಾರಥೋತ್ಸವ ನಡೆದುಕೊಂಡು ಬಂದಿದೆ.

ಇಷ್ಟು ವರ್ಷಗಳ ಪೈಕಿ ಎಂದಿಗೂ ಇಲ್ಲಿನ ಪಲ್ಲಕ್ಕಿ ಉತ್ಸವ ಮತ್ತು ಮಹಾರಥೋತ್ಸವದಲ್ಲಿ ರಾಜಕೀಯ ಪ್ರವೇಶಿರಲಿಲ್ಲ. ಆದರೆ, ಈ ಬಾರಿಯ ಕುರುಗೋಡಿನ ದೊಡ್ಡ ಬಸವೇಶ್ವರ ದೇವರ ಶಿವಶರಣ ತಾಯಿ ನೀಲಮ್ಮ ದೇವಿಯ ಪಲ್ಲಕ್ಕಿ ಉತ್ಸವದಲ್ಲಿ ಸಂಪ್ರದಾಯಕ್ಕೆ ದಕ್ಕೆ ತರುವಂತಹ ಘಟನವೊಂದು ನಡೆದಿದೆ.

ಹೌದು. ಇಲ್ಲಿನ ಉತ್ಸವ ಸಂದರ್ಭದಲ್ಲಿ ಹಾಲಿ ಶಾಸಕರ ಭಾವಚಿತ್ರ ಪ್ರಜ್ವಲಿಸಿ, ಶಿವಶರಣ ತಾಯಿ ನೀಲಮ್ಮ ದೇವಿಗೆ ಅವಮಾನ ಮಾಡುವ ಜತೆಗೆ ಕಪ್ಪು ಮಸಿ ಬಡಿಯುವಂತಹ ಕೆಲಸವಾಗಿದೆ ಎಂಬ ಗುಸು ಗುಸು ಮಾತುಗಳು ಕ್ಷೇತ್ರಾದ್ಯಾಂತ ಹರಿದಾಡುತ್ತಿವೆ. ಮತ್ತು ಹಾಲಿ ಶಾಸಕರ ಭಾವಚಿತ್ರಗಳ ಪ್ರದರ್ಶನದ ಹಿನ್ನಲೆ ಇಲ್ಲಿನ ಉತ್ಸವದಲ್ಲಿ ರಾಜಕೀಯ ಬೇಸೆಯುವದಕ್ಕೆ ಇವರ ಅಪ್ಪನ ಆಸ್ತಿನಾ ಎಂಬ ಪೋಸ್ಥ್ ಅನ್ನು ವಾಟ್ಸಾಪ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

ಪೋಸ್ಟ್ ಕ್ಷೇತ್ರದಲ್ಲಿ ಜನರ ಚರ್ಚೆಗೆ ಕಾರಣವಾಗಿದೆ. ಉತ್ಸವದಲ್ಲಿ ಕೆಲ ಕಿಡಿಗೇಡಿಗಳು ಹಾಲಿ ಮತ್ತು ಮಾಜಿ ಶಾಸಕರ ಬ್ಯಾನರ್ಲನ್ನು ಹರಿದು, ಕಾಲಿನಿಂದ ತುಳಿದಿದ್ದಾರೆ ಎಂಬ ಮಾತುಗಳು ಕೇಳಿ ಬಂದವು.

ಒಟ್ನಲ್ಲಿ ಈ ಬಾರಿಯ ಉತ್ಸವದಲ್ಲಿ ನಡೆದ ಅವಘಡಗಳು ಕ್ಷೇತ್ರದಲ್ಲಿ ಚರ್ಚೆಗೆ ಗ್ರಾಸವಾಗುವ ಜತೆಗೆ ಜನರ ಮುನ್ನಲೆಗೆ ಬರುತ್ತಿವೆ. ಮತ್ತು ಈ ಘಟನೆಗಳು ಮುಂದಿನ ದಿನದಲ್ಲಿ ಯಾವ ತಿರುವು ಪಡೆದುಕೊಳ್ಳುತ್ತವೆ ಎಂಬುದನ್ನು ಕಾದು ನೋಡಬೇಕಾಗಿದೆ. ಹಾಗೂ ಕುರುಗೋಡಿನ ಪಲ್ಲಕ್ಕಿ ಉತ್ಸವದಲ್ಲಿ ನಡೆದ ಅವಘಡದ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಏನಾದರೂ ಕ್ರಮಕೈಗೊಂಡು, ಮುಂದೆ ಈ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತಾರಾ ಎಂಬುದು ಮುಂದಿನ ದಿನದಲ್ಲಿ ತಿಳಿಯಲಿದೆ.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.