ನಿರ್ವಹಣೆಯಿಲ್ಲದೆ ಸೊರಗುತ್ತಿವೆ ಅಭಿವೃದ್ಧಿ ಹೊಂದಿದ ಕೆರೆಗಳು!


Team Udayavani, Feb 9, 2023, 7:05 AM IST

ನಿರ್ವಹಣೆಯಿಲ್ಲದೆ ಸೊರಗುತ್ತಿವೆ ಅಭಿವೃದ್ಧಿ ಹೊಂದಿದ ಕೆರೆಗಳು!

ಸಾಂದರ್ಭಿಕ ಚಿತ್ರ

ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಉಭಯ ಜಿಲ್ಲೆಗಳಲ್ಲಿ ತಲಾ 75 ಕೆರೆಗಳ ಅಭಿವೃದ್ಧಿಗೆ ಆಯ್ಕೆ ಮಾಡಲಾಗಿದೆ. ಇದರ ಹೊರತಾಗಿಯೂ ಸಣ್ಣ ನೀರಾವರಿ ಇಲಾಖೆ ಹಾಗೂ ವಿವಿಧ ಇಲಾಖೆಗಳಿಂದಲೂ ಕೆರೆಗಳ ಅಭಿವೃದ್ಧಿಯಾಗುತ್ತಿದೆ. ಆದ ರೆ ಅಭಿವೃದ್ಧಿಪಡಿಸಿದ ಕೆರೆಗಳು ನಿರ್ವಹಣೆ ಇಲ್ಲದೇ ವರ್ಷದೊಳಗೆ ಹಿಂದಿನ ಸ್ಥಿತಿ ತಲುಪುತ್ತಿವೆ.

ಗ್ರಾ.ಪಂ. ಅಥವಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇರುವ ಎಲ್ಲ ಕೆರೆಗಳಿಗೂ ಸ್ಥಳೀಯರನ್ನು ಒಳಗೊಂಡ ನಿರ್ವಹಣ ಸಮಿತಿಯನ್ನು ರಚನೆ ಮಾಡಲಾಗುತ್ತದೆ. ಕೆರೆಗಳ ಅಭಿವೃದ್ಧಿಯ ಸಂದರ್ಭ ಮಾತ್ರ ಈ ಸಮಿತಿ ಕ್ರಿಯಾಶೀಲವಾಗಿರುತ್ತವೆ. ಅಭಿವೃದ್ಧಿ ಕಾರ್ಯ ಪೂರ್ಣವಾಗುತ್ತಿದ್ದಂತೆ ಸಮಿತಿಗಳು ಹೇಳಹೆಸರಿಲ್ಲದಂತೆ ದೂರಾಗುತ್ತವೆ. ಕೆಲವು ಕೆರೆಗಳಿಗೆ ಮೀನಿನ ಮರಿಗಳನ್ನು ಬಿಡಲಾಗುತ್ತದೆ. ಅಂತಹ ಸಂದರ್ಭದಲ್ಲಿ ಗುತ್ತಿಗೆ ಪಡೆದವರು ನಿರ್ವಹಣೆ ಮಾಡುತ್ತಾರೆ. ಮೀನು ಮರಿ ಬಿಟ್ಟು, ಮೀನು ಕೃಷಿ ಮುಗಿದ ಅನಂತರದಲ್ಲಿ ಕೆರೆ ನಿರ್ವಹಣೆಯಿಲ್ಲದೆ ಅನಾಥವಾಗುತ್ತಿವೆ.

ಅಮೃತ್‌ ಸರೋವರ್‌ ಯೋಜನೆಯಡಿ ಆಯ್ಕೆಯಾಗಿರುವ ಬಹುತೇಕ ಕೆರೆಗಳನ್ನು 2ರಿಂದ 5 ಲಕ್ಷ ರೂ. ವ್ಯಯಿಸಿ ಅಭಿವೃದ್ಧಿ ಮಾಡಲಾಗಿದೆ. ಕೆಲವು ಕೆರೆಗಳು ಅಭಿವೃದ್ಧಿ ಹೊಂದುತ್ತಿವೆ. ಸ್ವಾತಂತ್ರೊéàತ್ಸವದ ಧ್ವಜಾರೋಹಣದ ಹಿನ್ನೆಲೆಯಲ್ಲಿ ಕೆರೆಯ ಎದುರು ಧ್ವಜ ಕಟ್ಟೆಯನ್ನು ನಿರ್ಮಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಬೃಹತ್‌ ಕೆರೆಗಳು 131 ಹೆಕ್ಟೇರ್‌ ಪ್ರದೇಶದಲ್ಲಿವೆ. ಉಡುಪಿ ಜಿಲ್ಲೆಯಲ್ಲಿ 4 ಬೃಹತ್‌ ಕೆರೆಗಳು 283 ಹೆಕ್ಟೇರ್‌ ಪ್ರದೇಶದಲ್ಲಿವೆ. ಸಣ್ಣ ಮತ್ತು ಮಧ್ಯಮ ಕೆರೆಗಳು ಉಭಯ ಜಿಲ್ಲೆಗಳಲ್ಲಿ ತಲಾ 500ಕ್ಕೂ ಅಧಿಕವಿದೆ. ಕೆರೆಗಳ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ ಹೆಚ್ಚಿನ ಅನುದಾನ ನೀಡಲಾಗುತ್ತದೆ. ಕೃಷಿಗೆ ಅನುಕೂಲವಾಗುವ ಕೆರೆಗಳ ಅಭಿವೃದ್ಧಿಯನ್ನು ಸಣ್ಣ ನೀರಾವರಿ ಇಲಾಖೆಯಿಂದ ಮಾಡಲಾಗುತ್ತದೆ. ಉಭಯ ಜಿಲ್ಲೆಗಳಲ್ಲಿ ನದಿ ಹರಿವು ಹೆಚ್ಚಿರುವುದರಿಂದ ಕೃಷಿಕರು ಕೆರೆಯನ್ನು ಅವಲಂಬಿಸಿಕೊಂಡಿಲ್ಲ. ಹೀಗಾಗಿ ಕೆರೆಯ ನಿರ್ವಹಣೆಯೂ ಸರಿಯಾಗಿ ಆಗುತ್ತಿಲ್ಲ ಎಂದು ಹೇಳಾಗುತ್ತಿದೆ.

