ಕಾರ್ಮಿಕರ ಮುಷ್ಕರ: ಸ್ವತ್ಛತ ಸೇವೆ ವ್ಯತ್ಯಯ
Team Udayavani, Feb 2, 2023, 6:05 AM IST
ಮಂಗಳೂರು/ಉಡುಪಿ: ನಗರದ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿಗೊಳಪಡಿಸಿ ಹಂತ ಹಂತವಾಗಿ ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಸ ಸಾಗಿಸುವ ವಾಹನಗಳ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್, ಒಳಚರಂಡಿ ಕಾರ್ಮಿಕರ ಅನಿರ್ದಿ ಷ್ಟಾವಧಿ ಮುಷ್ಕರ ಬುಧವಾರ ನಡೆದಿದೆ.
ಮಂಗಳೂರಿನಲ್ಲಿ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದ ಆಶ್ರಯದಲ್ಲಿ ಮಂಗಳೂರಿನ ತಾಲೂಕು ಆಡಳಿತ ಸೌಧದ ಮುಂದೆ ಕೈಗೊಂಡಿರುವ ಮುಷ್ಕರಕ್ಕೆ ಬುಧವಾರ ಬೆಳಗ್ಗೆ ಹೊರಗುತ್ತಿಗೆ ನೌಕರರ ಸಂಘದ ಸಂಚಾಲಕ ಅಣ್ಣಪ್ಪ ಕಾರೆಕ್ಕಾಡು ಚಾಲನೆ ನೀಡಿದರು. ಮಂಗಳೂರು ನಗರದಲ್ಲಿ ಕಸ ಸಂಗ್ರಹ ಸೇರಿದಂತೆ ವಿವಿಧ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿತ್ತು. ಗುರುವಾರವೂ ಪ್ರತಿಭಟನೆ ಮುಂದುವರಿಯುವ ಸಾಧ್ಯತೆ ಇದೆ.
ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಮುಷ್ಕರ ನಡೆಸಿಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ
ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ
ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