ಲೇಡಿ ರಾಣಾ ಬ್ಯಾಟಿಂಗ್‌ ಪ್ರತಾಪ : ಚೊಚ್ಚಲ ಟೆಸ್ಟ್‌ನಲ್ಲೇ ಅಮೋಘ ಆಲ್‌ರೌಂಡ್‌ ಸಾಹಸ


Team Udayavani, Jun 20, 2021, 11:20 PM IST

ಲೇಡಿ ರಾಣಾ ಬ್ಯಾಟಿಂಗ್‌ ಪ್ರತಾಪ : ಚೊಚ್ಚಲ ಟೆಸ್ಟ್‌ನಲ್ಲೇ ಅಮೋಘ ಆಲ್‌ರೌಂಡ್‌ ಸಾಹಸ

ಬ್ರಿಸ್ಟಲ್‌: ಏಳು ವರ್ಷಗಳ ಬಳಿಕ ಟೆಸ್ಟ್‌ ಆಡಲಿಳಿದ ಭಾರತವನ್ನು ಇಬ್ಬರು “ಡೆಬ್ಯು’ ವನಿತಾ ಆಟಗಾರ್ತಿಯರು ಬಚಾಯಿಸಿದ್ದು ದೊಡ್ಡ ಸಾಧನೆಯಾಗಿ ದಾಖಲಾಗಿದೆ. ಆತಿಥೇಯ ಇಂಗ್ಲೆಂಡ್‌ ವಿರುದ್ಧ ಬ್ರಿಸ್ಟಲ್‌ನಲ್ಲಿ ಆಡಲಾದ ಈ ಟೆಸ್ಟ್‌ ಪಂದ್ಯದಲ್ಲಿ 17 ವರ್ಷದ ಡ್ಯಾಶಿಂಗ್‌ ಓಪನರ್‌ ಶಫಾಲಿ ವರ್ಮ ಮತ್ತು ಉತ್ತರಾಖಂಡದ ಆಲ್‌ರೌಂಡರ್‌ ಸ್ನೇಹ್‌ ರಾಣಾ ಭರವಸೆಯ ತಾರೆ ಗಳಾಗಿ ಮಿಂಚಿದರು.

ಯಾವ ಎಸೆತಗಳಿಗೂ ಕೇರ್‌ ಮಾಡದ ಶಫಾಲಿ ಥೇಟ್‌ ವೀರೇಂದ್ರ ಸೆಹವಾಗ್‌ ಶೈಲಿಯಲ್ಲಿ ಬ್ಯಾಟ್‌ ಬೀಸಿ 96 ಮತ್ತು 63 ರನ್‌ ಬಾರಿಸಿ ಅನೇಕ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಂಡದ್ದು ಈಗ ಇತಿಹಾಸ.

ಮ್ಯಾಚ್‌ ಸೇವಿಂಗ್‌ ನಾಕ್‌
ಇನ್ನೊಂದೆಡೆ ಸ್ನೇಹ್‌ ರಾಣಾ ಸಂಕಟದ ಸಮಯದಲ್ಲಿ ತಂಡದ ಕೈಹಿಡಿದರು. ಫಾಲೋಆನ್‌ಗೆ ಸಿಲುಕಿದ ಭಾರತ 199ಕ್ಕೆ 7 ವಿಕೆಟ್‌ ಕಳೆದುಕೊಂಡು ಸೋಲಿನತ್ತ ಮುಖ ಮಾಡಿದಾಗ “ಲೇಡಿ ರಾಣಾ’ ಅಜೇಯ 80 ರನ್‌ ಬಾರಿಸಿ ತಮ್ಮ ಬ್ಯಾಟಿಂಗ್‌ ಪ್ರತಾಪ ತೋರಿದರು. ಇದು ಫಾಲೋಆನ್‌ ಇನ್ನಿಂಗ್ಸ್‌ನಲ್ಲಿ ದಾಖಲಾದ 3ನೇ ಅತ್ಯಧಿಕ ವೈಯಕ್ತಿಕ ಗಳಿಕೆ.

ಶಿಖಾ ಪಾಂಡೆ (18), ತನಿಯಾ ಭಾಟಿಯ (ಅಜೇಯ 44) ನೆರವಿ ನಿಂದ ರಾಣಾ ತಂಡವನ್ನು ಸೋಲಿನಿಂದ ಪಾರುಮಾಡಿದರು. ಇಂಗ್ಲೆಂಡ್‌ ನೆಲದಲ್ಲಿ ಭಾರತ ಅಜೇಯವಾಗಿ ಉಳಿಯಿತು.

