ಪಶ್ಚಿಮ ಘಟ್ಟದ ತಪ್ಪಲು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಅಗತ್ಯ

ಗಡಿ ಜಿಲ್ಲೆ ಶಿವಮೊಗ್ಗದಲ್ಲಿ ಮಂಗನಕಾಯಿಲೆ ಪ್ರಕರಣ ಪತ್ತೆ ; ಭೀತಿ ಬೇಡ; ಮುಂಜಾಗ್ರತೆ ಇರಲಿ

Team Udayavani, Jan 23, 2022, 5:20 AM IST

ಪಶ್ಚಿಮ ಘಟ್ಟದ ತಪ್ಪಲು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಅಗತ್ಯ

ಸಾಂದರ್ಭಿಕ ಚಿತ್ರ.

ಕುಂದಾಪುರ: ಗಡಿ ಜಿಲ್ಲೆ ಶಿವಮೊಗ್ಗದಲ್ಲಿ ಈ ವರ್ಷದ ಮೊದಲ ಮಂಗನ ಕಾಯಿಲೆ (ಕೆಎಫ್‌ಡಿ) ಪ್ರಕರಣ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ಪಶ್ಚಿಮ ಘಟ್ಟದ ತಪ್ಪಲಿನ ಗ್ರಾಮಗಳು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ತಾಲೂಕಿನ ಕಾಡಂಚಿನ ಊರುಗಳಿಗೆ ಇದು ಎಚ್ಚರಿಕೆಯ ಕರೆಗಂಟೆ. ಈ ಊರುಗಳ ಜನತೆ ಆತಂಕಪಡದೆ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವುದು ಸದ್ಯ ಅತ್ಯವಶ್ಯಕ.

ತೀರ್ಥಹಳ್ಳಿ ತಾಲೂಕಿನ ಮಾಳೂರು ಪ್ರಾ. ಆ. ಕೇಂದ್ರ ವ್ಯಾಪ್ತಿಯ ಕೂಡಿಗೆ ಗ್ರಾಮದ ಮಹಿಳೆಯಲ್ಲಿ ಮಂಗನ ಕಾಯಿಲೆಯ ಲಕ್ಷಣ ಕಾಣಿಸಿಕೊಂಡಿದೆ. ಇದರಿಂದ ಶಿವಮೊಗ್ಗ ಜಿಲ್ಲೆಗೆ ಹೊಂದಿಕೊಂಡಂತಿರುವ ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟದ ಬುಡದಲ್ಲಿರುವ ಸಿದ್ದಾಪುರ, ಹೊಸಂಗಡಿ, ಕೊಲ್ಲೂರು, ಯಳಜಿತ್‌, ಅಮಾಸೆಬೈಲು, ಮಡಾಮಕ್ಕಿ, ಚಾರ, ಹೆಬ್ರಿ, ಕಬ್ಬಿನಾಲೆ, ಬೇಳಿಂಜೆ, ನಾಡಾ³ಲು, ಮಾಳ ಸಹಿತ ಹತ್ತಾರು ಊರುಗಳ ಜನ ಮುನ್ನೆಚ್ಚರಿಕೆ ವಹಿಸಬೇಕಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಮಂಗಗಳು ಆಕಸ್ಮಿಕವಾಗಿ ಸಾವನ್ನಪ್ಪಿದ ಅಥವಾ ಮನುಷ್ಯರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿರುವ ವರದಿಯಾಗಿಲ್ಲ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಮಂಗನಕಾಯಿಲೆ ಭೀತಿ ಇರುವ ತಾಲೂಕುಗಳಲ್ಲಿ ಈಗಾಗಲೇ ಆರೋಗ್ಯ ಇಲಾಖೆಯು ಸಂಬಂಧಪಟ್ಟ ಸ್ಥಳೀಯಾಡಳಿತ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ಕೆಲವು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಭೀತಿ ಇರುವ ಗ್ರಾಮಗಳ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಎಫ್‌ಡಿ ಲಸಿಕೆ ನೀಡಲು ಕಳೆದ ಸಪ್ಟೆಂಬರ್‌ನಲ್ಲೇ ಸೂಚಿಸಲಾಗಿದೆ.

