ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ : ಗೈರಾದ ಶಿಕ್ಷಕರಿಗೆ ನೋಟಿಸ್ ನೀಡಲು ಸೂಚನೆ
Team Udayavani, Dec 28, 2021, 8:10 PM IST
ಕುಷ್ಟಗಿ: ಶಿಕ್ಷಕರು ಸಮಯ ಪಾಲನೆ ಮಾಡದ ಹಿನ್ನೆಲೆಯಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಗೈರಾದ ಶಿಕ್ಷಕರಿಗೆ ನೋಟೀಸ್ ಜಾರಿ ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು.
ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಕುಷ್ಟಗಿ ಪಟ್ಟಣದ 3ನೇ ವಾರ್ಡ್ ನ ಗೌರಿ ನಗರ, ನೆರೆಬೆಂಚಿ, ಕುರಬನಾಳ ದಿಢೀರ್ ಭೇಟಿ ನೀಡಿ ಮಕ್ಕಳ ಹಾಜರಿ, ಶಿಕ್ಷಕರ ಹಾಜರಿ ದಾಖಲೆ ಪರಿಶೀಲಿಸಿದರಲ್ಲದೇ ಶಾಲೆಯ ಕುಂಧು ಕೊರತೆಗಳ ಬಗ್ಗೆ ವಿಚಾರಿಸಿದರು. ಗೌರಿ ನಗರದ ಶಾಲೆಯಲ್ಲಿ ಶಿಕ್ಷಕರೊಬ್ಬರು ಗೈರಾಗಿದ್ದರಿಂದ ಸದರಿ ಶಿಕ್ಷಕರಿಗೆ ನೋಟೀಸ್ ಜಾರಿ ಮಾಡಲು, ಕ್ಷೇತ್ರ ಶಿಕ್ಷಣಾಧಿಕಾರಿಗೆ ಮೋಬೈಲ್ ನಲ್ಲಿ ಸಂಪಕರ್ಿಸಿ ಸೂಚಿಸಿದರು. ಇದೇ ವೇಳೆ ಮಕ್ಕಳಿಗೆ ಗುಣಮಟ್ಟದ ಬಿಸಿಊಟ, ಕ್ಷೀರ ಭಾಗ್ಯ, ಶಿಕ್ಷಕರು ಗುಣಮಟ್ಟದ ಶಿಕ್ಷಣದ ಬಗ್ಗೆ ವಿಚಾರಿಸಿದರು. ಶಾಲೆಗೆ ಅಗತ್ಯವಿರುವ ಮೂಲಸೌಕರ್ಯಗಳ ಬಗ್ಗೆ ವಿಚಾರಿಸಿದರಲ್ಲದೇ ಶಿಕ್ಷಕರು ನಿಯಮಿತವಾಗಿ ಶಾಲೆಗೆ ಹಾಜರಾಗಿರಲು ಸೂಚಿಸಿದರು. ಇದೇ ವೇಳೆ ತಾ.ಪಂ. ಇಓ ಡಾ. ಜಯರಾಮ್ ಚೌವ್ಹಾಣ ಹಾಜರಿದ್ದರು
ಇದನ್ನೂ ಓದಿ : ಅಬಕಾರಿ ಅಧಿಕಾರಿಗಳ ದಾಳಿ : ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 8.280 ಲೀ. ಮದ್ಯ ವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು