ವಿವಾದಾತ್ಮಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ: ಮತ್ತೆ ಅಧ್ಯಾದೇಶ
Team Udayavani, Nov 4, 2020, 5:45 AM IST
ಬೆಂಗಳೂರು: ವಿವಾದಾತ್ಮಕ ಭೂಸುಧಾರಣೆ ತಿದ್ದುಪಡಿ ಕಾಯ್ದೆಗೆ ರಾಜ್ಯ ಸರಕಾರ ಮತ್ತೂಮ್ಮೆ ಅಧ್ಯಾದೇಶ ಹೊರಡಿಸಿದೆ.
ನೀರಾವರಿ ಜಮೀನನ್ನು ಕೃಷಿಯೇತರ ಚಟುವಟಿಕೆಗಳಿಗೆ ಖರೀದಿಸದಂತೆ ಹಾಗೂ ಎಸ್ಸಿ, ಎಸ್ಟಿ ಸಮುದಾಯದ ಜಮೀನನ್ನು ಯಾವುದೇ ಉದ್ದೇಶಕ್ಕೆ ಖರೀದಿಸಲು ಅವಕಾಶ ಇಲ್ಲದಂತೆ ಹೊಸ ಅಧ್ಯಾದೇಶವನ್ನು ಜಾರಿಗೊಳಿಸಲಾಗಿದೆ.
1974ರ ಮೂಲ ಕಾಯ್ದೆಗೆ ಜುಲೈ ತಿಂಗಳಲ್ಲಿ ತಿದ್ದುಪಡಿ ತಂದು ಸೆಕ್ಷನ್ 79ಎ, 79ಬಿ, 79ಸಿ ಕಲಂಗಳನ್ನು ರದ್ದುಪಡಿಸಿ ಆದೇಶ ಹೊರಡಿಸಿತ್ತು. ಸೆಕ್ಷನ್ 80 ಅನ್ನು ರದ್ದುಗೊಳಿಸಿ ಅಧ್ಯಾದೇಶ ಹೊರಡಿಸಿತ್ತು. ಅನಂತರ ಸೆಪ್ಟಂಬರ್ನಲ್ಲಿ ನಡೆದ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗಿತ್ತು. ಆದರೆ, ವಿಧಾನಸಭೆಯಲ್ಲಿ ವಿಪಕ್ಷಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಸ್ಸಿ /ಎಸ್ಟಿ ಸಮುದಾಯಕ್ಕೆ ಸೇರಿದವರ ಜಮೀನು ಖರೀದಿಸುವುದಕ್ಕೆ ನಿಷೇಧ, ನೀರಾವರಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಖರೀದಿಸಲು ನಿರ್ಬಂಧ ಹಾಗೂ ಒಂದು ಕುಟುಂಬದ ಸದಸ್ಯರು ಹೊಂದುವ ಜಮೀನಿನ ಮಿತಿಯನ್ನು 54 ಎಕರೆಗೆ ಮಿತಿಗೊಳಿಸಲು ರಾಜ್ಯ ಸರಕಾರ ಒಪ್ಪಿಕೊಂಡಿತ್ತು.
ಆದರೆ, ವಿಧಾನ ಪರಿಷತ್ನಲ್ಲಿ ಅಂಗೀಕಾರ ದೊರೆಯದೆ ಇದ್ದುದರಿಂದ ಸರಕಾರ ಜುಲೈಯಲ್ಲಿ ಹೊರಡಿಸಿದ್ದ ಅಧ್ಯಾದೇಶದ ಅವಧಿ ನ. 3ಕ್ಕೆ ಕೊನೆಗೊಂಡಿದೆ. ಈ ಹಿನ್ನೆಲೆಯಲ್ಲಿ ಈ ಅಧ್ಯಾದೇಶ ಮುಂದಿನ ಆರು ತಿಂಗಳು ಜಾರಿಯಲ್ಲಿರುವಂತೆ ಮತ್ತೆ ಕೆಲವು ತಿದ್ದುಪಡಿ ಮಾಡಿ ಹೊಸ ಅಧ್ಯಾದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!