ಲಕ್ಷಣಗಳೇನು?
ಕೆಎಫ್‌ಡಿ ಅಥವಾ ಮಂಗನ ಕಾಯಿಲೆಯಿಂದ ಸಾವನ್ನಪ್ಪುವ ಮಂಗಗಳ ಮೇಲಿರುವ ಉಣ್ಣಿಗಳು ಮನುಷ್ಯರನ್ನು ಕಡಿದಾಗ ಈ ಕಾಯಿಲೆ ಹರಡುತ್ತದೆ. ಕಾಡಿಗೆ ಮೇಯಲು ತೆರಳಿದ ಜಾನುವಾರುಗಳ ಮೂಲಕವೂ ಉಣ್ಣಿಗಳು ಮನುಷ್ಯರನ್ನು ಕಚ್ಚುವ ಸಾಧ್ಯತೆಗಳಿವೆ. ತೀವ್ರ ಜ್ವರ, ತಲೆನೋವು, ಮೈಕೈ ನೋವು, ಮೂಗು, ಬಾಯಿ ಅಥವಾ ದೇಹದ ಇತರ ಭಾಗಗಳಿಂದ ರಕ್ತಸ್ರಾವ ಆರಂಭಿಕ ಲಕ್ಷಣಗಳು. 1ರಿಂದ 2 ವಾರಗಳ ಅನಂತರ ಮತ್ತೆ ಮೆದುಳಿನ ಉರಿಯೂತ, ಜ್ವರ, ಕುತ್ತಿಗೆ ಬಿಗಿ ಹಿಡಿತ, ತಲೆನೋವು, ವಾಂತಿ ಕಾಣಿಸಿಕೊಳ್ಳುತ್ತದೆ.

2019ರಲ್ಲಿ ಪ್ರಕರಣ
ಉಡುಪಿ ಜಿಲ್ಲೆಯಲ್ಲಿ ಕಳೆದ ವರ್ಷ ಮತ್ತು ಅದರ ಹಿಂದಿನ ವರ್ಷ ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿಲ್ಲ. 2019ರಲ್ಲಿ ವರದಿಯಾಗಿದ್ದು, ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

2019ರಲ್ಲಿ ಉತ್ತುಂಗಕ್ಕೆ
2019ರಲ್ಲಿ ಶಿವಮೊಗ್ಗ ಜಿಲ್ಲೆಯ 343 ಮಂದಿಗೆ, ಉತ್ತರ ಕನ್ನಡ 93, ಉಡುಪಿ 2, ಬೆಳಗಾವಿ 2, ಮೈಸೂರು 3, ಚಿಕ್ಕಮಗಳೂರು 1, ಹಾಸನ ಒಬ್ಬರಿಗೆ ಸೇರಿ 445 ಮಂದಿಗೆ ಪಾಸಿಟಿವ್‌ ಬಂದಿತ್ತು. ಒಟ್ಟು 15 ಮಂದಿ ಮೃತಪಟ್ಟಿದ್ದರು. 2020ರಲ್ಲಿ 287 ಮಂದಿಗೆ ಪಾಸಿಟಿವ್‌ ಬಂದಿದ್ದು ಐವರು ಮೃತಪಟ್ಟಿದ್ದರು. 2021ರಲ್ಲಿ 23 ಮಂದಿಗೆ ಪಾಸಿಟಿವ್‌ ಬಂದಿದ್ದು ಶೂನ್ಯ ಮರಣ ದಾಖಲಾಗಿತ್ತು.

2.75 ಲಕ್ಷ ಜನಸಂಖ್ಯೆ
ಕೆಎಫ್‌ಡಿ ಪೀಡಿತ ಜಿಲ್ಲೆಗಳಲ್ಲಿ ಶಿವಮೊಗ್ಗ ಪ್ರಮುಖವಾಗಿದ್ದು, ಅನಂತರದ ಸ್ಥಾನದಲ್ಲಿ ಉತ್ತರಕನ್ನಡ ಜಿಲ್ಲೆ ಇದೆ. ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಮೈಸೂರು ಭಾಗದ 2.75 ಲಕ್ಷ ಜನ ಕೆಎಫ್‌ಡಿ ಬಾಧಿತ ಗ್ರಾಮಗಳ ವ್ಯಾಪ್ತಿಗೆ ಬರುತ್ತಾರೆ.

