ಲಖೀಂಪುರ್ ಖೇರಿ ಹಿಂಸಾಚಾರ ಕೇಸ್: ಸುಪ್ರೀಂಕೋರ್ಟ್ ಸಲಹೆ ಒಪ್ಪಿದ ಉತ್ತರಪ್ರದೇಶ ಸರ್ಕಾರ
ನಾಳೆ ಸಂಜೆಯೊಳಗೆ ಹೆಸರನ್ನು ನೀಡುವಂತೆ ಸುಪ್ರೀಂಕೋರ್ಟ್ ಸಿಜೆಐ ಎನ್ ವಿ ರಮಣ ಸೂಚನೆ ನೀಡಿದ್ದಾರೆ.
Team Udayavani, Nov 15, 2021, 1:16 PM IST
ನವದೆಹಲಿ:ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ಎಸ್ ಐಟಿ ತನಿಖೆಯ ಬಗ್ಗೆ ಮೇಲ್ ವಿಚಾರಣೆ ನಡೆಸಲು ನಿವೃತ್ತ ನ್ಯಾಯಾಧೀಶರೊಬ್ಬರನ್ನು ನೇಮಕ ಮಾಡಬೇಕೆಂಬ ಸುಪ್ರೀಂಕೋರ್ಟ್ ಸಲಹೆಯನ್ನು ಒಪ್ಪಿರುವುದಾಗಿ ಉತ್ತರಪ್ರದೇಶ ಸರ್ಕಾರ ಸೋಮವಾರ (ನವೆಂಬರ್ 15) ತಿಳಿಸಿದೆ.
ಪ್ರಕರಣದ ತನಿಖೆಯನ್ನು ಕೆಳ ದರ್ಜೆಯ ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಉನ್ನತ ಶ್ರೇಣಿಯ ಐಪಿಎಸ್ ಅಧಿಕಾರಿಗಳ ಹೆಸರನ್ನು ನೀಡುವಂತೆ ಸುಪ್ರೀಂಕೋರ್ಟ್ ಹೇಳಿದೆ.
ನೀವು ಯಾಕೆ ಐಪಿಎಸ್ ಅಧಿಕಾರಿಗಳ ಹೆಸರನ್ನು ಕೊಟ್ಟಿಲ್ಲ. ನಾವು ಐಪಿಎಸ್ ಶ್ರೇಣಿಯ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದಿದ್ದೇವೆ. ಆದರೆ ಉತ್ತರಪ್ರದೇಶದವರಾಗಿರಬಾರದು. ನಾಳೆ ಸಂಜೆಯೊಳಗೆ ಹೆಸರನ್ನು ನೀಡುವಂತೆ ಸುಪ್ರೀಂಕೋರ್ಟ್ ಸಿಜೆಐ ಎನ್ ವಿ ರಮಣ ಸೂಚನೆ ನೀಡಿದ್ದಾರೆ.
ಸುಪ್ರೀಂಕೋರ್ಟ್ ಅಥವಾ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯ ಪ್ರಗತಿಯನ್ನು ಪರಿಶೀಲಿಸಲು ರಾಜ್ಯ ಸರ್ಕಾರ ನೇಮಕ ಮಾಡಬೇಕೆಂಬ ಸಲಹೆಯನ್ನು ಒಪ್ಪಿಕೊಂಡಿರುವುದಾಗಿ ಹಿರಿಯ ವಕೀಲ ಹರೀಶ್ ಸಾಳ್ವೆ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