ಲಖೀಂಪುರ್ ಖೇರಿ: ಮಗನ ಬರ್ತ್ಡೇ ಪಾರ್ಟಿ; ಆಕಸ್ಮಿಕವಾಗಿ ಸಿಡಿದ ಗುಂಡಿಗೆ ತಾಯಿ ಬಲಿ
Team Udayavani, Dec 23, 2021, 3:12 PM IST
ಲಖೀಂಪುರ್ ಖೇರಿ: ಮಗನ ಮೂರನೇ ವರ್ಷದ ಬರ್ತ್ಡೇ ಪಾರ್ಟಿಯಲ್ಲಿ ಆಕಸ್ಮಿಕವಾಗಿ ಸಿಡಿದ ಗುಂಡು ತಗುಲಿ ತಾಯಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ನಡೆದಿದೆ.
ಅನಿತಾ ವರ್ಮಾ ಮೃತಪಟ್ಟ ಮಹಿಳೆ. ಅನಿತಾ ವರ್ಮಾ ದಂಪತಿಗಳು ತನ್ನ ಮಗನ ಮೂರನೇ ವರ್ಷದ ಹುಟ್ಟು ಹಬ್ಬವನ್ನು ತಮ್ಮ ಮನೆಯಲ್ಲಿ ಅದ್ದೂರಿಯಾಗಿ ಆಯೋಜಿಸಿದ್ದರು. ಈ ವೇಳೆ ಕೇಕ್ ಕತ್ತರಿಸುವಾಗ ಸೋದರ ಸಂಬಂಧಿಯೊಬ್ಬರು ಗಾಳಿಯಲ್ಲಿ ಗುಂಡು ಹಾರಿಸುವಾಗ ಆಕಸ್ಮಿಕವಾಗಿ ಅನಿತಾ ವರ್ಮಾಗೆ ತಗಲಿದೆ. ಕೂಡಲೇ ಅನಿತಾರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದ್ದಾರೆ.
ಅನಿತಾ ರೈತರೊರ್ವನ್ನು ವಿವಾಹವಾಗಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅನಿತಾ ಅವರ ಸೋದರ ಸಂಬಂಧಿ ಜೈರಾಂ ಮದ್ಯದ ಅಮಲಿನಲ್ಲಿದ್ದರು. ಪಾರ್ಟಿ ಮಾಡುವ ಉತ್ಸಾಹದಲ್ಲಿ ಗುಂಡು ಹಾರಿಸಿದ್ದಾರೆ. ಇದು ಆಕಸ್ಮಿಕವಾಗಿ ಅನಿತಾರವರಿಗೆ ಗುಂಡು ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು: ತಲೆಕೆಳಗಾಗಿಸಿ ನೇತು ಹಾಕಿ ಮೀನುಗಾರನಿಗೆ ಚಿತ್ರಹಿಂಸೆ; 6 ಮಂದಿ ಬಂಧನ
ಘಟನೆಗೆ ಸಂಬಂಧಿಸಿದಂತೆ ಜೈರಾಂ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಯುಪಿ ಪೋಲೀಸರ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ರಾಜ್ಯದಲ್ಲಿ ಗುಂಡು ಹಾರಾಟ ಘಟನೆಗಳನ್ನು ನಿಲ್ಲಿಸುತ್ತಿಲ್ಲ. ಇದರಿಂದಾಗಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಯುಪಿ ಲಖಿಂಪುರ ಖೇರಿಯಲ್ಲಿ ನಡೆದ ಈ ಪ್ರಕರಣ ಮುನ್ನೆಲೆಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