ಜನ ಏನು ಮಾಡಬೇಕು?
– ಜ್ವರ ಇದ್ದಲ್ಲಿ ನಿರ್ಲಕ್ಷ é ಮಾಡದೆ ತತ್‌ಕ್ಷಣ ಸಮೀಪದ ಪ್ರಾ. ಆರೋಗ್ಯ ಕೇಂದ್ರ, ತಾಲೂಕು ಅಥವಾ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಿ.
– ಮಂಗಗಳಿಗೆ ಕಚ್ಚಿದ ಉಣ್ಣಿ ಮನುಷ್ಯರಿಗೆ ಕಚ್ಚಿದಾಗ ಈ ಕಾಯಿಲೆ ಬರುತ್ತದೆ., ಆದ್ದರಿಂದ ಉಣ್ಣಿ ಕಡಿತದಿಂದ ಪಾರಾಗಲು ಕಾಡಿಗೆ ಹೋಗುವಾಗ ಡಿಎಂಪಿ ಎಣ್ಣೆಯನ್ನು ಮೈಕೈ, ಕಾಲುಗಳಿಗೆ ಹಚ್ಚಿಕೊಂಡು ಹೋಗುವುದು ಉತ್ತಮ. ಜಾನುವಾರುಗಳನ್ನು ಕಾಡು, ಹಾಡಿಗೆ ಮೇಯಲು ಬಿಡುವಾಗ ಎಚ್ಚರಿಕೆ ಅಗತ್ಯ.
– ಮಂಗಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಕಂಡುಬಂದರೆ ಸ್ಥಳೀಯ ಗ್ರಾ.ಪಂ. ಪಿಡಿಒ, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿ.
– ಯಾವುದೇ ಕಾರಣಕ್ಕೂ ಮಂಗಗಳನ್ನು ಸಾಯಿಸಲು ಹೋಗಬೇಡಿ. ಅದು ಅನಾವಶ್ಯಕ ಗೊಂದಲವನ್ನು ಸೃಷ್ಟಿಸುತ್ತದೆ.
– ಯಾವುದೇ ಗೊಂದಲಗಳಿದ್ದರೆ ಆರೋಗ್ಯ ಇಲಾಖೆ, ಸ್ಥಳೀಯ ಗ್ರಾ.ಪಂ., ಅರಣ್ಯ ಇಲಾಖೆ ಅಧಿಕಾರಿಗಳನ್ನು ವಿಚಾರಿಸಿ, ಪರಿಹಾರ ಕಂಡುಕೊಳ್ಳಿ.

ಮಂಗನ ಕಾಯಿಲೆಯ ಸಂಭಾವ್ಯ ಸವಾಲು ಎದುರಿಸಲು ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನ ಗ್ರಾಮಗಳಲ್ಲಿ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಆಶಾ ಕಾರ್ಯಕರ್ತೆಯರು ಮನೆ- ಮನೆ ಭೇಟಿ ವೇಳೆ ಅರಿವು ಮೂಡಿಸುತ್ತಿದ್ದಾರೆ. ಭಯ ಬೇಡ. ಆದರೆ ಕಾಡಿಗೆ ಹೋಗುವ ಜನರು, ಜಾನುವಾರುಗಳ ಬಗ್ಗೆ ಮುನ್ನೆಚ್ಚರಿಕೆ ಇರಲಿ.
– ಡಾ| ನಾಗಭೂಷಣ ಉಡುಪ, ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ

ಮಂಗನ ಕಾಯಿಲೆ ಬಗ್ಗೆ ಭೀತಿ ಬೇಡ, ಆದರೆ ಮುಂಜಾಗ್ರತೆ ಇರಲಿ. ಮಂಗಗಳು ಅಸಹಜವಾಗಿ ಸಾವನ್ನಪ್ಪಿದರೆ ತತ್‌ಕ್ಷಣ ಸಮೀಪದ ಆಸ್ಪತ್ರೆಯನ್ನು ಸಂಪರ್ಕಿಸಿ. ಜ್ವರ, ವಿಪರೀತ ತಲೆನೋವಿನಂತಹ ಲಕ್ಷಣ ಕಂಡು ಬಂದರೆ, ನಿರ್ಲಕ್ಷ್ಯ ಮಾಡಬೇಡಿ. ಕಾಡಿಗೆ ಹೋಗುವವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿಗುವ ಡಿಎಂಪಿ ಎಣ್ಣೆ ಹಚ್ಚಿಕೊಂಡು ಹೋದರೆ ಉತ್ತಮ.
– ಡಾ| ಕಿಶೋರ್‌ ಕುಮಾರ್‌, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.