ನರೇಗಾದಡಿ ಅಭಿವೃದ್ಧಿ ಅವಕಾಶ
ಕೆರೆಗಳ ಅಭಿವೃದ್ಧಿಗೆ ನರೇಗಾದಡಿ ಹೆಚ್ಚಿನ ಅವಕಾಶ ವಿದೆ. ಗ್ರಾ.ಪಂ. ಪಿಡಿಒ, ಅಧ್ಯಕ್ಷ ಹಾಗೂ ಸದಸ್ಯರ ಸಮನ್ವಯದೊಂದಿಗೆ ಕಾರ್ಯ ನಡೆಸಿದಾಗ ನರೇಗಾ ದಡಿ ಕೆರೆಗಳನ್ನು ಅಭಿವೃದ್ಧಿಪಡಿಸಿ, ನಿರ್ವಹಿಸಲು ಸಾಧ್ಯವಿದೆ. ಆದರೆ ಕೆಲವು ತಾಂತ್ರಿಕ ಸಮಸ್ಯೆಯಿಂದ ಇದು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ಹೊಂದಿದ ಕೆರೆಗಳಲ್ಲಿ ಪ್ರತೀ ವರ್ಷ ಹೂಳೆತ್ತಬೇಕಾಗುತ್ತದೆ.

ಒಂದು ವರ್ಷ ಹೂಳೆತ್ತದಿದ್ದರೆ ಕೆರೆಯ ಸ್ಥಿತಿ ಬೇರೆಯಾಗಿರುತ್ತದೆ. ನರೇಗಾದಡಿ ಹೂಳೆತ್ತಲು ಅವಕಾಶವಿದೆ. ಆದರೆ ಯಂತ್ರೋಪಕರಣ ಬಳಸುವಂತಿಲ್ಲ. ಸಂಪೂರ್ಣ ಮಾನವ ಶ್ರಮದಿಂದಲೇ ಆಗಬೇಕು. ಹೂಳೆತ್ತುವ ಕಾರ್ಯಕ್ಕೂ ಯಾರೂ ಮುಂದಾಗದೆ ಇರುವುದರಿಂದ ಬಹುತೇಕ ಗ್ರಾ.ಪಂ.ಗಳು ಇದರ ಗೋಜಿಗೆ ಹೋಗುವುದಿಲ್ಲ.

ಯಾವುದೇ ಇಲಾಖೆಯ ಅನುದಾನದಲ್ಲಿ ಕೆರೆಯ ಅಭಿವೃದ್ಧಿಯಾದರೂ ಅದರ ನಿರ್ವಹಣೆಯನ್ನು ಸ್ಥಳೀಯಾಡಳಿತವೇ ಮಾಡಬೇಕಾಗುತ್ತದೆ.

ಸಣ್ಣ ನೀರಾವರಿ ಇಲಾಖೆ
ಬೃಹತ್‌ ಕೆರೆಗಳು
– ಮಂಗಳೂರು ಕಾವೂರಿನ “ಕಾವೂರು ಕೆರೆ’
– ಬಂಟ್ವಾಳದ ಕಾರಿಂಜೇಶ್ವರ ಕೆರೆ
– ಕಾರ್ಕಳದ ಆನೆಕೆರೆ
– ಕಾಪು ಎಲ್ಲೂರಿನ ದಳಂತ್ರ ಕೆರೆ
– ಬ್ರಹ್ಮಾವರ ಚಾಂತಾರಿನ ಮದಗ
– ಕುಂದಾಪುರ ತಾಲೂಕಿನ ಕಂಏರಿಕೆರೆ

ಕೆರೆಗಳ ಅಭಿವೃದ್ಧಿಗೆ ನರೇಗಾದಲ್ಲಿ ಮುಕ್ತ ಅವಕಾಶವಿದೆ. ಅದರಲ್ಲೂ ಹೂಳೆತ್ತಲು ಬೇಕಾದ ಕಾರ್ಯಯೋಜನೆಯನ್ನು ಸಿದ್ಧಪಡಿಸಿಕೊಳ್ಳಬಹುದು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅಮೃತ್‌ ಸರೋವರ ಯೋಜನೆಯಡಿ ಜಿಲ್ಲೆಯಲ್ಲಿ 75 ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಇದರ ನಿರ್ವಹಣೆಯನ್ನು ಸ್ಥಳೀಯಾಡಳಿತ ಅಥವಾ ಸಂಬಂಧಪಟ್ಟ ಇಲಾಖೆಗಳೇ ಮಾಡಬೇಕಾಗುತ್ತದೆ.
– ಪ್ರಸನ್ನ ಎಚ್‌., ಡಾ| ಕುಮಾರ್‌, ಜಿ.ಪಂ. ಸಿಇಒ ಉಡುಪಿ ಮತ್ತು ದ.ಕ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.