ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿಗೆ ಬೆಂಕಿ : ತಪ್ಪಿದ ಭಾರಿ ದುರಂತ, ಲಕ್ಷಾಂತರ ರೂ ನಷ್ಟ
Team Udayavani, Mar 10, 2022, 1:41 PM IST
ಕುಷ್ಟಗಿ: ಇಲ್ಲಿನ ಬಸವೇಶ್ವರ ವೃತ್ತದ ಬಳಿ ಹಳೆ ಸ್ಟೇಷನ್ ಎದುರಿಗೆ ಇರುವ ಚಹಾ ದ ಅಂಗಡಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಮುತ್ತಣ್ಣ ಗೊಂದಿ ಅವರಿಗೆ ಸೇರಿದ ಚಾಯ್ ತಲಾಬ್ ಚಹಾದ ಅಂಗಡಿಗೆ ಇತ್ತೀಚೆಗೆ ವೈಯರಿಂಗ್ ದುರಸ್ಥಿ ಮಾಡಿಸಿದ್ದರು. ಆದರೆ ಇಂದು ಬೆಳಗ್ಗೆ ಅಂಗಡಿಯಲ್ಲಿ ಏಕಾಏಕಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ ಇದರಿಂದ ಗಾಬರಿಗೊಂಡ ಅಂಗಡಿ ಮಾಲೀಕ ಕೂಡಲೇ ಇಲೆಕ್ಟ್ರಿಕಲ್ ದುರಸ್ತಿ ಕಾರ್ಯಕ್ಕೆ ಸಂಬಂಧಿಸಿದವರನ್ನು ಕರೆಯಲು ಹೋಗಿದ್ದಾರೆ, ಅಷ್ಟೋತ್ತಿಗೆ ಬೆಂಕಿಯ ಕಿಡಿಯ ಜ್ವಾಲೆ ದೊಡ್ಡ ಪ್ರಮಾಣದಲ್ಲಿ ಕಾಣಿಸಿಕೊಂಡು ಇಡೀ ಅಂಗಡಿಗೆ ಆವರಿಸಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ.
ಅಂಗಡಿಯ ಒಳಗೆ ಮೂರು ತುಂಬಿದ ಗ್ಯಾಸ್ ಸಿಲಿಂಡರ್ ಗಳು ಇರುವುದು ಸುದ್ದಿ ತಿಳಿಯುತ್ತಿದ್ದಂತೆ ಅಲ್ಲಿದ್ದ ಜನರಲ್ಲಿ ಆತಂಕ ಹೆಚ್ಚಾಯಿತು.
ಕೂಡಲೇ ಅಗ್ನಿಶಾಮಕ ಹಾಗೂ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಬಂದು ಅಲ್ಲಿ ನೆರೆದಿದ್ದ ಜನರನ್ನು ಚದುರಿಸಿದರು. ಆದಾಗ್ಯೂ ಜನ ಮುಗಿಬಿದ್ದು ಮೋಬೈಲ್ ಗಳಲ್ಲಿ ವಿಡಿಯೋ ದೃಶ್ಯೀಕರಣ ಮಾಡುವುದರಲ್ಲೇ ಸಹಾಸ ಪ್ರದರ್ಶಿಸಿಸುತ್ತಿರುವುದು ಕಂಡು ಬಂತು.
ಇದನ್ನೂ ಓದಿ : Results; ಪಟಿಯಾಲಾದಲ್ಲಿ ಮಾಜಿ ಸಿಎಂ ಅಮರೀಂದರ್ ಗೆ ಸೋಲು, AAPಗೆ ಅಭಿನಂದನೆ ಸಲ್ಲಿಸಿದ ಸಿಧು
ಬಳಿಕ ಬಂದ ಅಗ್ನಿ ಶಾಮಕ ಸಿಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿ, ಬೆಂಕಿಯ ಜ್ವಾಲೆಯಲ್ಲಿ ಸುಟ್ಟು ಕರಕಲಾಗುವ ಹಂತದಲ್ಲಿದ 2 ಲಕ್ಷಕ್ಕೂ ಅಧಿಕ ಹಣವನ್ನು ರಕ್ಷಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?