ಇದನ್ನೂ ಓದಿ : ಐಸಿಸಿ ವಿಶ್ವಕಪ್‌ ಟೆಸ್ಟ್‌ ಫೈನಲ್‌ : ಜಾಮೀಸನ್‌ ಜಬರ್ದಸ್ತ್ ದಾಳಿ; ಭಾರತ 217ಕ್ಕೆ ಆಲೌಟ್‌

8ನೇ ಕ್ರಮಾಂಕದಲ್ಲಿ ಆಡಲಿಳಿದ ಸ್ನೇಹ್‌ ರಾಣಾ 154 ಎಸೆತಗಳನ್ನು ಎದುರಿಸಿ 13 ಬೌಂಡರಿ ನೆರವಿನಿಂದ ತಮ್ಮ ಇನ್ನಿಂಗ್ಸ್‌ ಕಟ್ಟಿದರು. ಪಂದ್ಯ ವನ್ನು 12 ಓವರ್‌ಗಳಷ್ಟು ಬೇಗ ಮುಗಿಸಿ ಡ್ರಾ ಮುದ್ರೆ ಒತ್ತಿದಾಗ ಭಾರತ 8 ವಿಕೆಟಿಗೆ 344 ರನ್‌ ಗಳಿಸಿತ್ತು. ಇದು ಫಾಲೋಆನ್‌ಗೆ ತುತ್ತಾದ ತಂಡವೊಂದು ಪೇರಿಸಿದ ಎರಡನೇ ಅತ್ಯಧಿಕ ರನ್‌ ಆಗಿದೆ. ಪಂದ್ಯವನ್ನು ಇನ್ನೂ ಕೆಲವು ಓವರ್‌ ಮುಂದುವರಿಸಿದರೆ ರಾಣಾ ಶತಕ ಸಂಭ್ರಮವನ್ನು ಆಚರಿಸುವ ಎಲ್ಲ ಸಾಧ್ಯತೆ ಇತ್ತು.

ಭಾರತದ ಮೊದಲ ಸಾಧಕಿ
ಸ್ನೇಹ್‌ ರಾಣಾ ಚೊಚ್ಚಲ ಟೆಸ್ಟ್‌ ನಲ್ಲೇ 4 ವಿಕೆಟ್‌ ಉರುಳಿಸುವ ಜತೆಗೆ 4 ವಿಕೆಟ್‌ ಕಿತ್ತ ಭಾರತದ ಮೊದಲ ಹಾಗೂ ವಿಶ್ವದ 4ನೇ ಆಟಗಾರ್ತಿ ಎನಿಸಿದರು. ಏಕೈಕ ಬೌಲಿಂಗ್‌ ಅವಕಾಶದಲ್ಲಿ ಅವರು 131ಕ್ಕೆ 4 ವಿಕೆಟ್‌ ಉರುಳಿಸಿದ್ದರು.

ರಾಣಾ 6ನೇ ಹಾಗೂ ಇದಕ್ಕಿಂತ ಕೆಳ ಕ್ರಮಾಂಕದಲ್ಲಿ ಆಡಲಿಳಿದು ಅತ್ಯಧಿಕ ರನ್‌ ಹೊಡೆದ ಭಾರತೀಯ ಆಟಗಾರ್ತಿ ಎಂಬ ದಾಖಲೆಯನ್ನೂ ಸ್ಥಾಪಿಸಿದರು. ಹಿಂದಿನ ದಾಖಲೆ 72 ರನ್‌ ಆಗಿತ್ತು. ತನಿಯಾ ಭಾಟಿಯ ಜತೆಗೂಡಿ 104 ರನ್ನುಗಳ ಅಜೇಯ ಜತೆಯಾಟ ದಾಖಲಿಸಿದರು. ಇದು 9ನೇ ವಿಕೆಟಿಗೆ ಭಾರತದ ಜೋಡಿಯೊಂದು ಪೇರಿಸಿದ ಅತ್ಯಧಿಕ ರನ್‌ ಆಗಿದೆ.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌-9 ವಿಕೆಟಿಗೆ 396 ಡಿಕ್ಲೇರ್‌. ಭಾರತ-231 ಮತ್ತು 8 ವಿಕೆಟಿಗೆ 344 (ರಾಣಾ ಔಟಾಗದೆ 80, ಶಫಾಲಿ 63, ದೀಪ್ತಿ 54, ತನಿಯಾ ಔಟಾಗದೆ 44, ಪೂನಂ ರಾವತ್‌ 39).
ಪಂದ್ಯಶ್ರೇಷ್ಠ: ಶಫಾಲಿ ವರ್ಮ.

ಟಾಪ್ ನ್ಯೂಸ್

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.